ಗುರುವಿನ ಮಾರ್ಗದರ್ಶನ ಅವಶ್ಯ

•ಜಾತ್ರಾ ಮಹೋತ್ಸವ-ಪುರಾಣ ಮಂಗಲ•ಕೊಟ್ಟೂರೇಶ್ವರ ಪುರಾಣ ಗ್ರಂಥ ಬಿಡುಗಡೆ

Team Udayavani, Jun 29, 2019, 1:22 PM IST

gadaga-tdy-5..

ಗದಗ: ಹರ್ಲಾಪುರ ಗ್ರಾಮದಲ್ಲಿ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪುರಾಣ ಮಂಗಲ ಹಾಗೂ ಕೊಟ್ಟೂರೇಶ್ವರರ ಪುರಾಣ ಗ್ರಂಥ ಬಿಡುಗಡೆ ಸಮಾರಂಭವನ್ನು ಜ| ತೋಂಟದ ಸಿದ್ಧರಾಮ ಸ್ವಾಮೀಜಿ ಉದ್ಘಾಟಿಸಿದರು.

ಗದಗ: ಗುರುವಿನ ಗುಲಾಮನಾಗಿ ಗುರು ಮಾರ್ಗದರ್ಶನದಲ್ಲಿ ನಡೆದರೆ ಮಾತ್ರ ಜೀವನದಲ್ಲಿ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಹಠಯೋಗಿ ಕೊಟ್ಟೂರೇಶ್ವರರು ಗುರುವಿನಿಂದಲೇ ಸಾಧಕರಾಗಿದ್ದರು ಎಂದು ಡಂಬಳ-ಗದಗ ತೋಂಟದಾರ್ಯ ಸಂಸ್ಥಾನಮಠದ ಜ| ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪುರಾಣ ಮಂಗಲ ಹಾಗೂ ಕೊಟ್ಟೂರೇಶ್ವರರ ಪುರಾಣ ಗ್ರಂಥ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವ್ಯಕ್ತಿಯ ಬದುಕಿಗೆ ಗುರುವೇ ನಿಜವಾದ ಆಸರೆ. ಗುರುವಿನ ಸೇವೆಯಿಂದ ಸಾರ್ಥಕ ಬದುಕು ಕಾಣಬಹುದು. ಸಾಮಾಜಿಕ ಸುಧಾರಣೆಗಾಗಿ ಹರ್ಲಾಪುರದ ಲಿಂ| ಕೊಟ್ಟೂರೇಶ್ವರರ ಹಾದಿಯಲ್ಲಿಯೇ ಶ್ರೀಮಠದ ಇಂದಿನ ಯುವ ಮಠಾಧಿಪತಿಗಳೂ ಸಮಾಜದಲ್ಲಿ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಮುರಗೋಡ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ ಮಾತನಾಡಿ, ಈ ಕ್ಷೇತ್ರ ಪುಣ್ಯ ಕ್ಷೇತ್ರವಾಗಿದ್ದು, ಭಕ್ತಿಯ ಭಾವನೆಯನ್ನು ಶ್ರೀಗಳು ಭಕ್ತರಲ್ಲಿ ತುಂಬುತ್ತಿದ್ದಾರೆ ಎಂದರು.

ಕನಕಗಿರಿಯ ಸುವರ್ಣಗಿರಿ ವಿರಕ್ತಮಠದ ಚನ್ನಮಲ್ಲ ಸ್ವಾಮಿಗಳು ಮಾತನಾಡಿ, ಇಂದು ಧರ್ಮದಿಂದ ನಡೆಯುವ ಜನ ಕ್ಷೀಣಿಸುತ್ತಿದೆ. ಧರ್ಮದ ಹಾದಿಯಲ್ಲಿ ನಡೆಯಲು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು ಅವಶ್ಯವಾಗಿದೆ ಎಂದರು.

ಕೊಟ್ಟೂರೇಶ್ವರರ ಪುರಾಣ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಬೆಂಗಳೂರು ಮಿರಾಂಡ ಶಿಕ್ಷಣ ಸಂಸ್ಥೆಯ ಎಸ್‌.ಎನ್‌. ಕಾತರಕಿ, ಗುರು ಪರಂಪರೆಯಿಂದ ಬೆಳೆದು ಬಂದ ಶ್ರೀಮಠ, ಸಮಾಜಕ್ಕೆ ಉತ್ತಮ ಸಂಸ್ಕಾರವನ್ನು ನೀಡುತ್ತಿದೆ. ಈ ದಿಸೆಯಲ್ಲಿ ಇಂದಿನ ಶ್ರೀಗಳು ಈ ಭಾಗದಲ್ಲಿ ಯುವ ಸಮುದಾಯವನ್ನು ಸರಿ ಮಾರ್ಗದಲ್ಲಿ ಮುನ್ನಡೆಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಕೊಟ್ಟೂರೇಶ್ವರರ ಪುರಾಣ ಗ್ರಂಥವನ್ನು ರಚಿಸಿದ ಬೆಟಗೇರಿಯ ರಾಮಣ್ಣ ಬ್ಯಾಟಿ ಗ್ರಂಥ ದಾನಿಗಳಾದ ಕೊಟ್ರಪ್ಪ ವೀರಭದ್ರಪ್ಪ ಯಾಳವಾಡ ದಂಪತಿ ಹಾಗೂ ಗ್ರಂಥ ರಚನೆಗೆ ಸಹಕರಿಸಿದ ಶಂಭು ನೀರಲಗಿ ಅವರನ್ನು ಸನ್ಮಾನಿಸಲಾಯಿತು.

ಜಾತ್ರಾ ಮಹೋತ್ಸವ ಅಂಗವಾಗಿ ಕಳೆದ 26 ದಿನಗಳಿಂದ ನಡೆದ ಕಲಬುರ್ಗಿ ಶರಣ ಬಸವೇಶ್ವರ ಪ್ರವಚನವನ್ನು ಸದಾನಂದ ಶಾಸ್ತ್ರೀಗಳು ಮಂಗಲಗೊಳಿಸಿದರು.

ಕೊಟ್ಟೂರೇಶ್ವರ ಸ್ವಾಮೀಜಿ, ಗುರುಪಾದ ಶಿವಾಚಾರ್ಯ ಸ್ವಾಮೀಜಿ, ಸದಾಶಿವಯ್ಯ ಮದರಿಮಠ, ಮಲ್ಲೇಶ ಹುಲಕೋಟಿ, ಚಂದ್ರಶೇಖರ ದೇವರು, ಮಹೇಶ ದೇವರು, ಗುರುಲಿಂಗ ದೇವರು, ಕೊಟ್ಟೂರೇಶ್ವರ ಶ್ರೀಗಳು, ರಾಜು ಕುರಡಗಿ, ನಿಂಗಪ್ಪ ಹಿರೇಹಾಳ ವೇದಿಕೆಯಲ್ಲಿದ್ದರು.

ಡಾ| ಎಸ್‌.ಸಿ. ಸರ್ವಿ ಸ್ವಾಗತಿಸಿದರು. ಕೆ.ಬಿ. ಕೊಣ್ಣೂರ ನಿರೂಪಿಸಿದರು. ಕೆ.ಆರ್‌. ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮಣ್ಣ ಬೆಳಧಡಿ ವಂದಿಸಿದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.