Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
Team Udayavani, Sep 11, 2024, 8:35 PM IST
ಗದಗ: ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿಯಾಗುವ ಪ್ರಶ್ನೆಯೂ ಇಲ್ಲ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ನಮ್ಮ ನಾಯಕರು. ಅನವಶ್ಯವಾಗಿ ಗೊಂದಲ ಸೃಷ್ಟಿ ಮಾಡಬಾರದು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಮಾಧ್ಯಮಗಳಿಗೂ ಗೊತ್ತಿದೆ. ಮುಂದಿನ ಮುಖ್ಯಮಂತ್ರಿ ಚರ್ಚೆಗೆ ಇದು ಸಮಯವೂ ಅಲ್ಲ. ವಿವೇಕ ಇದ್ದವರು ಅನವಶ್ಯಕ ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.
ಅಮೆರಿಕ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರಾಹುಲ್ ಗಾಂಧಿ ಅವರನ್ನು ಎಷ್ಟೇ ಅವಹೇಳನ ಮಾಡಿದರೂ ಜನರು ಅವರನ್ನು ನಾಯಕ ಅಂತ ಗುರುತಿಸಿದ್ದಾರೆ. ರಾಹುಲ್ ಹೇಳಿಕೆ ಕೊಟ್ಟಿರುವುದನ್ನು ಗಮನಿಸಿ ತಿದ್ದಿಕೊಳ್ಳುವ ಪ್ರಯತ್ನವನ್ನು ಬಿಜೆಪಿ ಮಾಡಬೇಕು ಎಂದು ತಿರುಗೇಟು ನೀಡಿದರು.
ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಶೀಘ್ರ ಸರ್ವಪಕ್ಷದ ಸಭೆ ಕರೆದು, ನಿಯೋಗವನ್ನು ಯಾವಾಗ ಕರೆದೊಯ್ಯಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ನಮ್ಮ ಪ್ರಯತ್ನ ಯಶಸ್ವಿ ಆಗದಿದ್ದಲ್ಲಿ ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದು ಹೇಳಿದರು.
ಇದನ್ನೂ ಓದಿ: Jammu: ಕಥುವಾ ಗಡಿಯಲ್ಲಿ ಎನ್ಕೌಂಟರ್… 2 ಭಯೋತ್ಪಾದಕರ ಹತ್ಯೆ, ಶೋಧ ಕಾರ್ಯ ಮುಂದುವರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ
Delhi CM; ಕೇಜ್ರಿವಾಲ್ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.