ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಕಪ್ಪು ಶಿಲೀಂಧ್ರ ಪ್ರಕರಣಗಳು

27 ಪ್ರಕರಣಗಳು ಪತ್ತೆ!  24 ಜನರು ಶಂಕಿತರು! ಮಧುಮೇಹಿಗಳಲ್ಲಿ ಹೆಚ್ಚಿದ ಆತಂಕ

Team Udayavani, May 30, 2021, 6:54 PM IST

9873555

ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದಂತೆ ಬ್ಲ್ಯಾಕ್ ಫಂಗಸ್‌ ತೀವ್ರವಾಗಿದೆ. ಕಪ್ಪು ಶಿಲೀಂಧ್ರ ಪ್ರಕರಣಗಳು ದಿನಗಳೆದಂತೆ ಹೆಚ್ಚುತ್ತಿವೆ. ಅಲ್ಲದೇ, ತಕ್ಷಣಕ್ಕೆ ಅಗತ್ಯ ಔಷಧ ಲಭ್ಯವಾಗುತ್ತಿಲ್ಲ. ಇದರಿಂದ ಸಕ್ಕರೆ ರೋಗ ಸೇರಿದಂತೆ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಆತಂಕದ ಛಾಯೆ ಆವರಿಸುತ್ತಿದೆ.

ಒಟ್ಟು 27 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡು ಬಂದಿವೆ. ಅದರಲ್ಲಿ ಮೂವರಿಗೆ ಬ್ಲ್ಯಾಕ್‌ ಫಂಗಸ್‌(ಮ್ಯೂಕರ್‌ ಮೈಕೋಸಿಸ್‌) ಒಳಗಾಗಿದೆ. ಇನ್ನುಳಿದ 24 ಜನರಿಗೆ (ಶಂಕಿತರು) ಕಪ್ಪು ಶಿಲೀಂಧ್ರ ಸೋಂಕು ತಗುಲಿರುವ ಸಾಧ್ಯತೆ ಇದೆ. ಬ್ಲ್ಯಾಕ್  ಫಂಗಸ್‌ ಖಚಿತಪಟ್ಟ ಮೂವರು ಸೇರಿದಂತೆ ಒಟ್ಟು 20 ಜನರು ಜಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 7 ಜನರು ಮನೆಯಲ್ಲೇ ಚಿಕಿತ್ಸೆಗೊಳಗಾಗಿದ್ದಾರೆ. ಅಲ್ಲದೇ ನಾನಾ ಕಾರಣಗಳಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಕಪ್ಪು ಶಿಲೀಂಧ್ರದ ಸಮಸ್ಯೆ ಕಾಡಬಹುದು ಎಂಬುದು ವೈದ್ಯರ ಆತಂಕ. 12 ದಿನದಲ್ಲಿ 27 ಪ್ರಕರಣಗಳು: ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಸಂಶಯಾಸ್ಪದ ಸೇರಿದಂತೆ ಒಟ್ಟು 27 ಜನರಿಗೆ ಬ್ಲ್ಯಾಕ್  ಫಂಗಸ್‌ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಮೇ 17ರಂದು ಮೊದಲ ಬಾರಿಗೆ ಇಬ್ಬರಿಗೆ ಬ್ಲ್ಯಾಕ್  ಫಂಗಸ್‌ ಸೋಂಕು ದೃಢಪಟ್ಟಿದೆ. ಆನಂತರ ಮೇ 20 ರಂದು 3, ಮೇ 21 ರಂದು 3, ಮೇ 22 ರಂದು 4 ಸೇರಿದಂತೆ ಒಟ್ಟು 27 ಜನರಲ್ಲಿ ಸೋಂಕು ಕಂಡು ಬಂದಿದೆ. ಅದರಲ್ಲಿ ಈವರೆಗೆ ಒಟ್ಟು 3 ಪ್ರಕರಣಗಳು ದೃಢಪಟ್ಟಿವೆ. 24 ಪ್ರಕರಣಗಳು ಸಂಶಯಾಸ್ಪದವಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಹೆಚ್ಚುತ್ತಿದೆ ಕಪ್ಪು ಶಿಲೀಂಧ್ರ ಉಪಟಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಪ್ಪು ಶಿಲೀಂಧ್ರದ ಸೋಂಕಿನ ಉಪಟಳ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಅಗತ್ಯ ಔಷ  ಧ ಪೂರೈಕೆಯಾಗುತ್ತಿಲ್ಲ. ಕಪ್ಪು ಶಿಲೀಂಧ್ರಕ್ಕೆ ಬೇಕಿರುವ “ಲೈಫೋಸೋಮಲ್‌ ಆಂಫೋಟೆರಿಸಿನ್‌ ಬಿ’ ಔಷಧವನ್ನು ಮೊದಲ 10 ದಿನ ಕಡ್ಡಾಯವಾಗಿ ನೀಡಬೇಕು. ಆದರೆ, “ಲೈಫೋಸೋಮಲ್‌ ಆಂಫೋಟೆರಿಸಿನ್‌ ಬಿ” ಅತ್ಯಂತ ದುಬಾರಿಯಾಗಿದ್ದು, ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂಬ ದೂರು ಕೇಳಿ ಬಂದಿವೆ.

ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಬ್ಲ್ಯಾಕ್  ಫಂಗಸ್‌ ಮೂಗಿನಲ್ಲಿ ಉತ್ಪತ್ತಿಯಾಗಿ ಕಣ್ಣು ಮತ್ತು ಮೆದುಳಿಗೆ ಪ್ರವೇಶಿಸುತ್ತದೆ. ಈ ಸೋಂಕು ಅತ್ಯಂತ ವೇಗವಾಗಿ ಹರಡುತ್ತಿದ್ದು, ಇದು ಕಂಡು ಬಂದ ಮೂರ್ನಾಲ್ಕು ದಿನಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲೇಬೇಕು. ವಿಳಂಬ ಮಾಡಿದರೆ, ವ್ಯಕ್ತಿ ಬದುಕುಳಿಯುವುದೇ ಕಷ್ಟ. ಈ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರದಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಅಗತ್ಯ ಪ್ರಮಾಣದಲ್ಲಿ ಚುಚ್ಚುಮದ್ದು ಪೂರೈಸಲು ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.