ಸೊಂಟ ಉಳುಕೀತು ಜೋಕೆ!

ಗದಗ-ಬೆಟಗೇರಿ ಅವಳಿ ನಗರದ ರಸ್ತೆಗಳಲ್ಲಿ ತಗ್ಗು-ಗುಂಡಿ; ಜಿಲ್ಲಾಡಳಿತ-ನಗರಾಡಳಿತಕ್ಕೆ ಹಿಡಿಶಾಪ

Team Udayavani, Jul 15, 2022, 4:54 PM IST

20

ಗದಗ: ರಸ್ತೆಯ ತುಂಬಾ ಗುಂಡಿಗಳು, ಗುಂಡಿಗಳ ತುಂಬಾ ನೀರು. ವಾಹನ ಸವಾರರು ಆಯತಪ್ಪಿ ರಸ್ತೆ ಗುಂಡಿಗಳಲ್ಲಿ ಬಿದ್ದರೆ ಸೊಂಟ ಉಳುಕೋದು ಗ್ಯಾರಂಟಿ!

ಹೌದು… ಇದು ಗದಗ-ಬೆಟಗೇರಿ ಅವಳಿ ನಗರದ ರಸ್ತೆಗಳ ವಸ್ತುಸ್ಥಿತಿ. ಹಾಗಾಗಿ, ವಾಹನ ಸವಾರರು ಹುಷಾರಾಗಿಯೇ ರಸ್ತೆಗಿಳಿಯಬೇಕಾಗಿದೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿ ರಸ್ತೆ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ರಸ್ತೆಯ ತುಂಬಾ ತಗ್ಗು-ಗುಂಡಿಗಳು ಬಿದ್ದಿದ್ದು, ದುರಸ್ತಿ ಭಾಗ್ಯ ಮಾತ್ರ ಕಂಡಿಲ್ಲ. ಗುಂಡಿಗಳಿಗೆ ಆಗಾಗ ಮಣ್ಣಿನಿಂದ ತೇಪೆ ಹಚ್ಚುವ ಕಾರ್ಯ ನಡೆಯಿತಾದರೂ ಎರಡೇ ದಿನಗಳಲ್ಲಿ ಮತ್ತೆ ಗುಂಡಿಗಳು ತೆರೆದುಕೊಳ್ಳುತ್ತ ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿವೆ.

ಗದಗ-ಪಾಲಾ-ಬದಾಮಿ ರಸ್ತೆ, ಮಹಾತ್ಮ ಗಾಂಧಿ  ಸರ್ಕಲ್‌, ಭೂಮರಡ್ಡಿ ಸರ್ಕಲ್‌, ಮುಳಗುಂದ ನಾಕಾ, ಕಳಸಾಪೂರ ರಸ್ತೆ, ಮುಳಗುಂದ ರಸ್ತೆ, ತಿಲಕ್‌ ಪಾರ್ಕ್‌ ರಸ್ತೆ, ಹಳೆ ಕೋರ್ಟ್‌ ಸರ್ಕಲ್‌, ಕಾಟನ್‌ ಸೇಲ್‌ ಸೊಸೈಟಿ ಮುಂಭಾಗ, ಹೊಸ ಬಸ್‌ ನಿಲ್ದಾಣ ರಸ್ತೆ, ಜೆ.ಟಿ. ಕಾಲೇಜು ರಸ್ತೆ ಸೇರಿದಂತೆ ಅವಳಿ ನಗರದ 35 ವಾರ್ಡ್‌ಗಳ ರಸ್ತೆಗಳು ಹದಗೆಟ್ಟಿವೆ. ಹಾಗಾಗಿ, ದ್ವಿಚಕ್ರ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸುವ ಸ್ಥಿತಿ ಬಂದೊದಗಿದೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚಾರ ಅನ್ನೋದು ನರಕವಾಗಿದೆ. ತಾಲೂಕು ಹಾಗೂ ಗ್ರಾಮಗಳಿಂದ ನಗರಕ್ಕೆ ಆಗಮಿಸುವ ಸಾರ್ವಜನಿಕರು ಕುಗ್ರಾಮಕ್ಕೆ ಬಂದಿದ್ದೇವೇನೋ ಎನ್ನುವ ಭಾವನೆ ಮೂಡುತ್ತಿದೆ. ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಪ್ರತಿನಿತ್ಯ ಜಿಲ್ಲಾಡ ಳಿತ, ನಗರಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಜಿಟಿ ಜಿಟಿ ಮಳೆಗೆ ಹಾಳಾದ ರಸ್ತೆ

ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಗದಗ-ಬೆಟಗೇರಿ ಅವಳಿ ನಗರದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಸಿಸಿ ರಸ್ತೆಗಳು ಹೊರತುಪಡಿಸಿ ಮಣ್ಣಿನ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ಬೆಟಗೇರಿ ಶರಣಬಸವೇಶ್ವರ ನಗರ, ನಾಗಮ್ಮತಾಯಿ ಬಡಾ ವಣೆ, ಮಂಜುನಾಥ ನಗರ, ವಸಂತಸಿಂಗ್‌ ಜಮಾದಾರ್‌ ನಗರ, ಕಣಗಿನಹಾಳ ರಸ್ತೆ, ಸಂಭಾಪೂರ ರಸ್ತೆ ಸೇರಿ ವಿವಿಧೆಡೆ ರಸ್ತೆಗಳು ಕೆಸರುಗದ್ದೆಯಂತಾಗಿದ್ದು, ಸಂಚಾರ ಸಂಪೂರ್ಣ ದುಸ್ತರವಾಗಿದೆ.

ಕೋಟಿ ಅನುದಾನವೆಲ್ಲಿ?

ಈ ಹಿಂದೆ ಗದಗ-ಬೆಟಗೇರಿ ಅವಳಿ ನಗರದ ರಸ್ತೆ ಸುಧಾರಣೆಗಾಗಿ 10 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅವರು ತಿಳಿಸಿದ್ದರು. ಆದರೆ, ಬಿಡುಗಡೆಯಾದ ಹಣವೆಲ್ಲಿ. ರಸ್ತೆ ಸುಧಾರಣೆಗಾಗಿ ಕೈಗೊಂಡಿರುವ ಕ್ರಮಗಳೆಲ್ಲಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಿದ್ದ ಲೋಕೋಪಯೋಗಿ ಸಚಿವರು ಜಿಲ್ಲೆಯವರಾಗಿದ್ದರೂ ಗದಗ-ಬೆಟಗೇರಿ ಅವಳಿ ನಗರದ ರಸ್ತೆಗಳ ಸುಧಾರಣೆಗೆ ಗಮನ ಹರಿಸದಿರುವುದು ದುರಂತ. ಶೀಘ್ರ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಹೋರಾಟ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ರಸ್ತೆ ದುರಸ್ತಿಗೊಳಿಸಬೇಕು. –ಅಶೋಕ ಮಂದಾಲಿ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ

ಹೆಸರಿಗೆ ಮಾತ್ರ ರಸ್ತೆ ಅಂತ ಹೇಳುತ್ತಿದ್ದೇವೆ. ಆದರೆ, ನಿಜಕ್ಕೂ ಅವು ಗುಂಡಿಗಳು. ಗದಗ-ಬೆಟಗೇರಿ ಅವಳಿ ನಗರದ ಜನರು ರಸ್ತೆಗಿಳಿಯಲು ಭಯ ಪಡುತ್ತಿದ್ದಾರೆ. ಹೆಜ್ಜೆ-ಹಜ್ಜೆಗೂ ತಗ್ಗು-ಗುಂಡಿಗಳು ವಾಹನ ಸವಾರರ ಜೀವ ಹಿಂಡುತ್ತಿವೆ. ಸಾಕಷ್ಟು ಜನರು ಗುಂಡಿಗಳಲ್ಲಿ ಬಿದ್ದು ಎದ್ದಿದ್ದಾರೆ. ಮಕ್ಕಳು, ಮಹಿಳೆಯರು, ವಯೋವೃದ್ಧರು ದಿನನಿತ್ಯ ಭಯದಿಂದಲೇ ಸಂಚರಿಸುವಂತಾಗಿದೆ. -ಚಂದ್ರಕಾಂತ ಚವ್ಹಾಣ, ರಾಜ್ಯ ಪ್ರಧಾನ ಕಾರ್ಯದರ್ಶಿ, ಜಯ ಕರ್ನಾಟಕ ಸಂಘಟನೆ

-ಅರುಣಕುಮಾರ ಹಿರೇಮಠ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.