ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ


Team Udayavani, Sep 6, 2024, 4:25 PM IST

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

■ ಉದಯವಾಣಿ ಸಮಾಚಾರ
ಗಜೇಂದ್ರಗಡ: ಬಸವಣ್ಣನವರು ವಚನಗಳ ಮೂಲಕ ನೀಡಿದ ಕಾಯಕ ಸಂಸ್ಕೃತಿಯ ಸಂದೇಶ ವಿಶ್ವವೇ ಒಪ್ಪಿಕೊಂಡಿದೆ. ಅವುಗಳ ಪಾಲನೆಯಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.

ಪಟ್ಟಣದ ಮೈಸೂರ ಮಠದಲ್ಲಿ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಶ್ರಾವಣ ಮಾಸ ಪ್ರಯುಕ್ತ ನಡೆದ ಗುಡ್ಡಾಪುರದ ದಾನಮ್ಮದೇವಿ ಪುರಾಣ ಪ್ರವಚನ ಪ್ರಯುಕ್ತ ನಡೆದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಾದಿಶರಣರು ರಚಿಸಿದ ವಚನ ಸಾಹಿತ್ಯಗಳೇ ಇಂದಿನ ವಿಶ್ವ ವಿದ್ಯಾಲಯಗಳ ಸಂಶೋಧನೆಯ
ಅಸ್ತ್ರಗಳಾಗಿವೆ. ಜೊತೆಗೆ ಸರಳ ಬದುಕಿಗೆ ಸಂಜೀವಿನಿಯಾಗಿವೆ. ಇಂತಹ ಸರಳ ಮತ್ತು ಸಮಾನತೆ ಬಿಂಬಿಸುವ ಕೋಶದ ಚಿಂತನೆ ಬಿಟ್ಟು ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಮಾತಿಗೆ ಮಾರು ಹೋಗುತ್ತಿರುವುದು ಬಸವ ಧರ್ಮಕ್ಕೆ
ಅಪಚಾರವೆಸಗಿದಂತೆ.

ಸಮಾಜವು ಲೌಕಿಕ ಶಕ್ತಿಯ ಹಿಂದೆ ಬಿದ್ದು ಜಗತ್ತಿಗೆ ಬಸವಣ್ಣನವರು ನೀಡಿದ ಕಾಯಕ ಸಂಸ್ಕೃತಿಯನ್ನು ಮರೆತಿದೆ. ಹೀಗಾಗಿ ಭಾರತವು ಯಾಂತ್ರೀಕರಣ ಒಪ್ಪಿಕೊಂಡ ದೇಶಗಳಿಗೆ ಮಾತ್ರ ಪ್ರಬಲ ದೇಶವಾಗಿ ಕಾಣುತ್ತಿದೆ. ಏಕೆಂದರೆ ಬಸವಣ್ಣನವರು ನೀಡಿದ ಕಾಯಕ ಸಂಸ್ಕೃತಿ ಒಪ್ಪಿಕೊಂಡು ಜಗತ್ತು ಸಾಗುತ್ತಿದ್ದರೆ, ನಾವೂ ಮಾತ್ರ ಕೆಲಸವನ್ನು ಮಾಡುತ್ತಿದ್ದೇವೆ. ಆದರೆ ಸಮಾಜವು ಕಾಯಕವನ್ನು ಮಾಡುತ್ತಿಲ್ಲ. ಕೇವಲ ಕೆಲಸವನ್ನು ಮಾಡುತ್ತಿದ್ದೇವೆ ಎನ್ನುವ ಸತ್ಯವನ್ನು ತಿಳಿಯಲು ವಿಫಲವಾಗಿದ್ದೇವೆ
ಎಂದರು.

ಮೈಸೂರ ಸಂಸ್ಥಾನ ಮಠದ ವಿಜಯಮಹಾಂತ ಶ್ರೀ ಆಶೀರ್ವಚನ ನೀಡಿ, ಕಾಯಕದಲ್ಲಿ ಸಮಾನತೆ, ನಿಸ್ವಾರ್ಥ, ದಾಸೋಹದಂತಹ ಮಹತ್ವದ ಗುಣಗಳು ಅಡಕವಾಗಿವೆ ಎಂದರು. ಈ ವೇಳೆ ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಮಿಥುನ ಪಾಟೀಲ ದಂಪತಿ ಸನ್ಮಾನಿಸಲಾಯಿತು.

ನರೇಗಲ್ಲ ಹಿರೇಮಠದ, ಮಲ್ಲಿಕಾರ್ಜುನ್‌ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ ಸಿದ್ದಪ್ಪ ಬಂಡಿ, ಅಪ್ಪು ಮತ್ತಿಕಟ್ಟಿ, ಎಸ್‌.ಎಸ್‌. ವಾಲಿ, ಟಿ.ಎಸ್‌. ರಾಜೂರ, ಎ.ಪಿ. ಗಾಣಗೇರ, ಬಿ.ವಿ. ಕಂಬಳ್ಯಾಳ, ಶರಣಪ್ಪ
ರೇವಡಿ ಸೇರಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.