ಗದಗದಲ್ಲಿ ಮಳೆಯ ರೌದ್ರನರ್ತನ: ಸಾರ್ವಜನಿಕರು, ರೈತರು ಕಂಗಾಲು; ಮಹಿಳೆ ಬಲಿ


Team Udayavani, Sep 6, 2022, 11:50 AM IST

ಗದಗದಲ್ಲಿ ಮಳೆಯ ರೌದ್ರನರ್ತನ: ಸಾರ್ವಜನಿಕರು, ರೈತರು ಕಂಗಾಲು; ಮಹಿಳೆ ಬಲಿ

ಗದಗ: ಜಿಲ್ಲೆಯಲ್ಲಿ ಮಳೆರಾಯನ ರೌದ್ರನರ್ತನ ಮುಂದುವರೆದಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದೆ. ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಹೊಲದಿಂದ ಮನೆಗೆ ವಾಪಸಾಗುವ ವೇಳೆ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಮಂಗಳವಾರ ಬೆಳಿಗ್ಗೆ ಹಳ್ಳಿಕೇರಿ-ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಸೇತುವೆಯ ಹಳ್ಳದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಹಳ್ಳಿಕೇರಿಯ ನಾಗಮ್ಮ ಯಂಕಪ್ಪ ಕವಲೂರು (48) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುರಿದ ಧಾರಾಕಾರ ಮಳೆಯಿಂದ ಸೋಮವಾರ ರಾತ್ರಿಯಿಡಿ ಸಂಕಷ್ಟ ಅನುಭವಿಸಿದರು. ಬೆಟಗೇರಿ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ, ಅಂಬೇಡ್ಕರ್ ನಗರ, ಭಜಂತ್ರಿ ಓಣಿ, ನರಸಾಪೂರ, ಖಾದಿ ನಗರ, ಗದಗನ ಎಸ್.ಎಂ. ಕೃಷ್ಣ ನಗರ, ಗಂಗಿಮಡಿ ಸೇರಿ ವಿವಿಧೆಡೆ ಮನೆಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು, ಬಟ್ಟೆಗಳು, ಪಿಠೋಪಕರಣಗಳು ಮಳೆಗೆ ಹಾನಿಯಾದವು. ರಾತ್ರಿಯಿಡಿ ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಹರಸಾಹಸ ಪಡಬೇಕಾಯಿತು.

ಗದಗ ತಾಲೂಕಿನ ಮದಗಾನೂರ ಗ್ರಾಮದ ಬಳಿಯಿರುವ ಸವಳಹಳ್ಳ ಹಾಗೂ ಸಿಹಿಹಳ್ಳ ಉಕ್ಕಿ ಹರಿದು ಊರೊಳಗೆ ಹೊಕ್ಕ ಪರಿಣಾಮ ರಾತ್ರಿಯೆಲ್ಲ ಗ್ರಾಮಸ್ಥರು ಪರದಾಡುವಂತಾಗಿದೆ. ರೈತರು ಒಕ್ಕಲು ಮಾಡಿಟ್ಟಿದ್ದ ಧಾನ್ಯಗಳ ರಾಶಿಗಳೆಲ್ಲ ಹಾಳಾಗಿದ್ದು, ದಿನಬಳಕೆ ವಸ್ತುಗಳು ನೀರಲ್ಲಿ ಹೋಮ ಮಾಡಿದಂತಾದವು. ಒಂದೆಡೆ ಜಮೀನಿನಲ್ಲಿ ಬೆಳೆದ ಈರುಳ್ಳಿ, ಶೇಂಗಾ, ಮೆಣಸಿನಕಾಯಿ ಹಳ್ಳದ ರಭಸಕ್ಕೆ ಕೊಚ್ಚಿ ಹೋದರೆ, ಮತ್ತೊಂದೆಡೆ ಜಾನುವಾರುಗಳಿಗಾಗಿ ಸಂಗ್ರಹಿಸಿಟ್ಟ ಹೊಟ್ಟು-ಮೇವಿನ ಬಣವೆಗಳೆಲ್ಲ ನೀರಲ್ಲಿ ತೇಲಾಡಿದವು.

ಮಳೆಗೆ ಕೊಚ್ಚಿ ಹೋದ ಅಟೋರಿಕ್ಷಾ: ಗದಗ ತಾಲೂಕಿನ ಹುಲಕೋಟಿ ಗ್ರಾಮದ ಹರ್ತಿ ರಸ್ತೆ ಮಾರ್ಗದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಯತ್ನಿಸಿದ ಅಟೋರಿಕ್ಷಾ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಶಾತ್ ಅಟೋದಲ್ಲಿದ್ದ ಚಾಲಕ ಕರಿಯಪ್ಪ ಕರಿಯಣ್ಣವರ, ಮಗ ಪ್ರವೀಣ, ಒಂದು ವರ್ಷದ ಮಗು ಸಾನ್ವಿ ಹಾಗೂ ಪ್ರಯಾಣಿಕ ಗುರಪ್ಪ ಕೊಂಡಿಕೊಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಚ್ಚಿಹೋದ ಅಟೋರಿಕ್ಷಾ ಸುಮಾರು 300 ಅಡಿ ದೂರದಲ್ಲಿ ಗಿಡಕಂಠಿಗಳ ಮಧ್ಯೆ ಸಿಲುಕಿಕೊಂಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.