ಗೌಡರ ಪರ ಗೌಡ್ತಿಯರ ಪ್ರಚಾರ..!


Team Udayavani, Apr 8, 2019, 1:28 PM IST

gad-2
ಗದಗ: ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶತಾಯಗತಾಯವಾಗಿ ಗೆಲುವು ಸಾಧಿಸಲು ರಣತಂತ್ರವನ್ನೇ ಹೆಣೆದಿರುವ ಕಾಂಗ್ರೆಸ್‌ ಜಿಲ್ಲೆಯ ಹಿರಿಯ ನಾಯಕ ಡಿ.ಆರ್‌. ಪಾಟೀಲ ಅವರನ್ನು ಕಣಕ್ಕಿಳಿಸಿದೆ. ಇನ್ನು ಗದಗ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡಿ.ಆರ್‌. ಪಾಟೀಲರ ಕುಟುಂಬದ ಮಹಿಳೆಯರು ಪ್ರಚಾರ ಕಣಕ್ಕಿಳಿದಿದ್ದರಿಂದ ಕದನ ಕಣ ಮತ್ತಷ್ಟು ರಂಗು ಪಡೆದಿದೆ.
ಬೇಸಿಗೆಯ ಬಿಸಿಲಿನ ಪ್ರಖರದೊಂದಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಕಾವೇರುತ್ತಿದೆ. ಕಳೆದ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿರುವ ಬಿಜೆಪಿಗೆ ಈ ಬಾರಿ ಸೋಲಿನ ರುಚಿ ತೋರಿಸಲು ಕೈ ಪಡೆ ನಿರ್ಧರಿಸಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ ಅವರ ಸಹೋದರ ಪುತ್ರ, ಮಾಜಿ ಶಾಸಕ ಡಿ.ಆರ್‌. ಪಾಟೀಲ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರಿಂದ ಕಾಂಗ್ರೆಸ್‌ ಹಾಗೂ ಎಚ್ಕೆ ಕುಟುಂಬಕ್ಕೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ಪ್ರಚಾರಕ್ಕೆ ಬಂದ ಗೌಡ್ತಿಯರು: 1962ರಲ್ಲಿ ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಕೆ.ಎಚ್‌. ಪಾಟೀಲರು ಚುನಾವಣಾ ರಾಜಕಾರಣಕ್ಕೆ ಧುಮುಕಿ ಸೋಲು ಕಂಡಿದ್ದರು. ಬಳಿಕ 1967ರಲ್ಲಿ ಪಕ್ಷೇತರರಾಗಿ, 1972ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತತ ಗೆಲುವು ಸಾಧಿಸಿದ್ದರು. ಒಟ್ಟು 7 ಬಾರಿ ಸ್ಪರ್ಧೆಗಳಿದಿದ್ದ ಅವರು, ನಾಲ್ಕು ಬಾರಿ ವಿಧಾನಸಭೆ ಪ್ರವೇಶಿಸಿದ್ದರು. 1992ರಲ್ಲಿ ಕೆ.ಎಚ್‌. ಪಾಟೀಲ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ
ಚುನಾವಣಾಯಲ್ಲಿ ಸ್ಪರ್ಧಿಸಿದ್ದ ಕೆ.ಎಚ್‌. ಪಾಟೀಲರ ಸಹೋದರ ಪುತ್ರ ಡಿ.ಆರ್‌. ಪಾಟೀಲ ಮೊದಲ ಪ್ರಯತ್ನದಲ್ಲೇ ಗೆಲುವಿನ ನಗೆ ಬೀರಿದ್ದರು. ಬಳಿಕ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮುನ್ನ ಡಿ.ಆರ್‌. ಪಾಟೀಲ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದರು.
ಅದರಂತೆ ನಾಲ್ಕು ಬಾರಿ ವಿಧಾನಪರಿಷತ್‌ ಸದಸ್ಯರಾಗಿದ್ದ ಎಚ್‌.ಕೆ. ಪಾಟೀಲ ಅವರು 2008ರಲ್ಲಿ ಮೊದಲ ಬಾರಿಗೆ ಗದಗ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ 2013 ಮತ್ತು 2018ರ ವಿಧಾನಸಭೆ ಚುಣಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಆದರೆ, ಯಾವುದೇ ಚುನಾವಣೆಯಲ್ಲೂ ಹುಲಕೋಟಿ ಗೌಡರ ಕುಟುಂಬಸ್ಥರು ಚುನಾವಣಾ ಪ್ರಚಾರಕ್ಕಿಳಿದಿರಲಿಲ್ಲ. ಇದೇ ಮೊದಲ ಬಾರಿಗೆ ಹುಲಕೋಟಿ ಗೌಡ್ತಿಯರು ಚುನಾವಣಾ ಪ್ರಚಾರ ಕಣಕ್ಕಿಳಿಯುವ ಮೂಲಕ ಪಕ್ಷದ ಕಾರ್ಯಕರ್ತರೂ ಸೇರಿದಂತೆ ಕ್ಷೇತ್ರದ ಮತದಾರರನ್ನೂ ಬೆರಗಾಗಿಸಿದ್ದಾರೆ.
ಕ್ಷೇತ್ರದ ವಿವಿಧೆಡೆ ಮತಯಾಚನೆ: ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ ಈಗಾಗಲೇ ಕ್ಷೇತ್ರದಲ್ಲಿ ಒಂದಿನ ಸುತ್ತಿನ ಪ್ರಚಾರ ಕಾರ್ಯ ಪೂರ್ಣಗೊಳಿಸಿದ್ದಾರೆ. ಡಿ.ಆರ್‌. ಪಾಟೀಲರನ್ನು ಗೆಲ್ಲಿಸಬೇಕು ಎಂದು ಪಣ ತೊಟ್ಟಿರುವ ಪಕ್ಷದ ಕಾರ್ಯರ್ತರೊಂದಿಗೆ ಅವರ ಕುಟುಂಬಸ್ಥರೂ ಕೈಜೋಡಿಸಿದ್ದಾರೆ. ಈಗಾಗಲೇ ಡಿ.ಆರ್‌. ಪಾಟೀಲರ ಪುತ್ರ ಸಚಿನ್‌ ಪಾಟೀಲ, ಸಂತೋಷ ಪಾಟೀಲ ಹಾಗೂ ಸಹೋದರರೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಅದರೊಂದಿಗೆ ಯುಗಾದಿ ಹಬ್ಬದ ನಿಮಿತ್ತ ಶನಿವಾರ ಸಂಜೆ ಬೆಟಗೇರಿ ಸೆಟ್ಲಮೆಂಟ್‌ ಮಾರುತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸೊಸೆಯಂದಿರೂ ಪ್ರಚಾರಕ್ಕೆ ಚಾಲನೆ ನೀಡಿದರು. ಡಿ.ಆರ್‌.ಪಾಟೀಲ ಅವರ ಸಹೋದರಿ ಸುನಂದಾ, ಸೊಸೆಯಂದಿರಾದ ತೃಪ್ತಿ ಸಂತೋಷ ಪಾಟೀಲ, ಲಕ್ಷ್ಮೀ ಅರವಿಂದ ಪಾಟೀಲ, ರಾಜೇಶ್ವರಿ ಪಾಟೀಲ ಸಹೋದರ
ಸಂಬಂಧಿಗಳೊಂದಿಗೆ ಗದಗಿನ ವಾರ್ಡ್‌ ನಂ. 3 ಮತ್ತು 4 ಸೇರಿದಂತೆ ಅವಳಿ ನಗರದ ವಿವಿಧೆಡೆ ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು. ಈ ವೇಳೆ ಕಾಂಗ್ರೆಸ್‌ ಸಾಧನೆಗಳು ಮತ್ತು ಗದಗ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತ ಬೇಡಿದರು.
ಬಹುತೇಕ ತಮ್ಮ ಕುಟುಂಬ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಪಾಟೀಲ ಕುಟುಂಬದ ನಾರಿಮಣಿಯರು, ಇದೀಗ ಚುನಾವಣಾ ಪ್ರಚಾರದ ಮೂಲಕ ಸಾರ್ವಜನಿಕರ ಗಮನ ಸೆಳೆಯುತ್ತಿದ್ದಾರೆ.
ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹಾಗೂ ಅನುಭವಿ ರಾಜಕಾರಣಿಯಾಗಿರುವ ಡಿ.ಆರ್‌. ಪಾಟೀಲ ಆಯ್ಕೆಯಿಂದ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಯಾಗುತ್ತದೆ. ಅವರ ಗೆಲುವಿಗಾಗಿ ನಾವು ಸಾಮಾನ್ಯ ಕಾರ್ಯರ್ತರಂತೆ ದುಡಿಯುತ್ತಿದ್ದೇವೆ. ಮತಯಾಚನೆ ಮಾಡಿದ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಡಿ.ಆರ್‌.ಪಾಟೀಲ ಅವರ ಗೆಲುವು ನಿಶ್ಚಿತ.
ಲಕ್ಷ್ಮೀ ಪಾಟೀಲ, ಡಿ.ಆರ್‌. ಪಾಟೀಲರ ಸೊಸೆ
„ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.