ಕೆಂಪಗೆರಿ ಜಲಾಶಯ ಸುತ್ತ ಅಂತರ್ಜಲ ವಕ್ರ ದೃಷ್ಟಿ


Team Udayavani, Nov 17, 2019, 12:06 PM IST

gadaga-tdy-3

ನರಗುಂದ: ಪಟ್ಟಣದ ಐದು ಬಡಾವಣೆಗಳಲ್ಲಿ ತೀವ್ರ ಭೂಕುಸಿತಕ್ಕೆ ಕಾರಣವಾದ ಅಂತರ್ಜಲದ ವಕ್ರದೃಷ್ಟಿ ಪಟ್ಟಣದ ಕುಡಿಯುವ ನೀರಿನ ಕೆಂಪಗೆರಿ ಜಲಾಶಯ ಸುತ್ತ ಆವರಿಸಿದೆ. ದಶಕಗಳ ಕಾಲ ಜನರ ದಾಹ ನೀಗಿಸಿದ ಈ ಜಲಾಶಯದ ಅಸ್ತಿತ್ವಕ್ಕೆ ಭೂ ವಿಜ್ಞಾನಿಗಳ ಸೂಚನೆಯಿಂದಾಗಿ ಪೆಟ್ಟು ಬೀಳುವ ಕಾಲ ಸನ್ನಿಹಿತವಾಗಿದೆ.

ಕಳೆದ ತಿಂಗಳು ಅಧ್ಯಯನ ನಡೆಸಿದ ಹಾಗೂ 2009ರಲ್ಲಿ ಅಧ್ಯಯನ ನಡೆಸಿದ್ದ ಭೂ ವಿಜ್ಞಾನಿಗಳ ಅಭಿಪ್ರಾಯದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಕಾರಣವಾದ ಪ್ರಮುಖ ಮೂರು ಅಂಶಗಳಲ್ಲಿ ಕೆಂಪಗೆರಿ ಜಲಾಶಯವೂ ಒಂದಾಗಿದೆ.

23 ವರ್ಷಗಳ ಹಿನ್ನೆಲೆ: ದಶಕಗಳ ಹಿಂದೆ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲು ಪಟ್ಟಣದ ಸಿದ್ಧೇಶ್ವರ ಗುಡ್ಡದ ವಾರೆಯಲ್ಲಿ ಎತ್ತರ ಪ್ರದೇಶದಲ್ಲಿ 1996ರಲ್ಲಿ ಈ ಜಲಾಶಯ ನಿರ್ಮಾಣವಾಗಿದೆ. ಆಗ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. 59.50 ಎಕರೆ ಪ್ರದೇಶದಲ್ಲಿ ನಿರ್ಮಿತ ಜಲಾಶಯ ಪಕ್ಕದಲ್ಲೇ ನೀರು ಶುದ್ಧೀಕರಣ ಘಟಕವಿದೆ. 23ವರ್ಷಗಳಿಂದ ಇದೇ ಜಲಾಶಯದಿಂದ ಪಟ್ಟಣಕ್ಕೆ ನಲ್ಲಿ ಮೂಲಕ ನೀರು ಪೂರೈಸಲಾಗುತ್ತಿತ್ತು. ಕಳೆದ ವರ್ಷ ಪಟ್ಟಣಕ್ಕೆ ನವಿಲುತೀರ್ಥ ಜಲಾಶಯದಿಂದ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡುವ 24×7 ಯೋಜನೆ ಅನುಷ್ಠಾನ ಬಳಿಕ ಜಲಾಶಯದಿಂದ ನೀರಿನ ಬಳಕೆ ಸ್ಥಗಿತ ಮಾಡಲಾಗಿತ್ತು. ಇದೀಗ ವಿಜ್ಞಾನಿಗಳ ಸೂಚನೆ ಮೇರೆಗೆ ಜಲಾಶಯ ನೀರನ್ನು ಖಾಲಿ ಮಾಡಲು ಪುರಸಭೆ ಮುಂದಾಗಿದೆ.

ಸೋರಿಕೆ ಹಿನ್ನೆಲೆ: ಜಲಾಶಯ ನಿರಂತರ ಸೋರಿಕೆಯಲ್ಲಿ ಗುರುತಿಸಿಕೊಂಡಿದೆ. 2009ರಲ್ಲಿ ಐದು ಬಡಾವಣೆಗಳಲ್ಲಿ ಭೂಕುಸಿತ ಘಟನೆಗಳಿಂದ ಅಧ್ಯಯನ ನಡೆಸಿದ ಭೂ ವಿಜ್ಞಾನಿಗಳ ತಂಡ ಅಂತರ್ಜಲ ಹೆಚ್ಚಳದಿಂದ ಈ ಸಮಸ್ಯೆ ಎದುರಾಗಿದೆ. ಕೆಂಪಗೆರಿ ಜಲಾಶಯ, ಗುಡ್ಡದ ಮೇಲ್ಭಾಗ ಬಿರುಕು, ಚರಂಡಿಗಳ ಸೋರಿಕೆಯಿಂದ ಅಪಾರ ಪ್ರಮಾಣ ನೀರು ಇಂಗುವಿಕೆ ಅಂತರ್ಜಲ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅಧ್ಯಯನ ವರದಿ ನೀಡಿದ್ದು ಸ್ಮರಿಸಬಹುದು.

2019ರಲ್ಲೂ ಅಧ್ಯಯನ: ಮತ್ತೆ ಭೂಕುಸಿತ ಘಟನೆಗಳ ಹಿನ್ನೆಲೆಯಲ್ಲಿ ಅ. 30, 31ರಂದು ಅಧ್ಯಯನ ನಡೆಸಿದ ಭೂ ವಿಜ್ಞಾನಿಗಳ ತಂಡದ ಬಳಿಕ ಸ್ಥಳಕ್ಕಾಗಮಿಸಿದ ಗಣಿಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ಶಶಿಕಾಂತ ರೆಡ್ಡಿ ಅವರು ಕೆಂಪಗೆರಿ ಜಲಾಶಯದತ್ತ ಬೊಟ್ಟು ತೋರಿಸಿದ್ದಲ್ಲದೇ ಜಲಾಶಯ ನೀರು ಖಾಲಿ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದು, ಅಂತರ್ಜಲ ದೃಷ್ಟಿ ಕೆಂಪಗೆರಿ ಮೇಲೆ ವಕ್ಕರಿಸಿದ್ದಕ್ಕೆ ಸಾಕ್ಷಿಯಾಗಿದೆ. ಸಾಲದೆಂಬಂತೆ ಕೆಂಪಗೆರಿ ಜಲಾಶಯ ಸುತ್ತ ಇರುವ ಕಂದಕದಲ್ಲಿ ಪತ್ತೆಯಾದ ಅಪರೂಪದ ಕಲ್ಲೊಂದನ್ನು ಗುರುತಿಸಿದ ವಿಜ್ಞಾನಿಗಳ ತಂಡ ಅದು ಡೊಲೋರೇಟ್‌ ಕಲ್ಲು ಎಂದು ಕರೆದಿದ್ದಾರೆ. ಈ ಕಲ್ಲು ಸಾಗಿದಲ್ಲೆಲ್ಲ ತಡೆಗೋಡೆಯಂತೆ ನಿರ್ಮಾಣವಾಗಿ ಅಂತರ್ಜಲ ಮತ್ತೂಂದು ಬದಿಗೆ ಹರಿ ಬಿಡುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು ಕೂಡ ಕೆಂಪಗೆರಿ ಸುತ್ತ ವಿಜ್ಞಾನಿಗಳ ದೃಷ್ಠಿ ನೆಟ್ಟಿದ್ದು ನಿದರ್ಶನವಾಗಿದೆ.

ಕೆರೆ ಸೋರಿಕೆ: ಕೆಂಪಗೆರಿ ಜಲಾಶಯ ಸೋರಿಕೆಗೆ ಪಕ್ಕದ ಸೋಮಾಪುರ ಕಾಲುವೆಯಲ್ಲಿ ನಿರಂತರ ಸಣ್ಣಗೆ ನೀರು ಹರಿಯುತ್ತಿರುವುದು ಮತ್ತು ಕಾಲುವೆ ಆಚೆಗೆ ಕೆಲ ರೈತರ ಜಮೀನುಗಳು ನಿರಂತರ ತೇವಾಂಶದಿಂದ ಸವಳು ಭೂಮಿಯಾಗಿ ಪರಿವರ್ತನೆಗೊಂಡಿದ್ದು ವಿಪರ್ಯಾಸ. ಹೀಗಾಗಿ 23 ವರ್ಷಗಳ ಕಾಲ ಜನರ ದಾಹ ನೀಗಿಸಿದ ಕೆಂಪಗೆರಿ ಜಲಾಶಯ ತನ್ನ ಅಸ್ತಿತ್ವ ಕಳೆದುಕೊಳ್ಳಲಿದ್ದು, ಇದು ತುಂಬಿ ನಿಲ್ಲುವಷ್ಟು ಭೂಕುಸಿತಕ್ಕೆ ದಾರಿಯಾಗುತ್ತಿದೆ ಎಂಬ ವಿಜ್ಞಾನಿಗಳ ಅಭಿಪ್ರಾಯ ಇದನ್ನು ಸಾಕ್ಷೀಕರಿಸಿದೆ.

 

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.