ಅಸಮರ್ಪಕ ವಿದ್ಯುತ್ ಪೂರೈಕೆ: ಹೆಸ್ಕಾಂ ಕಚೇರಿಗೆ ಮುತ್ತಿಗೆ
Team Udayavani, Mar 10, 2021, 6:05 PM IST
ಶಿರಹಟ್ಟಿ: ಅಸಮರ್ಪಕ ವಿದ್ಯುತ್ಪೂರೈಕೆ ಹಾಗೂ ಕಚೇರಿಯಲ್ಲಿ ಸಿಬ್ಬಂದಿಇಲ್ಲದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ತಾಲೂಕಿನವಡವಿ-ಹೊಸೂರ, ಅಲಗಿಲವಾಡ, ಮಾಚೇನಹಳ್ಳಿ, ದೇವಿಹಾಳ ಸೇರಿದಂತೆ ವಿವಿಧ ಗ್ರಾಮಗಳ ರೈತರು ಮಂಗಳವಾರ ಬೆಳ್ಳಟ್ಟಿಹೆಸ್ಕಾಂ ಕಚೇರಿ ಬೀಗ ಒಡೆದು ಒಳನುಗ್ಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ರೈತ ರಾಜೀವ್ರೆಡ್ಡಿ ಬಮ್ಮನಕಟ್ಟಿ, ಬೆಳ್ಳಟ್ಟಿ ಫೀಡರ್ನಿಂದ ರೈತರ ಪಂಪ್ಸೆಟ್ಗಳಿಗೆಪೂರೈಕೆಯಾಗುವ ವಿದ್ಯುತ್ ಸರಬರಾಜಿಗೆ ಯಾವುದೇ ಸಮಯ ನಿಗದಿ ಮಾಡಿಲ್ಲ.ತಮಗೆ ಬೇಕಾದಾಗ ವಿದ್ಯುತ್ ಸರಬರಾಜು ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ.ಸಧ್ಯ ಬೇಸಿಗೆ ಕಾಲ ಇರುವುದರಿಂದ ಬೆಳೆಗಳಿಗೆಸರಿಯಾದ ಸಮಯಕ್ಕೆ ನೀರು ಹಾಯಿಸದಿದ್ದರೆಸಾಲ-ಶೂಲ ಮಾಡಿ ಬಿತ್ತಿದ ಬೆಳೆಗಳು ಒಣಗಿ ಹೋಗಿ ಅಪಾರ ನಷ್ಟ ಉಂಟಾಗಲಿದೆ.
ಇದನ್ನು ಸರಿಪಡಿಸುವಂತೆ ಬೆಳ್ಳಟ್ಟಿಯ ಎಸ್ಒ ಹಾಗೂ ಸಿಬ್ಬಂದಿಗೆ ಸಾಕಷ್ಟು ಬಾರಿ ಮನವಿಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ,ನಮಗೆ ಹಗಲು ಸಮಯದಲ್ಲಿಯೇಸಮರ್ಪಕ ವಿದ್ಯುತ್ ಪೂರೈಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮಾತನಾಡಿದ ಹೆಸ್ಕಾಂ ಎಇಇ ಎಂ.ಟಿ.ದೊಡ್ಡಮನಿ, ಬೇಸಿಗೆ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿವ್ಯತ್ಯಯವಾಗುತ್ತಿದೆ. ಸಿಬ್ಬಂದಿಗೆ ಸೂಕ್ತನಿರ್ದೇಶನ ನೀಡಿ ರೈತರ ಬೇಡಿಕೆ ಈಡೇರಿಸಲು ಕ್ರಮ ಕೈಕೊಳ್ಳಲಾಗುವುದು ಎಂದರು. ಹೆಸ್ಕಾಂಎಇಇ ಸೂಕ್ತ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ಈ ವೇಳೆ ಹನುಮಂತ ಬಾಲೇಹೊಸೂರು,ಸುಭಾಸ ಕೊಂಚಿಗೇರಿ, ಪ್ರವೀಣ ಅಳವಂಡಿ,ಹನುಮರೆಡಿ ಆನ್ವೇರಿ, ಮಹೇಶ ಬಾಗೇವಾಡಿ,ಅಶೋಕರೆಡ್ಡಿ ಹುಲ್ಲೂರ, ಶ್ರೀಧರ ಹುಲ್ಲೂರ, ನಾಗರಾಜ ತಳವಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.