![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 2, 2021, 4:56 PM IST
ಗದಗ: ರಾಜ್ಯದ ಉಪ ಚುನಾವಣೆ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ಪತ್ರಬರೆದಿರುವುದು ಸರಿಯಲ್ಲ. ಅವರ ನಡೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತದೆ ಎಂದು ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತೀವ್ರವಾಗಿ ಖಂಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಹಾಗೂ ವಿರೋಧ ಪಕ್ಷದ ಎಲ್ಲ ಶಾಸಕರ ವಿಶ್ವಾಸ ಗಳಿಸುವುದು ಎಲ್ಲ ಇಲಾಖೆಗಳ ಮಂತ್ರಿಗಳಿಗಿಂತಮುಖ್ಯಮಂತ್ರಿಗಳಿಗೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ.ಕೆಲ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಮಗಿರುವ ಪರಮಾಧಿಕಾರವನ್ನೂ ಬಳಸುತ್ತಾರೆ. ಅದನ್ನು ಸ್ವಪಕ್ಷದಹಾಗೂ ಸರಕಾರದ ಪ್ರಮುಖ ಸಚಿವರಾಗಿದ್ದುಕೊಂಡು ಮುಖ್ಯಮಂತ್ರಿಗಳ ನಡೆಯನ್ನು ವಿರೋಧಿಸುವುದರೊಂದಿಗೆ ಚರ್ಚೆಗೆ ಅವಕಾಶ ನೀಡಿರುವುದು ಸರಿಯಲ್ಲ ಎಂದು ಟೀಕಿಸಿದರು.
ಕೋವಿಡ್ ಪ್ರಯುಕ್ತ ಅನುದಾನ ಕೊರತೆ ಹಾಗೂ ಮುಂಬರುವ ತಾ.ಪಂ., ಜಿ.ಪಂ., ಚುನಾವಣೆಎದುರಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರುತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೇಳಿರುವುದು ಸಹಜ. ಅದಕ್ಕೆ ಸ್ಪಂದಿಸಿ ಮುಖ್ಯಮಂತ್ರಿಗಳು ಗ್ರಾಮೀಣಾಭಿವೃದ್ಧಿಇಲಾಖೆಯ ಅನುದಾನವನ್ನು ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿಗಳ ಈ ಕ್ರಮದ ವಿರುದ್ಧ ರಾಜ್ಯಪಾಲರುಮತ್ತು ಕೇಂದ್ರ ವರಿಷ್ಠರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಪಾಲರು ಏನು ಮಾಡಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದರು.
ಶಾಸಕರು ಅನುದಾನ ಕೇಳುವುದು, ಕೊಡುವುದು ತಪ್ಪಾ? ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಪಕ್ಷದ ಶಾಸಕರಿಗೆ ಸರಿಸಮಾನವಾಗಿ ಅನುದಾನ ನೀಡಿದ್ದಾರೆ ಎಂಬ ಹೆಮ್ಮೆ ಇದೆ. ಮುಖ್ಯಮಂತ್ರಿಗಳ ಪರಮಾಧಿಕಾರವನ್ನು ಪ್ರಶ್ನಿಸಲು ಸಂವಿಧಾನದಲ್ಲಿ ಅವಕಾಶವಿದೆಯೇ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಇತಿಮಿತಿಯಲ್ಲಿ ಟೀಕೆ ಟಿಪ್ಪಣಿ ಮಾಡಬೇಕು. ಇಂತಹ ಹೇಳಿಕೆಯಿಂದ ವಿಪಕ್ಷ ನಾಯಕನಸ್ಥಾನದ ಗೌರವ ಕಡಿಮೆಯಾಗುತ್ತದೆ ಎಂದು ಟಾಂಗ್ ನೀಡಿದರು.
ಇದೇ ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ಮಾತನಾಡಿದಾಗ ಮೆದುಳಿಲ್ಲ ಎನ್ನುವ ಸಿದ್ದರಾಮಯ್ಯ, ಈಗ ಬಿಜೆಪಿಗೆ ಮುಜುಗರ ತಂದಾಗ ಈಶ್ವರಪ್ಪ ಅವರಿಗೆಭೇಷ್ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರ ದ್ವಂದ್ವಅಭಿಪ್ರಾಯವನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಿರಿಯಸಚಿವ ಕೆ.ಎಸ್.ಈಶ್ವರಪ್ಪ ಅವರೂ ಒಂದೇ ಜಿಲ್ಲೆಯವರು. ಅವರಲ್ಲಿ ಏನಾದರೂ ಅಭಿಪ್ರಾಯ ಭೇದವಿದ್ದರೆ ಚರ್ಚೆಮೂಲಕ ಬಗೆಹರಿಸಿ ಕೊಳ್ಳಬೇಕಿತ್ತು. ಆದರೂ, ಈಬೆಳವಣಿಗೆಯಿಂದ ರಾಜ್ಯ ಉಪಚುನಾವಣೆ ಮೇಲೆಯಾವುದೇ ರೀತಿಯ ಪರಿಣಾಮ ಬೀರದು. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ನಿಶ್ಚಿತಎಂದು ವಿಶ್ವಾಸ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಸಂಗಮೇಶ್ ದುಂದೂರ್, ಎಂ.ಎಸ್.ಕರಿಗೌಡರ, ವಸಂತ ಮೇಟಿ ಉಪಸ್ಥಿತರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.