ಮೌಂಟೆನ್‌ ಬೈಕ್‌ ಸೈಕ್ಲಿಂಗ್ ಗೆ ಸಿದ್ಧತೆ

18ರಿಂದ ಸ್ಪರ್ಧೆ ಆರಂಭ­ ! 13 ಸಮಿತಿ ರಚನೆ­ ಪೂರ್ವಭಾವಿ ಸಭೆ

Team Udayavani, Feb 6, 2021, 7:36 PM IST

Mountain bike cycling

ಗದಗ: 17ನೇ ರಾಷ್ಟ್ರೀಯ ಸೀನಿಯರ್‌ ಜ್ಯೂನಿಯರ್‌ ಮತ್ತು ಸಬ್‌ ಜ್ಯೂನಿಯರ್‌ ಮೌಂಟೆನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ ಶಿಪ್‌  ಸ್ಪರ್ಧೆಯನ್ನು ಫೆ. 18ರಿಂದ 21ರ ವರೆಗೆ ಸಮೀಪದ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಿರುವ ಮೌಂಟೆನ್‌ ಬೈಕ್‌ ಟ್ರ್ಯಾಕ್‌ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿದ 17ನೇ ರಾಷ್ಟ್ರೀಯ ಸೀನಿಯರ್‌, ಜ್ಯೂನಿಯರ್‌ ಮತ್ತು ಸಬ್‌ ಜ್ಯೂನಿಯರ್‌ ಮೌಂಟೆನ್‌ ಬೈಕ್‌ ಸೈಕ್ಲಿಂಗ್‌ ಚಾಂಪಿಯನ್‌ ಶಿಪ್‌ ಪೂರ್ವಬಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಯಶಸ್ಸಿಗೆ ಸ್ವಾಗತ ಸಮಿತಿ, ಕಾರ್ಯಕ್ರಮ ಸಂಘಟನಾ ಸಮಿತಿ, ಹಣಕಾಸು ಸಮಿತಿ, ಪ್ರಚಾರ ಸಮಿತಿ ಸೇರಿದಂತೆ ಒಟ್ಟು 13 ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಸವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಹೊರ ರಾಜ್ಯಗಳಿಂದ 600 ಸ್ಪರ್ಧಿಗಳು ಆಗಮಿಸುವುದರಿಂದ ಸ್ಪರ್ಧಿಗಳಿಗೆ ಊಟ, ವಸತಿ, ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ನಿಗಾ ವಹಿಸಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ವಸತಿ ಸ್ಥಳಗಳು, ಸ್ನಾನದ ಗೃಹ, ಶೌಚಾಲಯಗಳು ಸೂಕ್ತ ರೀತಿಯಲ್ಲಿ ಇರುವಂತೆ ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಡಾ| ಆನಂದ ಕೆ.ಮಾತನಾಡಿ, ಹೊರ ರಾಜ್ಯಗಳಿಂದ ಬರುವ ಸ್ಪರ್ಧಿಗಳಿಗೆ ಕುಂದುಕೊರತೆ ಉಂಟಾಗದಂತೆ ಮೂಲ ಸೌಕರ್ಯಗಳಾದ ಆಹಾರ, ವಸತಿ,ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸುವ್ಯವಸ್ಥಿತವಾಗಿ ಕಲ್ಪಿಸಿಕೊಡಬೇಕು ಎಂದರು.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಜಿ. ವಿಶ್ವನಾಥ ಸಭೆಗೆ ಕ್ರೀಡಾ ಸ್ಪರ್ಧೆಗಳ ವಿವರದ ಮಾಹಿತಿ ನೀಡಿ, ಪುರುಷರ ವಿಭಾಗದಲ್ಲಿ 19 ವರ್ಷದೊಳಗಿನವರಿಗೆ 30 ಕಿ.ಮೀ, 40 ಕಿ.ಮೀ. ಇಳಿಜಾರು ಪ್ರದೇಶ ಮತ್ತು ಮಹಿಳಾ ವಿಭಾಗದಲ್ಲಿ 19  ವರ್ಷದೊಳಗಿನವರಿಗೆ 20 ಕಿ.ಮೀ,40 ಕಿ.ಮೀ. ಹಾಗೂ ಪುರುಷ ಮತ್ತು ಮಹಿಳೆಯರ ಮಿಶ್ರಿತ ರಿಲೇ ವಿಭಾಗದಲ್ಲಿ ಎರಡು ಪುರಷ ಮತ್ತು ಎರಡು ಮಹಿಳಾ ಸ್ಪರ್ಧಿಗಳನ್ನು ಬಿಡಲಾಗುವುದು. ಪುರಷರ ಜ್ಯೂನಿಯರ್‌ ವಿಭಾಗದಲ್ಲಿ (2002-03 ರೊಳಗೆ ಜನಿಸಿದ್ದು) 17ರಿಂದ 18 ವರ್ಷದೊಳಗಿನವರಿಗೆ 20 ಕಿ.ಮೀ ಮತ್ತು 30 ಕಿಮೀ. ಮಹಿಳಾ ಜ್ಯೂನಿಯರ್‌ ವಿಭಾಗದಲ್ಲಿ (2002-03 ರೊಳಗೆ ಜನಿಸಿದ್ದು) 17ರಿಂದ 18 ವರ್ಷದೊಳಗಿನವರಿಗೆ 15 ಕಿಮೀ, 20 ಕಿಮೀ ಮತ್ತು ರಿಲೇ ಪುರುಷ ಮತ್ತು ಮಹಿಳೆ ಮಿಶ್ರ ವಿಭಾಗದ ಸ್ಪರ್ಧೆಯಲ್ಲಿ ಆಯೋಜಿಸಿದೆ.

ಇದನ್ನೂ ಓದಿ : ಹನ್ನೊಂದು ತಿಂಗಳ ನಂತರ ಚಲನಚಿತ್ರ ಮಂದಿರ ಓಪನ್‌

ಸಬ್‌ ಜ್ಯೂನಿಯರ್‌ ಪುರುಷರ ವಿಭಾಗದಲ್ಲಿ(2004-05 ರೊಳಗೆ ಜನಿಸಿದ್ದು)15ರಿಂದ 16 ವರ್ಷದೊಳಗಿನವರಿಗೆ 10 ಕಿಮೀ, 20  .ಮೀ ಮತ್ತು ಸಬ್‌ ಜ್ಯೂನಿಯರ್‌ ಮಹಿಳಾ ವಿಭಾಗದಲ್ಲಿ  (2004-05 ರೊಳಗೆ ಜನಿಸಿದ್ದು) 15ರಿಂದ 16 ವರ್ಷದೊಳಗಿನವರಿಗೆ 10 ಕಿ.ಮೀ,15 ಕಿ.ಮೀ. ಬಾಲಕರ ವಿಭಾಗದಲ್ಲಿ (2006-08 ರೊಳಗೆ ಜನಿಸಿದ್ದು) 14 ವರ್ಷದೊಳಗಿನವರಿಗೆ 10 ಕಿ.ಮೀ, 15 ಕಿ.ಮೀ,  ಬಾಲಕಿಯರ ವಿಭಾಗದಲ್ಲಿ (2006-08 ರೊಳಗೆ ಜನಿಸಿದ್ದು) 14  ವರ್ಷದೊಳಗಿನವರಿಗೆ 10 ಕಿ.ಮೀ, 15 ಕಿಮೀ. ಸ್ಪರ್ಧೆಗಳು ಜರುಗಲಿವೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್‌ ಎ.,  ರಾಜ್ಯ ಸೈಕ್ಲಿಂಗ್‌ ಸಂಸ್ಥೆ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.