ವೇತನ ಪಾವತಿ ವಿಳಂಬಕ್ಕೆ  ಆಕ್ರೋಶ 


Team Udayavani, Oct 30, 2018, 4:47 PM IST

30-october-15.gif

ರೋಣ: ಕಳೆದೊಂದು ವರ್ಷದಿಂದ ವೇತನ ಪಾವತಿಸುವಲ್ಲಿ ಸ್ಥಳೀಯ ಪುರಸಭೆ ವಿಳಂಬ ಮಾಡುತ್ತಿದ್ದು, ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿ ಸ್ಥಳೀಯ ಪುರಸಭೆ ದಿನಗೂಲಿ ಪೌರಕಾರ್ಮಿಕರು ಸೋಮವಾರ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಕಳೆದ 10 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದಿನಗೂಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದು, ಎನ್‌ಜಿಒ ಮೂಲಕ ವೇತನ ಪಾವತಿಸುತ್ತಾ ಬರಲಾಗಿದೆ. ಈ ಮೊದಲು ಸರಿಯಾಗಿ ವೇತನ ಪಾವತಿಯಾಗುತ್ತಿತ್ತು. ಆದರೆ ಕಳೆದೊಂದು ವರ್ಷದಿಂದ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ. ಈ ಕುರಿತು ಕಳೆದ ನಾಲ್ಕು ತಿಂಗಳ ಹಿಂದೆ ವೇತನಕ್ಕಾಗಿ ಧರಣಿ ನಡೆಸಿದ ಸಂದರ್ಭದಲ್ಲಿ ಎರಡು ತಿಂಗಳ ವೇತನ ಪಾವತಿಸಲಾಗಿತ್ತು. ಆದರೆ ಮತ್ತೆ ವೇತನ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಈ ಕುರಿತು ಕೇಳಿದಲ್ಲಿ 11 ಜನ ಪೌರಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎನ್ನುತ್ತಿದ್ದಾರೆ. ಆದ್ದರಿಂದ ಕೂಡಲೇ ನಮಗೆ ಪಾವತಿಯಾಗಬೇಕಾದ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿಸಬೇಕು. ಅಲ್ಲದೇ ನಮ್ಮನ್ನು ಮತ್ತೆ ಸೇವೆಗೆ ಸೇರ್ಪಡೆಗೊಳಿಸಬೇಕು. ಕಳೆದ 10 ವರ್ಷದಿಂದ ನಗರ ಸ್ವಚ್ಛತೆಗಾಗಿಯೇ ನಮ್ಮ ಜೀವ ಮುಡುಪಾಗಿಟ್ಟು ದುಡಿದಿದ್ದೇವೆ. ಈಗ ಏಕಾಏಕಿ ಸೇವೆಯಿಂದ ವಜಾಗೊಳಿಸಿದಲ್ಲಿ ನಾವೇನು ಮಾಡಬೇಕು ಎಂದು ದಿನಗೂಲಿ ಪೌರ ಕಾರ್ಮಿಕರಾದ ಗಂಗವ್ವ ಹಲಗಿ, ಮಂಜವ್ವ ಪೂಜಾರ, ಜಯವ್ವ ಹಾದಿಮನಿ, ಹನಮಂತಪ್ಪ ತೆಗ್ಗಿಮನಿ ಅಳಲು ತೋಡಿಕೊಂಡರು.

ವಾರದ ಗಡುವು: ಕೆಲ ಗಂಟೆಗಳ ಕಾಲ ಪುರಸಭೆ ಕಚೇರಿ ಎದುರು ಧರಣಿ ನಡೆಸಿದ ದಿನಗೂಲಿ ಪೌರ ಕಾರ್ಮಿಕರು, ಸ್ಥಳಕ್ಕೆ ಪುರಸಭೆ ಮುಖ್ಯಾ ಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರು ಬಂದು ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು. ಕೆಲಸದ ನಿಮಿತ್ತ ಬೇರೆಡೆ ತೆರಳಿದ ಮುಖ್ಯಾಧಿಕಾರಿ ಕಟ್ಟಿಮನಿ ಅವರನ್ನು ಮೊಬೈಲ್‌ ಮೂಲಕ ಪುರಸಭೆ ವ್ಯವಸ್ಥಾಪಕ ಎಫ್‌.ಎ. ಶೇರಖಾನೆ ಸಂಪರ್ಕಿಸಿ, ಧರಣಿ ನಿರತರೊಂದಿಗೆ ಮಾತನಾಡಿದರು. ಬಳಿಕ ಸ್ಥಳಕ್ಕೆ ಪುರಸಭೆ ಮಾಜಿ ಸದಸ್ಯ ಮಂಜುನಾಥ ಹಾಳಕೇರಿ ಆಗಮಿಸಿ, ಧರಣಿ ನಿರತರಿಗೆ ಕೂಡಲೇ ವೇತನ ಪಾವತಿಸುವಂತೆ ಪುರಸಭೆ ಅಧಿಕಾರಿಗಳಲ್ಲಿ ಒತ್ತಾಯಿಸಿದರು. ಸದ್ಯ ಮುಖ್ಯಾಧಿಕಾರಿಗಳು ಬೇರೆಡೆ ತೆರಳಿದ್ದು, ಅವರು ಬಂದ ತಕ್ಷಣವೇ ಈ ಕುರಿತು ಚರ್ಚಿಸುವಂತೆ ವ್ಯವಸ್ಥಾಪಕ ಶೇರಖಾನೆ ಧರಣಿ ನಿರತರಿಗೆ ತಿಳಿಸಿದರು.

ಆಗ ಧರಣಿ ನಿರತರನ್ನು ಮಾಜಿ ಸದಸ್ಯ ಮಂಜನಾಥ ಹಾಳಕೇರಿ ಮನವೊಲಿಸಿ, ಒಂದು ವಾರ ಗಡುವು ನೀಡಿದರು. ಅಷ್ಟರೊಳಗೆ ಸಮಸ್ಯೆ ಇತ್ಯರ್ಥಗೊಳಿಸದಿದ್ದಲ್ಲಿ ಪುರಸಭೆ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಬಳಿಕ ದಿನಗೂಲಿ ಪೌರ ಕರಾಮಿಕರು ಧರಣಿಯಿಂದ ಹಿಂದೆ ಸರಿದರು. ಬಸಪ್ಪ ಚಲವಾದಿ, ಮಲ್ಲಪ್ಪ ಮುದೇನಗುಡಿ, ಹನಮಂತ ತೆಗ್ಗಿನಮನಿ, ಮಂಜುನಾಥ ಹೊಸಮನಿ, ಮೇಘರಾಜ ತೆಗ್ಗಿನಮನಿ, ಜಯವ್ವ ಹಾದಿಮನಿ, ಮಂಜವ್ವ ಪೂಜಾರ, ಗಂಗವ್ವ ಹಲಗಿ, ಪ್ರೇಮವ್ವ ದೊಡ್ಡಮನಿ, ಬಸವ್ವ ಪೂಜಾರ, ಬಸವವ್‌ ಹಿರೇಮನಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.