ಐತಿಹಾಸಿಕ ಹಿರೇಕೆರೆಗೆ ಬೇಕಿದೆ ರಕ್ಷಣೆ

ಅಕ್ರಮ ಚಟುವಟಿಕೆ ತಾಣವಾದ ಕೆರೆಯಂಗಳ,ಜನಪ್ರತಿನಿಧಿಗಳು-ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ

Team Udayavani, Oct 31, 2020, 1:03 PM IST

ಐತಿಹಾಸಿಕ ಹಿರೇಕೆರೆಗೆ ಬೇಕಿದೆ ರಕ್ಷಣೆ

ನರೇಗಲ್ಲ: ಪಟ್ಟಣದ ಐತಿಹಾಸಿಕ ಹಿರೇಕೆರೆಯನ್ನು ಮಠಾಧಿಧೀಶರು, ಸಂಘ, ಸಂಸ್ಥೆ, ರೈತರು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಹೂಳೆತ್ತುವ ಮೂಲಕ ಕೆರೆಯನ್ನು ಸಾಕಷ್ಟು ಅಭಿವೃದ್ಧಿಪಡಿಸಲಾಗಿತ್ತು. ಜನಪ್ರತಿನಿ ಧಿಗಳ, ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕೆರೆಯು ಕುಡುಕರ, ಬಯಲು ಶೌಚಾಲಯ ತಾಣವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಕೆರೆ ತುಂಬಿ ಅಪಾಯ ಆಹ್ವಾನಿಸುತ್ತಿದೆ.

ಹಿರೇಕೆರೆ 39 ಎಕರೆ ವಿಸ್ತೀರ್ಣ ಹೊಂದಿದೆ. ಒಂದು ಕಾಲದಲ್ಲಿ ರೈತರ ಜೀವನಾಡಿಯಾಗಿದ್ದ ಹಿರೇಕೆರೆಯಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲಮೇಲ್ಮಟ್ಟದಲ್ಲಿತ್ತು. ಮಳೆ ಉತ್ತಮವಾಗಿರುವುದರಿಂದಕೆರೆಯಲ್ಲಿ ನೀರು ಹೆಚ್ಚು ಸಂಗ್ರಹವಾಗಿದೆ. ಕೆರೆಗೆ ಹೋಗಲು ಹೆದರುವಂತಹ ಪ್ರಸಂಗನಿರ್ಮಾಣವಾಗಿದೆ. ಕೆರೆಗೆ ತಡೆಗೋಡೆ ನಿರ್ಮಿಸಿಲ್ಲ.ಯಾವುದೇ ರೀತಿಯ ನಾಮಫಲಕ ಅಳವಡಿಸಿಲ್ಲ. ತಂತಿ ಬೇಲಿ ಸಹ ಅಳವಡಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ.

ಕೆರೆಯ ಸುತ್ತ ದನಕರಗಳು: ಹಿರೇಕೆರೆಯ ದಂಡೆಯ ಮೇಲೆ ಕೋಡಿಕೊಪ್ಪ, ಪಟ್ಟಣದ ಸಾರ್ವಜನಿಕರು ದನ ಕರಗಳನ್ನು ಬಿಟ್ಟಿರುತ್ತಾರೆ. ದನ ಕಾಯುವ ಹುಡುಗರು ಕೆರೆ ಬದುವಿನ ಮೇಲೆ ಕುಳಿತು ಸ್ವಲ್ಪ ಬಾಗಿದರೆಸಾಕು ಕೆರೆಯು ಆಳವಾಗಿರುವುದರಿಂದ ನೀರು ಕೈಗೆ ತಾಗುತ್ತವೆ. ಒಂದು ವೇಳೆ ಆಯತಪ್ಪಿ ಏನಾದರುಬಿದ್ದರೆ ಸಾವು ಖಚಿತವಾಗಿದೆ. ಕೆರೆಯ ಸುತ್ತಲುಸಾಕಷ್ಟು ಪ್ರಮಾಣದಲ್ಲಿ ಗಿಡ ಗಂಟಿಗಳು ಬೆಳೆದಿವೆ.ಕೆರೆಯ ನೆಲ ಕಾಣವುದಿಲ್ಲ. ಒಂದು ವೇಳೆ ಕಾಲಇಟ್ಟರೆ ಕುಸಿದು ನೀರಿಗೆ ಬೀಳುವಂತಾಗಿದೆ. ಅನೈತಿಕ ಚಟುವಟಿಕೆಗಳಿಗೂ ಅವಕಾಶವಾಗುತ್ತಿರುವುದು ಪರಿಸರಪ್ರಿಯರು, ವಾಯು ವಿಹಾರಕ್ಕೆಹೋಗುವವರಲ್ಲಿ ಆತಂಕ ಉಂಟು ಮಾಡಿದೆ. ಕೆರೆ ದಂಡೆ ಕುಡುಕರ ನೆಚ್ಚಿನ ತಾಣ: ಕೆರೆಯ ದಂಡೆಯ ಮೇಲೆ ಸಂಜೆಯಾದರೆ ಸಾಕು ಅನೈತಿಕ, ಅಕ್ರಮ ಚಟುವಟಿಕೆಗಳಿಂದ ಕುಡಿರುತ್ತದೆ. ಖಾಲಿಯಾದ ಬೀರ್‌-ಬ್ರಾಂಡಿ ಬಾಟಲ್‌ಗ‌ಳು, ಟೆಟ್ರಾ ಪ್ಯಾಕ್‌ಗಳು, ನೀರಿನ ಸ್ಯಾಚೆಟ್‌ಗಳು, ಬಾಟಲಿಗಳು, ಪ್ಲಾಸ್ಟಿಕ್‌ ಲೋಟಾಗಳು, ಗುಟಖಾ ಚೀಟುಗಳು, ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳೂ, ಊಟ ಮಾಡಿ ಒಗೆದಿರುವ ಪ್ಲಾಸ್ಟಿಕ್‌ ತಟ್ಟೆಗಳು, ಸಿಗರೇಟ್‌ ಪಾಕೀಟುಗಳು, ಬೆಂಕಿ ಕಡ್ಡಿ ಪೆಟ್ಟಿಗೆಗಳು ಹಿರೇಕೆರೆಯ ಅಂಗಳದ ತುಂಬ ನೋಡುಗರ ಕಣ್ಣಿಗೆ ರಾಚುವಂತೆ ಬಿದ್ದಿವೆ. ಕೆರೆಯ ದಂಡೆಯ ಮೇಲೆ ಕುಡಿದು ಕುಣಿದು ಕುಪ್ಪಳಿಸುತ್ತಾರೆ. ಬಾರ್‌ಗಳಲ್ಲಿ ಸಿಗದ ಮೋಜು ಮಸ್ತಿಯನ್ನು ಇಲ್ಲಿ ಯಾರ ಭಯವೂ ಇಲ್ಲದೇ ರಾಜಾರೋಷವಾಗಿ ಮಾಡುತ್ತಿದ್ದಾರೆ.

ಕ್ರಮ ಕೈಗೊಳ್ಳದ ಅಧಿಕಾರಿಗಳು: ಪಟ್ಟಣದ ಹಿರೇಕೆರೆ ದಂಡೆ ಸಂಜೆಯಾಗುತ್ತಲೇ ಕುಡುಕರ ಅಡ್ಡೆಯಾಗಿರುವದನ್ನು ಅಬಕಾರಿ ಹಾಗೂ ಪೊಲೀಸ್ಇಲಾಖೆ ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.  ಕುಡುಕರಿಗೆ ಬುದ್ಧಿವಾದ ಹೇಳಿ ಬೇರೆ ಸ್ಥಳಗಳಲ್ಲಿ ನೀವು ನಿಮ್ಮ ಚಟಗಳನ್ನು ಮಾಡಿ ಎಂದು ಹೇಳಬೇಕಾದ ಅಧಿಕಾರಿಗಳು ಕಣ್ಣು ಮುಚ್ಚಿ ಓಡಾಡುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ಕುಡಿದ ಅಮಲಿನಲ್ಲಿ ಕಾಲು ಜಾರಿ ಕೆರೆ ಬಿದ್ದರೆ ಯಾರು ಹೊಣೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

ಹಿರೇಕೆರೆ ಅಭಿವೃದ್ಧಿಗೆ ಕೆರೆಯ ಸುತ್ತಲು ತಡೆಗೋಡೆ, ತಂತಿ ಬೇಲಿ ಹಾಕಲು ಸಣ್ಣ ನೀರಾವರಿ ಇಲಾಖೆಹಾಗೂ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕೆರೆ ದಂಡೆಯ ಮೇಲೆ ಚಿಕ್ಕ ಮಕ್ಕಳನ್ನುಹಾಗೂ ದನಕರಗಳನ್ನು ಬಿಡುವಾಗ ಎಚ್ಚರಿಕೆ ವಹಿಸಬೇಕು ಎಂದು ಈಗಾಗಲೇ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.  -ಮಹೇಶ ನಿಡಶೇಶಿ, ಪಪಂ ಮುಖ್ಯಾಧಿಕಾರಿ

ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರ ಜೀವನಾಡಿಯಾಗಿರುವ ಹಿರೇಕೆರೆ ದೇವರ ಕೃಪೆಯಿಂದ ಉತ್ತಮ ಮಳೆಯಾದ ಪರಿಣಾಮ ಕೆರೆ ತುಂಬಿಕೊಂಡಿದೆ. ಇದರಿಂದ ರೈತರ ಕೊಳೆವೆ ಬಾವಿ ಅಂತರ್ಜಲ ಮಟ್ಟ ಹೆಚ್ಚಾಗುವ ಸಾಧ್ಯಗಳಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕೆರೆಯ ಸುತ್ತಲು ತಂತಿ ಬೇಲಿ ಅಳಡಿಸುವುದಕ್ಕೆಮುಂದಾಗಬೇಕು. ರಾತ್ರಿ ವೇಳೆ ಮದ್ಯ ಪಾನ ಮಾಡುವುದಕ್ಕೆ ಬರುವ ಜನರನ್ನು ಈ ಕೆರೆಗೆ ಬಾರದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. – ನಜೀರ ಹದ್ಲಿ, ಕೋಡಿಕೊಪ್ಪ ನಿವಾಸಿ

 

-ಸಿಕಂದರ ಎಂ. ಆರಿ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.