Gadag-Betageri; ಎಚ್ಚೆತ್ತುಕೊಂಡ ನಗರಸಭೆಯಿಂದ ಬಿಡಾಡಿ ದನಗಳ ಕಾರ್ಯಾಚರಣೆ ಆರಂಭ


Team Udayavani, Aug 8, 2024, 12:10 PM IST

Gadag-Betageri; ಎಚ್ಚೆತ್ತುಕೊಂಡ ನಗರಸಭೆಯಿಂದ ಬಿಡಾಡಿ ದನಗಳ ಕಾರ್ಯಾಚರಣೆ ಆರಂಭ

ಗದಗ: ಕಳೆದ ಹಲವು ದಶಕಗಳಿಂದ ಬಿಡಾಡಿ ದನಗಳ ಹಾವಳಿಗೆ ಕಂಗೆಟ್ಟಿದ್ದ ಗದಗ-ಬೆಟಗೇರಿ ಅವಳಿ ನಗರದ ಜನತೆ ನಿಟ್ಟುಸಿರು ಬಿಡುವ ಸಮಯ ಬಂದಿದೆ. ಅವಳಿ ನಗರದಲ್ಲಿ ಬುಧವಾರ (ಆ 07) ತಡರಾತ್ರಿ ನಗರಸಭೆಯಿಂದ ಬಿಡಾಡಿ ದನಗಳ ಕಾರ್ಯಾಚರಣೆ ಆರಂಭಗೊಂಡಿದೆ.

ನಗರದ ವಿವಿಧೆಡೆ ಗುಂಪು ಗುಂಪಾಗಿ ಕೂಡಿರುವ ಬೀದಿ ದನಗಳನ್ನು ಕ್ಯಾಂಟರ್, ಲಾರಿ ಮೂಲಕ ಗೋಶಾಲೆಗಳಿಗೆ ರವಾನಿಸಲಾಗುತ್ತಿದೆ.

ಬೀದಿ ದನಗಳ ಉಪಟಳವು ಹೆಚ್ಚಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ನಗರಸಭೆಗೆ ಬಂದ ಹಿನ್ನೆಲೆಯಲ್ಲಿ, ಅಲ್ಲದೇ ಕೆಲವೆಡೆ ಅವಘಡಗಳು ನಡೆದ ಹಿನ್ನೆಲೆಯಲ್ಲಿ ಬೀದಿಯಲ್ಲಿ ಬಿಟ್ಟ ದನಗಳ ಮಾಲಿಕರಿಗೆ ತಮ್ಮ-ತಮ್ಮ ದನಗಳನ್ನು ತಮ್ಮ ತಾಬಾಕ್ಕೆ ತೆಗೆದುಕೊಳ್ಳಲು ಆ. 5ರಂದು ಕೊನೆಯ ಗಡವು ನೀಡಲಾಗಿತ್ತು.

ಗಡುವಿನ ಅವಧಿ ಮುಕ್ತಾಯವಾದರೂ ಬೀದಿ ದನಗಳನ್ನು ಅವುಗಳ ಮಾಲೀಕರು ತಮ್ಮ ವಶಕ್ಕೆ ಪಡೆಯದ ಹಿನ್ನೆಲೆಯಲ್ಲಿ ನಗರಸಭೆಯ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸುವ ಕಾರ್ಯಾಚರಣೆ ಆರಂಭಿಸಿದರು.

ಅಲ್ಲದೇ, ಯಾರಾದರೂ ಅನಧಿಕೃತವಾಗಿ ಬೀದಿ ದನಗಳನ್ನು ತೆಗೆದುಕೊಂಡು ಹೋದಲ್ಲಿ ಅಂತವರ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸುವುದಾಗಿ ಗದಗ ಬೆಟಗೇರಿ ನಗರಸಭೆ ಕಾರ್ಯಾಲಯ ತಿಳಿಸಿದೆ.

ಗದಗ ಬೆಟಗೇರಿ ನಗರದಲ್ಲಿ ಬಿಡಾಡಿ ದನಗಳ ಹಾವಳಿ ಕುರಿತು ಉದಯವಾಣಿ ದಿನಪತ್ರಿಕೆಯು ನಿರಂತರವಾಗಿ ವಿಸ್ತೃತ ವರದಿ ಪ್ರಕಟಿಸಿತ್ತು. ಅಲ್ಲದೇ, ಬಿಡಾಡಿ ದನಗಳ ಹಾವಳಿಯಿಂದ ವೃದ್ಧ ಸಾವು ಹಾಗೂ ಅವುಗಳಿಂದಾದ ಅವಘಡಗಳ ಕುರಿತು ಬೆಳಕು ಚೆಲ್ಲಿತ್ತು. ಕೊನೆಗೂ ಎಚ್ಚೆತ್ತುಕೊಂಡ ನಗರಸಭೆ ಬಿಡಾಡಿ ದನಗಳ ಕಾರ್ಯಾಚರಣೆಗೆ ಮುಂದಾಗಿರುವುದು ಸಾರ್ವಜನಿಕರಿಗೆ ಸಂತಸ ಮೂಡಿಸಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.