ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ
Team Udayavani, Sep 20, 2024, 3:15 PM IST
ಉದಯವಾಣಿ ಸಮಾಚಾರ
ನರಗುಂದ: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಮಹದಾಯಿ ನದಿ ಜೋಡಣೆ ಹಾಗೂ ಕಪ್ಪತ್ತಗುಡ್ಡ ಪ್ರವಾಸಿ ತಾಣವನ್ನಾಗಿ ರೂಪಿಸಲು ಆಗ್ರಹಿಸಿ ಕರವೇ ಪ್ರವೀಣಕುಮಾರ ಶೆಟ್ಟಿ ಬಣದಿಂದ ಬಂಡಾಯ ನಾಡು ನರಗುಂದ ಪಟ್ಟಣದಿಂದ ಗದಗ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ಪ್ರಾರಂಭಿಸಲಾಯಿತು.
ಕರವೇ ರಾಜ್ಯ ಘಟಕ, ಗದಗ ಹಾಗೂ ಧಾರವಾಡ ಜಿಲ್ಲಾ ಘಟಕಗಳ ಆಶ್ರಯದಲ್ಲಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಜಿಲ್ಲಾ-ತಾಲೂಕುಗ ಳ ಪದಾಧಿ ಕಾರಿಗಳು ಇಂದು ಪಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ಮಹದಾಯಿ ಮತ್ತು ಕಳಸಾ-ಬಂಡೂರಿ ಹೋರಾಟ ವೇದಿಕೆಯಲ್ಲಿ ಪಾದಯಾತ್ರೆಗೆ ಚಾಲನೆ ಪಡೆದು ನರಗುಂದ ರೈತ ಬಂಡಾಯದಲ್ಲಿ ಮಡಿದ ದಿ| ಈರಪ್ಪ ಕಡ್ಲಿಕೊಪ ಅವರ ವೀರಗಲ್ಲಿಗೆ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಯಿತು.
ಕಳಸಾ-ಬಂಡೂರಿ ಮತ್ತು ಮಹದಾಯಿ ನದಿ ಜೋಡಣೆ ಯೋಜನೆ ತುರ್ತಾಗಿ ಆರಂಭಿಸುವಂತೆ ಹಾಗೂ ಕಪ್ಪತ್ತಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಆಗ್ರಹಿಸಿ ಪಟ್ಟಣದಿಂದ ಬೃಹತ್ ಪಾದಯಾತ್ರೆ ಮೂಲಕ ನವಲಗುಂದ ತಾಲೂಕು
ಶಲವಡಿ ಮೂಲಕ ಸೆ. 20ರಂದು ಜಿಲ್ಲೆ ಪ್ರವೇಶಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರವೇ ಪ್ರವೀಣಶೆಟ್ಟಿ ಬಣದ ಜಿಲ್ಲಾಧ್ಯಕ್ಷ ವೆಂಕಟೇಶ ಆರ್. ಬೇಲೂರ ತಿಳಿಸಿದರು.
ಪಾದಯಾತ್ರೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ ಶೆಟ್ಟಿ, ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ, ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರ, ರಾಜ್ಯ ಕಮಿಟಿ ಸದಸ್ಯ ದಾವಲಸಾಬ್ ಮುಳಗುಂದ, ಶ್ರೀನಿವಾಸ ಭಂಡಾರಿ, ತಿಮ್ಮಣ್ಣ ಡೋಣಿ, ಸಹದೇವ ಕೋಟಿ, ಪರಶುರಾಮ ಬಂಕದಮನಿ ಸೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.