ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ
Team Udayavani, Jan 18, 2022, 10:08 PM IST
ಗಜೇಂದ್ರಗಡ: ಸಮೀಪದ ನಾಗೇಂದ್ರಗಡ ಗ್ರಾಮದ ಜಮೀನಿನಲ್ಲಿದ್ದ ಆಕಳಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ನಡೆದಿದೆ. ಗ್ರಾಮದ ನಿಂಗಪ್ಪ ಹಂಡಿ ಎಂಬುವರ ಹೊಲದಲ್ಲಿ ದನದ ಶೆಡ್ನಲ್ಲಿ ಕಟ್ಟಿದ್ದ ಆಕಳಿನ ಮೇಲೆ ದಾಳಿ ನಡೆಸಿದ ಚಿರತೆ ಆಕಳನ್ನು ಕೊಂದು ಹಿಂಭಾಗದ ಅರ್ಧ ಭಾಗ ತಿಂದು ಹಾಕಿದೆ.
ಕಳೆದ ತಿಂಗಳು ನೆಲ್ಲೂರ ಪ್ಯಾಟಿ ಗ್ರಾಮದಲ್ಲಿ ಚಿರತೆ ಕುದುರೆ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾ ಧಿಕಾರಿ ದೀಪಿಕಾ ಬಾಜಪೆ, ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ಪರಿಮಳ ವಿ.ಎಚ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸ್ಥಳಕ್ಕೆ ಶಾಸಕ ಕಳಕಪ್ಪ ಬಂಡಿ, ತಹಶೀಲ್ದಾರ್ ರಜನಿಕಾಂತ ಕೆಂಗೇರಿ, ಗಜೇಂದ್ರಗಡ ಪಿಎಸ್ಐ ಶರಣಬಸಪ್ಪ ಸಂಗಳದ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಕಳಕಪ್ಪ ಬಂಡಿ ಗ್ರಾಮಸ್ಥರ ಸಮ್ಮುಖದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು. ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಈ ಹಿಂದೆ ಹಲವು ಬಾರಿ ಚಿರತೆ ದಾಳಿ ನಡೆಸಿರುವುದರಿಂದ ಈ ಭಾಗದ ಜನರು ಭಯಭೀತರಾಗಿದ್ದಾರೆ. ಹೀಗಾಗಿ ಅಲ್ಲಲ್ಲಿ ಹೆಚ್ಚು ಬೋನು ಇರಿಸಿ, ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಎಂದು ಅರಣ್ಯ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿ ಕಾರಿ ದೀಪಿಕಾ ಬಾಜಪೆ ಮಾತನಾಡಿ, ಈ ಭಾಗದಲ್ಲಿ ಗುಡ್ಡ ಪ್ರದೇಶ ಇರುವುದರಿಂದ ಚಿರತೆ ಇದ್ದೇ ಇರುತ್ತದೆ. ಗುಡ್ಡದಲ್ಲಿ ಅದಕ್ಕೆ ಆಹಾರ, ನೀರಿನ ಕೊರತೆಯಾದಾಗ ಈ ರೀತಿ ಆಕಳು, ನಾಯಿಗಳ ಮೇಲೆ ದಾಳಿ ನಡೆಸುತ್ತದೆ. ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ. ಚಿರತೆ ಹಿಡಿಯಲು ನಾವು ಕಾರ್ಯಾಚರಣೆ ನಡೆಸುತ್ತೇವೆ ಎಂದು ಧೈರ್ಯ ತುಂಬಿದರು. ವಲಯ ಅರಣ್ಯಾ ಧಿಕಾರಿ ರಾಜು ಗೋಂಧಕರ, ಉಪ ವಲಯ ಅರಣ್ಯಾ ಧಿಕಾರಿ ಅನ್ವರ ಕೊಲ್ಹಾರ, ಮುಖಂಡರಾದ ಶಿವಾನಂದ ಮಠದ, ನಿಂಗಪ್ಪ ಹಂಡಿ, ಶರಣಪ್ಪ ಕುರಿ, ಅಶೋಕ ಜಿಗಳೂರ, ಪರಶುರಾಮ ಹಂಡಿ, ಶಿವಯೋಗಿ ಜಿಗಳೂರ, ಬಾಳು ಗೌಡರ, ಅರಣ್ಯ ರಕ್ಷಕರಾದ ಪುಟ್ಟರಾಜ ಬಿಂಗಿ, ಈಶ್ವರ ಮರ್ತುರು, ಮಲ್ಲಪ್ಪ ಹುಲ್ಲಣ್ಣವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.