ಕನ್ನಡದ ತೇರು ಎಳೆಯಲು ಕೈಜೋಡಿಸಿ
Team Udayavani, Dec 11, 2021, 2:50 PM IST
ನರಗುಂದ: ಕನ್ನಡ ಕೇವಲ ಅಕ್ಷರಗಳ ಸರಮಾಲೆಯಲ್ಲ. ಅದು ನಮ್ಮ ಬದುಕು. ಅಂತಹ ಪರಿಕಲ್ಪನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡದ ತೇರು ಎಳೆಯಲು ಸಮಸ್ತ ಕನ್ನಡಿಗರು ಕೈಜೋಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗದಗ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೂತನ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರುಏರ್ಪಡಿಸಿದ್ದ ಕೃತಜ್ಞತೆ ಸಮರ್ಪಣಾ ಸಭೆಯಲ್ಲಿ ಮಾತನಾಡಿದರು.
ಚುನಾವಣೆಯಲ್ಲಿ ಗೆದ್ದರೂ ಖುಷಿಪಡುವಸ್ಥಿತಿಯಿಲ್ಲ. ನಮ್ಮೆದುರು ಅನೇಕ ಸವಾಲುಗಳಿವೆ. ಸಮರ್ಥ ಹಾದಿಗೆ ನಾವೆಲ್ಲ ಸೇರಿ ಶ್ರಮಿಸಬೇಕು. ಅಂದಾಗ ಗುರಿ ತಲುಪಲು ಸಾಧ್ಯ ಎಂದರು.ಕನ್ನಡ ತಾಯಿ ಸೇವೆ ಮಾಡಲು ಅವಕಾಶಮಾಡಿಕೊಟ್ಟ ಕಸಾಪದ ಎಲ್ಲ ಆಜೀವಸದಸ್ಯರಿಗೆ, ಸಾರ್ವಜನಿಕರಿಗೆ ಕೃತಜ್ಞತೆಸಲ್ಲಿಸುತ್ತೇನೆ ಎಂದು ವಿವೇಕಾನಂದಗೌಡ ಪಾಟೀಲಹೇಳಿದರು.
ಕೆ.ಎಚ್.ಬೇಲೂರ ಅವರು ಮಾತನಾಡಿ, 5ವರ್ಷಗಳ ಅವಧಿ ಯಲ್ಲಿ ವಿವೇಕಾನಂದಗೌಡರು ದಾಖಲೆ ರೀತಿಯಲ್ಲಿ ಕನ್ನಡದ ಸೇವೆ ಮಾಡುವ ವಿಶ್ವಾಸವಿದೆ ಎಂದರು.
ಕಸಾಪ ನಿಕಟಪೂರ್ವ ಅಧ್ಯಕ್ಷೆ ಮಂಗಳಾ ಪಾಟೀಲ, ಚನ್ನಬಸಪ್ಪ ಕಂಠಿ, ಡಾ.ಶಿವಪ್ಪ ಕುರಿಮಾತನಾಡಿಡದರು. ಸಿ.ಎಚ್.ಕೋರಿ ಅಧ್ಯಕ್ಷತೆವಹಿಸಿದ್ದರು. ತಾಲೂಕು ಕನ್ನಡ ಸಾಹಿತ್ಯ ಬಳಗದಿಂದ ವಿವೇಕಾನಂದಗೌಡ ಪಾಟೀಲ ಅವರನ್ನು ಸತ್ಕರಿಸಲಾಯಿತು.
ವೇದಿಕೆಯಲ್ಲಿ ಸಿಕೆಎಚ್ ಕಡಣಿ ಶಾಸ್ತ್ರಿಗಳು, ವಿ.ಎನ್.ಕೊಳ್ಳಿಯವರ, ಡಾ.ವಿ.ಎಸ್.ಹಿರೇಮಠ, ಶಿವಪ್ಪ ಬೋಳಶೆಟ್ಟಿ, ರಮೇಶಗೌಡ ಕರಕನಗೌಡ್ರ, ಶಂಕ್ರಣ್ಣ ವಾಳದ, ಅಂದಾನಯ್ಯ ಹಿರೇಮಠ, ಎಂ.ಎಂ.ಕಲಹಾಳ, ಕಿಶೋರಬಾಬು ನಾಗರಕಟ್ಟೆ, ಡಿ.ಎಸ್.ತಳವಾರ, ಜಿಡ್ನಂದಿ, ಈರಣ್ಣ ಮಾದರ ಮುಂತಾದವರು ಇದ್ದರು. ಕಸಾಪ ಆಜೀವ ಸದಸ್ಯರು ಪಾಲ್ಗೊಂಡಿದ್ದರು.ಕಲಾಶ್ರೀ ಹಾದಿಮನಿ ಪ್ರಾರ್ಥಿಸಿ, ಬಿ.ಆರ್ .ಪಾಟೀಲ ಸ್ವಾಗತಿಸಿ, ಪ್ರೊ.ಬಿ.ಸಿ.ಹನಮಂತಗೌಡ್ರ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ
Jangal Mangal Movie: ಜಂಗಲ್ನಲ್ಲಿ ಮಂಗಲ್ ಲವ್ ಸ್ಟೋರಿ
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.