Gadaga: ನಶಿಸುತ್ತಿರುವ ಕೈಮಗ್ಗ ನೇಕಾರಿಕೆಗೆ ಆರ್ಥಿಕ ಬಲ ತುಂಬಬೇಕಿದೆ: ಸಚಿವ ಎಚ್.ಕೆ. ಪಾಟೀಲ

10ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ

Team Udayavani, Aug 7, 2024, 5:17 PM IST

16-gadaga

ಗದಗ: ವರ್ಷದಿಂದ ವರ್ಷಕ್ಕೆ ಕೈಮಗ್ಗಗಳು ನಶಿಸಿ ಹೋಗುತ್ತಿದ್ದು, ಕೈಮಗ್ಗವನ್ನು ಉಳಿಸಲು ಕೈಮಗ್ಗ ನೇಕಾರರ ಬಲ, ಶಕ್ತಿ, ಆರ್ಥಿಕ ಬೆಂಬಲ ನೀಡಬೇಕಿದೆ ಎಂದು ಕಾನೂನು, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಅಭಿವೃದ್ಧಿ ಆಯುಕ್ತರು, ಜವಳಿ ಮಂತ್ರಾಲಯ ಸಂಯುಕ್ತ ಆಶ್ರಯದಲ್ಲಿ 10ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಟಗೇರಿ ಭಾಗದಲ್ಲಿನ ಕೆ.ಎಚ್.ಡಿ.ಸಿ. ನೇಕಾರರು ರಾಜ್ಯದಲ್ಲೇ ಗುಣಮಟ್ಟದ ವಸ್ತುಗಳನ್ನು ತಯಾರಿಸುತ್ತಿದ್ದರು. ವಿದೇಶಗಳಿಗೂ ರಫ್ತಾಗುತ್ತಿದ್ದವು. ಆದರೆ, ವರ್ಷದಿಂದ ವರ್ಷಕ್ಕೆ ಕೈಮಗ್ಗ ನಿಂತು ಹೋದವು. ಪಾವರ್ ಲೂಮ್ ಬದಲಾದವು. 25 ಸಾವಿರ ಇದ್ದ ಕೈಮಗ್ಗಗಳು 3 ಸಾವಿರಕ್ಕಿಳಿದವು. ಕೈಮಗ್ಗ ನೇಕಾರರ ಆದಾಯ ಕುಸಿಯಿತು. ಮುಂದಿನ ದಿನಗಳಲ್ಲಿ ಅಳಿದುಳಿದಿರುವ ಕೈಮಗ್ಗಗಳು ಉಳಿಯುತ್ತವೆ ಎಂಬುದು ಅನುಮಾನ ಮೂಡಿಸಿದೆ ಎಂದರು.

ಕೈಮಗ್ಗ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳು ಕುಣಿಮಗ್ಗವನ್ನು ನೋಡಿ ಅರ್ಥಮಾಡಿಕೊಳ್ಳಬೇಕು. ಕೈಮಗ್ಗದ ಇತಿಹಾಸ ಆರಂಭವಾಗುವುದೇ ಕುಣಿಮಗ್ಗದಿಂದ. ಕೈಮಗ್ಗದಿಂದ ಉತ್ಪಾದನೆಯಾದ ಬಟ್ಟೆಗಳು ಅತ್ಯಂತ ಗುಣಮಟ್ಟದ್ದಾಗಿವೆ. ಆದರೆ, ನಮ್ಮೆಲ್ಲರ ನಿರ್ಲಕ್ಷ್ಯದ ಪರಿಣಾಮ ಕೈಮಗ್ಗಗಳು ಅಂತ್ಯದ ಹಂತಕ್ಕೆ ಇಳಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹಿಳೆಯರು ಸೀರೆ ಉಡುವುದನ್ನು ಕಡಿಮೆ ಮಾಡಿರುವುದರಿಂದಲೂ ಕೈಮಗ್ಗ ನಶಿಸಲು ಪ್ರಮುಖ ಕಾರಣವಾಗಿದೆ. ಹೊಸಬರು ಹಬ್ಬ ಹರಿದಿನಗಳಲ್ಲಿ ಮಾತ್ರ ಸೀರೆ ಧರಿಸುವುದನ್ನು ರೂಢಿಸಿಕೊಂಡಿದ್ದಾರೆ. ಸೀರೆಯನ್ನು ಧರಿಸುವವರೇ ಇಲ್ಲದಾಗಿದೆ. ಆದ್ದರಿಂದ ಕೈಮಗ್ಗ ನೇಕಾರರು ಹೊಸ ವಿನ್ಯಾಸದ ಉಡುಪುಗಳನ್ನು ತಯಾರಿಸುವ ಮೂಲಕ ಕೈಮಗ್ಗ ನೇಕಾರಿಕೆಗೆ ಚೈತನ್ಯ ತುಂಬಬೇಕಿದೆ ಎಂದು ಹೇಳಿದರು.

 

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು. ಕೈಮಗ್ಗ ಸಲಹೆಗಾರರಾದ ವೃಂದಾ ಶೇಖರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಅಶೋಕ ಬಣ್ಣದ, ಅನಿಲ‌ ಗಡ್ಡಿ, ಶಿವಕುಮಾರ ಪಾಟೀಲ, ಮಲ್ಲಿಕಾರ್ಜುನ ಬೆಲ್ಲದ, ನಗರಸಭೆ ಮಾಜಿ ಅಧ್ಯಕ್ಷ ಬಿ.ಬಿ. ಅಸೂಟಿ, ನಗರಸಭೆ ಸದಸ್ಯೆ ಶಕುಂತಲಾ ಅಕ್ಕಿ ಸೇರಿ ಅನೇಕರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.