ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ತೋಂಟದಾರ್ಯ ಮಠ ಈ ಸಾಲಿನಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತದೆ

Team Udayavani, Apr 26, 2024, 5:50 PM IST

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಉದಯವಾಣಿ ಸಮಾಚಾರ 
ಗದಗ: ಅನ್ನ-ಅಕ್ಷರ ದಾಸೋಹಕ್ಕೆ ನಾಡಿನಲ್ಲಿ ಪ್ರಸಿದ್ಧವಾಗಿರುವ ತೋಂಟದಾರ್ಯ ಮಠ ಸಮಾಜಕ್ಕೆ ಕೊಡುಗೆ ನೀಡಿದ ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಗೌರವಿಸುವುದಕ್ಕೆ ಹೆಸರುವಾಸಿಯಾಗಿದೆ ಎಂದು ಜಡೆ ಸಂಸ್ಥಾನಮಠದ ಡಾ| ಮಹಾಂತ ಸ್ವಾಮೀಜಿ ಹೇಳಿದರು.

ನಗರದ ತೋಂಟದಾರ್ಯ ಮಠದ 2024ನೇ ಸಾಲಿನ ಜಾತ್ರೋತ್ಸವದ ಲಘುರಥೋತ್ಸವ ಕಾರ್ಯಕ್ರಮದಲ್ಲಿ ಗೌರವ ಸಂಮಾನ ಸ್ವೀಕರಿಸಿ ಮಾತನಾಡಿದ ಅವರು, ಲಿಂಗೈಕ್ಯ ತೋಂಟದ ಸಿದ್ಧಲಿಂಗ ಸ್ವಾಮೀಜಿ ನನಗೆ ಮಾರ್ಗದರ್ಶಕರಾಗಿದ್ದರು. ನಾನು ಪೀಠಾ ಧಿಕಾರ ವಹಿಸಿಕೊಂಡ ದಿನದಂದು ಜಡೆ ಸಂಸ್ಥಾನಮಠದ ಸಂಪೂರ್ಣ ಇತಿಹಾಸವುಳ್ಳ ಪುಸ್ತಕವೊಂದನ್ನು ನನಗೆ ನೀಡಿ ಅಧ್ಯಯನ ಮಾಡುವಂತೆ ತಿಳಿಸಿದ್ದರು ಎಂದರು.

ಜಡೆ ಸಂಸ್ಥಾನಮಠದ ಕುಮಾರ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಮಾತನಾಡಿ, ರಾಜ್ಯ ಇಂದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಉನ್ನತ ಮಟ್ಟಕ್ಕೆ ತಲುಪಿದ್ದರೆ ಅದರ ಹಿಂದೆ ಮಠ-ಮಾನ್ಯಗಳ ಕೊಡುಗೆ ಸಾಕಷ್ಟಿದೆ. ತೋಂಟದಾರ್ಯ ಮಠ ಈ ಸಾಲಿನಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತದೆ.

ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿರುವ ತೋಂಟದ ಸಿದ್ಧರಾಮ ಶ್ರೀಗಳು ಅಪಾರ ವಿದ್ವತ್ತುಳ್ಳ ಅಪರೂಪದ ಯತಿಗಳಾಗಿದ್ದು, ಹಿರಿಯ ಸ್ವಾಮೀಜಿಗಳಿಗೆ ಅವರ ಮಾರ್ಗದರ್ಶನ ಸದಾಕಾಲ ಇರಬೇಕೆಂದರು. ದೆಹಲಿ ಜಾಟವಾ ಸಮುದಾಯದ ಶ್ರೀಮಠದ ಭಕ್ತರು ಹಾಗೂ ಕಾರ್ಪೋರೇಶನ್‌ ಅಧಿಕಾರಿಗಳಾದ ರವೀಂದ್ರ ಪ್ರಧಾನ್‌ ಮಾತನಾಡಿ, ಜಾಟವಾ ಜನಾಂಗ ಮತ್ತು ತೋಂಟದಾರ್ಯ ಮಠಕ್ಕೂ ಇರುವ ಬಾಂಧವ್ಯ ನೆನೆದರು. ಬೆಳಗಾವಿ ಶಾಲಿನಿ ದೊಡಮನಿ ರಚಿಸಿದ “ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪನವರು ಗ್ರಂಥದ ಹಿಂದಿ ಆವೃತ್ತಿ ಲೋಕಾರ್ಪಣೆಗೊಳಿಸಲಾಯಿತು.

ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಡೂರ ವಿರಕ್ತಠದ ಡಾ| ಪ್ರಭು ಸ್ವಾಮೀಜಿ, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ, ಕಲಬುರ್ಗಿ ರೋಜಾ ಹಿರೇಮಠದ ಕೆಂಚಬಸವ ಶಿವಾಚಾರ್ಯ ಸ್ವಾಮೀಜಿ, ರಟಕಲ್‌ ಹಿರೇಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಡಾ| ಮಹಾಂತಸ್ವಾಮೀಜಿ ಸಮ್ಮುಖ ವಹಿಸಿದ್ದರು. ಡಾ| ಅಶೋಕ ಹುಗ್ಗಣ್ಣವರ ವಚನ ಸಂಗೀತ ನೀಡಿದರು. ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ತೋಂಟದಾರ್ಯ ವಿದ್ಯಾಪೀಠದ
ಆಡಳಿತಾಧಿಕಾರಿ ಎಸ್‌.ಎಸ್‌. ಪಟ್ಟಣಶೆಟ್ಟರ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.