ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Team Udayavani, Oct 1, 2024, 12:38 PM IST
ಗದಗ: ಹೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ 11 ಕುರಿ ಮತ್ತು 1 ನಾಯಿ ಸಾವಿಗೀಡಾದ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಹೋಬಳಿಯಲ್ಲಿ ಸೋಮವಾರ (ಸೆ.30) ಸಂಜೆ ನಡೆದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನವಲಪ್ಪ ಹೆಗಡೆ ಸಂಚಾರಿ ಕುರಿಗಾಯಿ ನರೇಗಲ್ ಭಾಗದ ಜಮೀನೊಂದರಲ್ಲಿ ಕುರಿ ಮೇಯಿಸುವ ಸಂದರ್ಭದಲ್ಲಿ, ಹೊಲದಲ್ಲಿ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದೆ. ಆದರೆ, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಸಂಚಾರ ನಿಷ್ಕ್ರಿಯವಾಗದ ಕಾರಣ ವಿದ್ಯುತ್ ತಂತಿಯ ಮೇಲೆ ಕಾಲಿಟ್ಟ ಕುರಿಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿವೆ.
300 ಕುರಿಗಳ ಹಿಂಡನ್ನು ಮೂರು ಜನ ಸಂಚಾರಿ ಕುರಿಗಾಹಿಗಳು ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಆಘಾತದಿಂದ ಸ್ಥಳದಲ್ಲಿಯೇ 11 ಕುರಿಗಳು ಹಾಗೂ ಒಂದು ನಾಯಿ ಸಾವನ್ನಪ್ಪಿದ್ದಾವೆ. ತಕ್ಷಣವೇ ಎಚ್ಚೆತ್ತುಗೊಂಡ ಸಂಚಾರಿ ಕುರಿಗಾಹಿಗಳಿಂದ ಹೆಚ್ಚಿನ ಕುರಿಗಳ ಸಾವು ತಪ್ಪಿದೆ. ಒಬ್ಬ ಕುರಿಗಾಯಿಗೆ ವಿದ್ಯುತ್ ಶಾಕ್ ಹೊಡೆದರೂ ಅದರಿಂದ ಸ್ವಲ್ಪದರಲ್ಲಿ ಸಾವಿನಿಂದ ಆತ ಬಚಾವ್ ಆಗಿದ್ದಾನೆ.
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಸರ್ಕಾರವು ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸಾವನ್ನಪ್ಪಿದ ಕುರಿಗಳಿಗೆ ಪರಿಹಾರ ಒದಗಿಸಬೇಕೆಂದು ಕುರಿಗಾಯಿಗಳ ಆಗ್ರಹವಾಗಿದೆ.
ಇದನ್ನೂ ಓದಿ: Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Political: ಡಿಸಿಎಂ ಡಿ.ಕೆ.ಶಿವಕುಮಾರ್ -ಪರಮೇಶ್ವರ್ ರಹಸ್ಯ ಭೇಟಿ; ಮಾತುಕತೆ
Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್
Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.