Karnataka Sambhrama 50: ಕನ್ನಡ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಭವ್ಯ ಸ್ವಾಗತ


Team Udayavani, Nov 3, 2023, 12:45 PM IST

Karnataka Sambhrama 50: ಕನ್ನಡ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಭವ್ಯ ಸ್ವಾಗತ

ಗದಗ: ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ಕನ್ನಡ ಸಂಭ್ರಮ-50ರ ಅಂಗವಾಗಿ ಹಂಪಿಯಿಂದ ಆಗಮಿಸಿದ ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿಯಾಗಿ ಬರಮಾಡಿಕೊಂಡರು.

ಶ್ರೀ ವೀರನಾರಾಯಣನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅವರು ಬಳಿಕ ದೇವಸ್ಥಾನದ ಆವರಣದಲ್ಲಿ ನಾಡದೇವತೆ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. 1973ರ ನ. 3ರಂದು ನಡೆದ ಕರ್ನಾಟಕ ನಾಮಕರಣ ಸಂಭ್ರಮದ ಕಾರ್ಯಕ್ರಮವನ್ನು 2023ರ ನ. 3ರಂದು 50 ವರ್ಷದ ಸುವರ್ಣ ಸಂಭ್ರವನ್ನು ಪುನರಪಿಯಾಗಿ ಆಚರಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಜೊತೆಗೆ, 1973ರ ನ. 3ರಂದು ಸಾಗಿದ ಮೆರವಣಿಗೆಯು ಮಾರ್ಗದಲ್ಲಿಯೇ ಸಾಗಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪೌರಾಡಳಿತ ಸಚಿವ ರಹೀಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಶಾಸಕರಾದ ಜಿ.ಎಸ್. ಪಾಟೀಲ, ಶ್ರೀನಿವಾಸ ಮಾನೆ, ಜೆ.ಟಿ. ಪಾಟೀಲ, ಸರಕಾರದ ಮುಖ್ಯಸಚೇತಕ ಸಲೀಂ ಅಹ್ಮದ್, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿ ಹಲವರು ಇದ್ದರು.

ವೀರನಾರಾಯಣ ದೇವಸ್ಥಾನದಲ್ಲಿ ವಿಶೇಷ ಅಲಂಕಾರ

ಕನ್ನಡ ಸಂಭ್ರಮ-50ರ ಹಿನ್ನೆಲೆಯಲ್ಲಿ ನಗರದ ಪುರಾತನ ವೀರನಾರಾಯಣ ದೇವಸ್ಥಾನವನ್ನು ವಿವಿಧ ಹೂಗಳಿಂದ ಅಲಂಕಾರಗೊಳಿಸಲಾಗಿತ್ತು. ವೀರನಾರಾಯಣನಿಗೆ ವಿಶೇಷ ಪೂಜೆ ಜೊತೆಗೆ ಅಲಂಕಾರ ಮಾಡಲಾಗಿತ್ತು. ಕುಮಾರವ್ಯಾಸ ಸ್ಥಂಭಕ್ಕೂ ಅಲಂಕಾರ ಮಾಡಲಾಗಿತ್ತು. ಸಿಎಂ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಅದ್ದೂರಿ ಮೆರವಣಿಗೆ

ಮೈಸೂರಿನ ಚಂಡೆ ಮದ್ದಳೆ ಕಲಾತಂಡ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 25ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯುದ್ದಕ್ಕೂ ಕಲಾಪ್ರದರ್ಶನ ನೀಡಿದವು. ಮೈಸೂರು ದಸರಾದಲ್ಲಿ ಪ್ರದರ್ಶನಗೊಂಡ ಸಬರಮತಿ ಆಶ್ರಮ, ಲಕ್ಕುಂಡಿಯ ಬ್ರಹ್ಮಜೀನಾಲಯ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗತವೈಭವ ಸಾರಿದವು. ನಗರಸಭೆ ವತಿಯಿಂದ ಭುವನೇಶ್ವರಿ, ಸರಕಾರದಿಂದ ಅಧಿಕೃತಗೊಳಿಸಲಾದ ಲಾಂಛನ ಹಾಗೂ ಭುನೇಶ್ವರಿ ದೇವಿ ಮೂರ್ತಿ, ಕುಂಭಹೊತ್ತ ಮಹಿಳೆಯರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಮೆರವಣಿಗೆಗೆ ರಂಗು ತುಂಬಿದರು.

ಟಾಪ್ ನ್ಯೂಸ್

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.