ಗದಗ: ಇಳುವರಿ ಕುಂಠಿತ- ಬಹುಪಯೋಗಿ ನಿಂಬೆ ಬಲು ದುಬಾರಿ


Team Udayavani, Mar 5, 2024, 2:52 PM IST

ಗದಗ: ಇಳುವರಿ ಕುಂಠಿತ- ಬಹುಪಯೋಗಿ ನಿಂಬೆ ಬಲು ದುಬಾರಿ

ಉದಯವಾಣಿ ಸಮಾಚಾರ
ಗದಗ: ಬೇಸಿಗೆ ಸಮೀಪಿಸುತ್ತಿರುವ ಬೆನ್ನಲ್ಲೇ ನಿಂಬೆಹಣ್ಣಿನ ದರದಲ್ಲೂ ದಿಢೀರ್‌ ಏರಿಕೆ ಕಂಡಿದೆ. ನಿಂಬೆಹಣ್ಣಿನ ಇಳುವರಿ ಕುಂಠಿತ ಹಾಗೂ ಆಮದು ಪ್ರಮಾಣದಲ್ಲಿ ಇಳಿಕೆಯಾಗಿದ್ದರ ಪರಿಣಾಮ ನಿಂಬೆಹಣ್ಣಿನ ದರದಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಕಳೆದ ಕೆಲ ದಿನಗಳ ಹಿಂದೆ ಗದಗನಕ್ಕೇರಿದ್ದ ಬೆಳ್ಳುಳ್ಳಿ ಬೆಲೆ ನಂತರ ಸುಧಾರಣೆ ಕಂಡಿತ್ತು. ಆದರೆ ನಿಂಬೆಹಣ್ಣಿನ ದರದಲ್ಲಿ ಎರಡು ಪಟ್ಟು ಹೆಚ್ಚಾಗಿದ್ದು, ಬೇಸಿಗೆ ಮುಗಿಯುವವರೆಗೆ ದರದಲ್ಲಿ ಇನ್ನೂ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮೊದಲೆಲ್ಲ 100 ನಿಂಬೆಹಣ್ಣಿಗೆ 250ರಿಂದ 300 ರೂ., ಪ್ರತಿ ನಿಂಬೆಹಣ್ಣಿಗೆ 3ರಿಂದ 5ರೂ.ಗೆ ಸಿಗುತ್ತಿದ್ದ ನಿಂಬೆಹಣ್ಣು ಸದ್ಯ ಮಾರುಕಟ್ಟೆಯಲ್ಲಿ ಸಗಟು ದರವು 100 ನಿಂಬೆಹಣ್ಣಿಗೆ 600 ರಿಂದ 650 ರೂ., ಚಿಲ್ಲರೆ ದರದಲ್ಲಿ ಪ್ರತಿ ನಿಂಬೆಹಣ್ಣಿಗೆ 7 ರಿಂದ 10 ರೂ. ನಿಗದಿಯಾಗಿದೆ. ಅಂದರೆ ದರದಲ್ಲಿ ಎರಡು ಪಟ್ಟು ಏರಿಕೆಯಾದಂತಾಗಿದೆ. ಅವಧಿ ಗೂ ಮುನ್ನವೇ ತಾಪಮಾನ ಏರಿಕೆಯಾಗಿದೆ.

ಎಲ್ಲೆಡೆ ವಿಪರೀತ ಬಿಸಿಲು, ಬಿಸಿ ಹವೆಯಿಂದ ಸಾರ್ವಜನಿಕರು ತಲ್ಲಣಗೊಂಡಿದ್ದಾರೆ. ಇದರ ಬೆನ್ನಲ್ಲೇ ನಿಂಬೆಹಣ್ಣಿನ ದರ ಹೆಚ್ಚಳವಾದಂತಾಗಿದೆ. ಬಿಸಿಲಿನ ಝಳದಿಂದ ದಾಹ ತೀರಿಸಲು ಜನರು ನಿಂಬೆ ಪಾನಕ ಕುಡಿಯುವುದು ಸಾಮಾನ್ಯ. ಆದರೆ ಈ ಬಾರಿ ಇಳುವರಿ ಹಾಗೂ ಪೂರೈಕೆ ಕೊರತೆಯಿಂದ ನಿಂಬೆಹಣ್ಣಿನ ಬೆಲೆ ಏರಿಕೆಯಾಗಿದೆ.

ಗದಗ ಜಿಲ್ಲೆಗೆ ವಿಜಯಪುರ ಸೇರಿದಂತೆ ಆಂಧ್ರ, ತೆಲಂಗಾಣ ರಾಜ್ಯಗಳಿಂದ ಮಾರುಕಟ್ಟೆಗೆ ನಿಂಬೆ ಬರುತ್ತಿದೆಯಾದರೂ ಬೇಡಿಕೆಗೆ ಅನುಗುಣವಾಗಿ ನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲವಾಗಿದೆ.

ಅಸಲು ಬಂದರೆ ಸಾಕು: ನಿಂಬೆಹಣ್ಣಿಗೆ ವರ್ಷ ಪೂರ್ತಿ ಬೇಡಿಕೆ ಇರುತ್ತದೆ. ಹಾಗಂತ ವರ್ಷ ಪೂರ್ತಿ ಬೆಲೆ ಹೆಚ್ಚಿರಲ್ಲ. ಬೇಸಿಗೆ ಬಂದಾಗಲಷ್ಟೇ ನಮಗೂ ಸ್ವಲ್ಪ ವ್ಯಾಪಾರ. ಮಾರುಕಟ್ಟೆಯಿಂದ ತರುವಾಗ ನಮಗೆ ಆರಿಸಿಕೊಳ್ಳಲು ಅವಕಾಶವಿಲ್ಲ.ಆದರೆ ಕೊಳ್ಳುವವರು ಹಣ್ಣು ಸಣ್ಣದಿದ್ದರೆ ನಾಲ್ಕು ಕೊಳ್ಳುವ ಕಡೆಗೆ 7-8 ಕೊಡುವಂತೆ ಕೇಳುತ್ತಾರೆ. ಇಲ್ಲವೆ ದೊಡ್ಡದ್ದನ್ನೇ ಹುಡುಕುತ್ತಾರೆ. ಇನ್ನು ಬೇಸಿಗೆಯಲ್ಲಿ ಹೆಚ್ಚು ದಿನ ಹಣ್ಣನ್ನು ಇಡಲು ಆಗದು. ಹೀಗಾಗಿ ಒಮ್ಮೊಮ್ಮೆ ಅಸಲು ಬಂದರೆ ಸಾಕು ಎನ್ನುವಂತಾಗುತ್ತದೆ ಎನ್ನುತ್ತಾರೆ ಚಿಲ್ಲರೆ ವ್ಯಾಪಾರಿ ಲಕ್ಷ್ಮವ್ವ ಭಜಂತ್ರಿ. ಪ್ರತಿ ಬೇಸಿಗೆಯಲ್ಲಿ ನಿಂಬೆ ಹಣ್ಣಿನ ಬೇಡಿಕೆ ಮತ್ತು ಬೆಲೆ ಹೆಚ್ಚಾಗುವುದು ಸಹಜ. ಆದರೆ ಕಳೆದ ರಾಜ್ಯಾದ್ಯಂತ ಬರ ಆವರಿಸಿದ್ದರ ಪರಿಣಾಮ ಈ ಬಾರಿ ಇಳುವರಿಯೂ ಕಡಿಮೆಯಾಗಿದೆ. ಇದರಿಂದಾಗಿ ನಿಂಬೆ ಜ್ಯೂಸ್‌ಗೆ 15-15ರೂ., ನಿಂಬು ಸೋಡಾ 20-25 ರೂ. ಆಗಿದೆ. 10 ರೂ. ಇದ್ದ ಬೀದಿ ಬದಿ ಮಾರುವ ಗೋಲಿ ಸೋಡಾ ಈಗ 25 ರೂ. ಗೆ ಏರಿದೆ.

ಧಾರ್ಮಿಕ ಕಾರ್ಯಗಳಿಗೆ ಬಳಕೆ:
ನಿಂಬೆಹಣ್ಣನ್ನು ವಿವಿಧ ಧಾರ್ಮಿಕ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಅಮಾವಾಸ್ಯೆ, ಹುಣ್ಣಿಮೆ, ಶುಕ್ರವಾರ, ಮಂಗಳವಾರ ಹಾಗೂ ಭಾನುವಾರ ಹೀಗೆ ವಿವಿಧ ಸಮಯಗಳಲ್ಲಿ ಪೂಜೆಗೆಂದು ನಿಂಬೆ ಹಣ್ಣನ್ನು ಬಳಸಲಾಗುತ್ತದೆ. ಹೀಗಾಗಿ ದೇವಸ್ಥಾನಗಳ ಸುತ್ತಮುತ್ತಲಿನ ಕೆಲ ವ್ಯಾಪಾರಿಗಳು ಈ ದಿನಗಳಂದು ನಿಂಬೆಹಣ್ಣಿನ ಬೆಲೆಯನ್ನು ಮತ್ತಷ್ಟು ಹೆಚ್ಚಿಸುತ್ತಾರೆ.

ನಿಂಬೆ ದರ
ಸಗಟು ದರ: 100 ಹಣ್ಣಿಗೆ 600 ರಿಂದ 650 ರೂ.
ಚಿಲ್ಲರೆ ದರ: ಪ್ರತಿ ಹಣ್ಣಿಗೆ 7 ರಿಂದ 10 ರೂ.

ಬಾಯಾರಿಕೆಯಾದಾಗ ನಿಂಬೆ ಪಾನೀಯ ಕುಡಿದರೆ ಬಾಯಾರಿಕೆ ಕಡಿಮೆಯಾಗುವುದು. ದೇಹಕ್ಕೂ ಚೈತನ್ಯ ತುಂಬುತ್ತದೆ. ದೇಹ ತಂಪಾಗಿಡುತ್ತದೆ. ಸಾಮಾನ್ಯವಾಗಿ ಬೇಸಿಗೆ ದಿನಗಳಲ್ಲಿ ದೇಹ ನಿರ್ಜಲೀಕರಣದಿಂದ ತಪ್ಪಿಸಲು ನಿಂಬೆ ಹಣ್ಣನ್ನು ಬಹಳವಾಗಿ ಬಳಸುತ್ತೇವೆ. ಇದು ದೇಹವನ್ನು ತಂಪಾಗಿ ಇಡುವಲ್ಲಿಯೂ ಸಹಕಾರಿ. ದೇಹಕ್ಕೂ ಚೈತನ್ಯ ನೀಡುತ್ತದೆ.
ಡಾ|ಮಹೇಶ ಹಿರೇಮಠ, ವೈದ್ಯ

ಪ್ರಸಕ್ತ ಬೇಸಿಗೆಯಲ್ಲಿ ನಿಂಬೆಹಣ್ಣಿನ ಇಳುವರಿ ಹಾಗೂ ಪೂರೈಕೆ ಕುಂಠಿತಗೊಂಡಿದ್ದರಿಂದ ನಿಂಬೆಹಣ್ಣಿನ ದರದಲ್ಲಿ ಏರಿಕೆ ಕಂಡು ಬಂದಿದ್ದು, ಮಳೆಗಾಲ ಆರಂಭವಾಗುವವರೆಗೂ ನಿಂಬೆಹಣ್ಣಿನ ದರದಲ್ಲಿ ಇಳಿಕೆಯಾಗುವುದು ಕಷ್ಟ.
ನಿಂಗಪ್ಪ ಬಟ್ಟೂರ, ನಿಂಬೆಹಣ್ಣಿನ ವ್ಯಾಪಾರಿ.

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.