ಕಟ್ಟಡ ನಿರ್ಮಾಣ ಪರವಾನಗಿ ಪಡೆಯಲು ಹೊಸ ತಂತ್ರಾಂಶ


Team Udayavani, Mar 4, 2020, 3:29 PM IST

gadaga-tdy-2

ಗಜೇಂದ್ರಗಡ: ಕಚೇರಿಗೆ ಅಲೆಯುವುದು, ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ನಿರ್ಮಾಣ-2 ತಂತ್ರಾಂಶದಲ್ಲಿ ಪರವಾನಗಿ ಪಡೆಯಲು ಹೊಸ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ನಿರ್ಮಾಣ-2 ತಂತ್ರಾಂಶದಲ್ಲಿ ಪರವಾನಗಿ ಪಡೆದ ಸಾರ್ವಜನಿಕರಿಗೆ ಪರವಾನಗಿ ಪತ್ರ ವಿತರಿಸಿ ಮಾತನಾಡಿದ ಅವರು, ಕಟ್ಟಡ ಪರವಾನಗಿ ಈ ಮೊದಲು ಪುರಸಭೆಯಲ್ಲಿ ನೀಡಲಾಗುತ್ತಿತ್ತು. ಆದರೀಗ ಸಾರ್ವಜನಿಕರ ಅಂತರ್‌ ಜಾಲತಾಣದಲ್ಲಿ ಹಾಗೂ ಆಯಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನಾಗರಿಕ ಆನ್‌ಲೈನ್‌ ಸೇವೆಗಳ ವಿಭಾಗದಲ್ಲಿ ಅಳವಡಿಸಿದ ಹೊಸ ತಂತ್ರಾಂಶ ನಿರ್ಮಾಣ-2 ಕಟ್ಟಡ ಪರವಾನಗಿಯ ಅರ್ಜಿ ಸಲ್ಲಿಸಬಹುದಾಗಿದೆ.

ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ಅನುಮತಿ ಸಿಗುತ್ತದೆ. ಬಳಿಕ ನಿಗದಿತ ಶುಲ್ಕವನ್ನು ಪಾವತಿಸಿದರೆ ಆನ್‌ಲೈನ್‌ ಮೂಲಕವೇ ಡಿಜಿಟಲ್‌ ಸಹಿಯುಳ್ಳ ಅನುಮತಿ ಪತ್ರ ಸಿಗುತ್ತದೆ. ಈಗಾಗಲೇ 2019 ಡಿ. 5ರಿಂದಲೇ ರಾಜ್ಯದಲ್ಲಿ ಹೊಸ ತಂತ್ರಾಂಶ ಜಾರಿಗೆ ಬಂದಿದ್ದು, ಸ್ಥಳೀಯ ಪುರಸಭೆಯಲ್ಲಿಯೂ ಈ ತಂತ್ರಾಂಶ ಜಾರಿಗೊಳಿಸಲಾಗಿದ್ದು, ಅರ್ಜಿ ಸಲ್ಲಿಸಿದ್ದ ಕೆಲವರಿಗೆ ಪರವಾನಿಗೆ ಪತ್ರವನ್ನು ನೀಡಲಾಗಿದೆ ಎಂದರು.

ಇದೇ ವೇಳೆ ಅಭಿಯಂತರ ಟಿ. ಸಿದ್ದಲಿಂಗಸ್ವಾಮಿ, ಸರ್ಕಾರ ಜಾರಿಗೊಳಿಸಿದ ನಿರ್ಮಾಣ-2 ತಂತ್ರಾಂಶ ಸಾರ್ವಜನಿಕರಿಗೆ ಅತ್ಯುತ್ತಮವಾದದ್ದು, ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸಹಕಾರಿಯಾಗಿದೆ. ಆದರೆ ತಾಂತ್ರಿಕ ಸಮಸ್ಯೆಯೂ ಇದ್ದು, ನಿಗದಿತ ಅವಧಿಯಲ್ಲಿ ಕಟ್ಟಡ ನಿರ್ಮಾಣ ಪರವಾನಗಿ ಪತ್ರ ದೊರೆಯದಂತಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೂ ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯನ್ನು ಸರಿದೂಗಿಸಲು ಮುಂದಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಐವರಿಗೆ ಕಟ್ಟಡ ಪರವಾನಗಿ ಪತ್ರವನ್ನು ವಿತರಿಸಲಾಯಿತು. ವಿ.ಎಲ್‌. ಬಡಿಗೇರ, ಸಾಗರ ಭಾಂಡಗೆ, ರಾಕೇಶ ಹಂಚಾಟೆ, ಸಿ.ಡಿ. ದೊಡ್ಡಮನಿ, ಹೇಮರಾಜ ಅಣ್ಣಿಗೇರಿ ಇದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.