ಆದೇಶಿಸಿದರೂ ಆರಂಭಗೊಳ್ಳದ ಖರೀದಿ ಕೇಂದ್ರ

ಆತಂಕದಲ್ಲಿ ಕಡಲೆ ಬೆಳೆಗಾರರು

Team Udayavani, Apr 9, 2020, 4:49 PM IST

09-April-30

ಲಕ್ಷ್ಮೇಶ್ವರ: ಕೋವಿಡ್  ಭೀತಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಬೆಂಬಲ ಬೆಲೆ ಕಡಲೆ ಖರೀದಿ ಪ್ರಕ್ರಿಯೆಯನ್ನು ಏ. 6ರಿಂದ ಮತ್ತೆ ಪ್ರಾರಂಭಿಸುವಂತೆ ಸರ್ಕಾರ ಆದೇಶಿಸಿ 4 ದಿನ ಕಳೆದರೂ ಇದುವರೆಗೂ ತಾಲೂಕಿನ ಯಾವುದೇ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ ಆರಂಭವಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ರೈತ ಸಮುದಾಯದ ಒಕ್ಕೂರಲಿನ ಆಗ್ರಹದಿಂದ ಕಡಲೆಯನ್ನು 4875 ರೂ. ಬೆಂಬಲ ಬೆಲೆಯಡಿ ಖರೀದಿಸಲು ಮಾರ್ಚ್‌ 2ನೇ ವಾರದಲ್ಲಿ ಸೂಚಿಸಿತ್ತು. ಈ ಪ್ರಕ್ರಿಯೆ ಪ್ರಾರಂಭವಾಗುವ ಮೊದಲೇ ಕೊರೊನಾ ಎಂಬ ಹೆಮ್ಮಾರಿ ಭೀತಿಯಿಂದ ಸರ್ಕಾರ ಖರೀದಿ ಪ್ರಕ್ರಿಯೆಗೆ ಏ. 5ರವರೆಗೆ ತಾತ್ಕಾಲಿಕ ತಡೆ ನೀಡಿತ್ತು. ಈಗ ಮತ್ತೆ ಏ. 6ರಿಂದ ನೋಂದಣಿಗೆ ಮತ್ತು ಖರೀದಿಗೆ ಆದೇಶಿಸಿದ್ದರೂ ಈ ಆದೇಶ ಪಾಲನೆಯಾಗಿಲ್ಲ.

ಫೆಬ್ರುವರಿಯಲ್ಲೇ ಪೂರ್ಣ ಪ್ರಮಾಣದಲ್ಲಿ ಕಡಲೆ ಒಕ್ಕಲಿ ಮುಗಿದಿದ್ದು, 2 ತಿಂಗಳಿಂದ ಮನೆಯಲ್ಲಿ ಇಲಿ, ಹೆಗ್ಗಣ, ನುಸಿಪೀಡೆ (ಬುರಬುರಿ) ಯಿಂದ ಸಂರಕ್ಷಿಸಲಾಗದೇ ಕಡಲೆ ಹಾಳಾಗುತ್ತದೆಯೋ, ಇದೇ ಕಾರಣದಿಂದ ಕಡಲೆ ಖರೀದಿಸಲು ಹಿಂದೇಟು ಹಾಕುತ್ತಾರೋ ಎಂಬ ಆತಂಕದಲ್ಲಿ ರೈತರು ಕಾಲ ಕಳೆಯುತ್ತಿದ್ದಾರೆ. ಮುಕ್ತ ಮಾರುಕಟ್ಟೆಯಲ್ಲಿ ಕಡಲೆ ಬೆಲೆ ಕೇವಲ 3500 ರಿಂದ 3800 ರೂ. ಇದೆ. 15 ದಿನಗಳಿಂದ ಎಪಿಎಂಸಿಯಲ್ಲಿ ಖರೀದಿ ಪ್ರಕ್ರಿಯೇ ಸ್ಥಗಿತಗೊಳಿಸಲಾಗಿದೆ. ಮಾರಾಟ ಮಾಹಾ ಮಂಡಳದವರು ನಿಗದಿಪಡಿಸಿದ ಖರೀದಿ ಕೇಂದ್ರದವರನ್ನು ಕೇಳಿದರೆ ನಮಗೆ ಖಾಲಿ ಚೀಲ ಬಂದಿಲ್ಲ, ಈಗ ಪಡಿತರ ವಿತರಿಸುತ್ತಿದ್ದೇವೆ ಅದು ಮುಗಿದ ಮೇಲೆ ಪ್ರಾರಂಭಿಸುತ್ತೇವೆ. ಸಿದ್ಧತೆ ಮಾಡಿಕೊಳ್ಳಬೇಕು, ಸ್ಥಳಾವಕಾಶದ ಕೊರತೆ ಇದೆ, ಇನ್ನಷ್ಟು ದಿನ ಕಾಯಬೇಕು, ದಿನಕ್ಕೆ ಇಷ್ಟೇ ರೈತರ ಕಡಲೆ ಖರೀದಿಸುತ್ತೇವೆ ಎಂದು ದಿನ ದೂಡುತ್ತಿದ್ದಾರೆಯೇ ಹೊರತು ಖರೀದಿ ಪ್ರಕ್ರಿಯೆ ನಡೆಯದಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಸ್ಥಗಿತಗೊಂಡಿದ್ದ ಕಡಲೆ ಖರೀದಿ ಪ್ರಕ್ರಿಯೆಯನ್ನು ಸರ್ಕಾರದ ಆದೇಶದಂತೆ ಏ. 6ರಿಂದ ಮತ್ತೇ ಪ್ರಾರಂಭಿಸಲು ಆದೇಶಿಸಲಾಗಿದೆ. ಈ ಆದೇಶ ಪಾಲಿಸದಿರುವ
ಕೇಂದ್ರದವರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗುವುದು. ಕೂಡಲೇ ಪ್ರಾರಂಭಿಸುವಂತೆ ಕ್ರಮ ಕೈಗೊಳ್ಳಲಾಗುವುದು.
ಡಿ.ಬಿ. ಡೊಕ್ಕಣ್ಣವರ,
ಜಿಲ್ಲಾ ಮಾರಾಟ ಮಾಹಾ ಮಂಡಳದ ವ್ಯವಸ್ಥಾಪಕ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.