ಮೊಹರಂ ಸಂಭ್ರಮಕ್ಕೆ ಜನರ ಕಾತರ


Team Udayavani, Sep 4, 2019, 10:20 AM IST

gadaga-tdy-2

ನರೇಗಲ್ಲ: ಸಂಭ್ರಮದ ಹಿಂದೂ-ಮುಸ್ಲಿಂ ಭಾವೈಕ್ಯ ಸಂಗಮವಾದ ಮೊಹರಂ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಉದ್ಯೋಗ ಹರಿಸಿ ದೂರುದೂರಿಗೆ ತೆರಳಿದ್ದ ಜನರು ಗ್ರಾಮಗಳತ್ತ ಮುಖ ಮಾಡುತ್ತಿದ್ದಾರೆ.

ಉತ್ತರ ಕರ್ನಾಟಕದ ಭಾಗದಲ್ಲಿ ಮೊಹರಂ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಮೊಹರಂ ಆಚರಣೆಯಲ್ಲಿ ಹಿಂದೂ ಬಾಂಧವರು ಹೆಚ್ಚು ಪಾಲ್ಗೊಳ್ಳುವುದು ಈ ಹಬ್ಬದ ವಿಶೇಷ. ಜೀವನೋಪಾಯಕ್ಕಾಗಿ ನಗರದತ್ತ ಮುಖಮಾಡಿದವರೆಲ್ಲ ಮೊಹರಂಗೆ ಹಬ್ಬದಾಚರಣೆಗೆ ಆಗಮಿಸುತ್ತಾರೆ. ಹೀಗೆ ಸದ್ಯ ಮನೆ ಮಂದಿಯೊಂದಿಗೆ ಸೇರಿ ಮೊಹರಂ ತಯಾರಿ ನಡೆಸುತ್ತಿದ್ದಾರೆ.

ಹಿಂದೂಗಳ ಪಾಲ್ಗೊಳ್ಳುವಿಕೆ ಅಧಿಕ: ಹಿಂದೂಗಳೇ ಹೆಚ್ಚು ಪಾಲ್ಗೊಳ್ಳುವ ಮೊಹರಂ ಹಬ್ಬದಲ್ಲಿ ಅಲೈ ದೇವರನ್ನು ಭಕ್ತಿಯಿಂದ ಆರಾಧಿಸಿ, ದೇವರನ್ನು ಕೂಡಿಸುವುದರೊಂದಿಗೆ ಆರಂಭಿಸಿ ಹೊಳೆಗೆ (ದಫನ್‌) ಕಳುಹಿಸುವವರೆಗೂ ಒಂದಿಲ್ಲೊಂದು ಕಾರ್ಯದಲ್ಲಿ ತೊಡಗಿಕೊಂಡಿರುತ್ತಾರೆ. ಪ್ರತಿ ಗ್ರಾಮದ ಮೂರ್‍ನಾಲ್ಕು ಕಡೆಗಳಲ್ಲಿ ಕೂಡಿಸಿಲಾಗಿರುವ ಅಲೈ ದೇವರುಗಳು ಬರುವ ಭಕ್ತರಿಗೆ ಆಶೀರ್ವದಿಸುತ್ತಿವೆ.

ವಿಶಿಷ್ಟ ನಿಯಮಗಳು: ಅಲೈ ದೇವರನ್ನು ಕೂರಿಸುವಾಗ ಗ್ರಾಮೀಣ ಭಾಗದ ಜನ ತಮ್ಮ ಮಕ್ಕಳ ಕೈಗೆ ವಿಶೇಷವಾದ ದಾರ ಕಟ್ಟಿಸುವ ಮೂಲಕ ಫಕೀರರನ್ನಾಗಿಸುತ್ತಾರೆ. ಹೀಗೆ ಫಕೀರರಾದವರು ಕಸ ಪೊರಕೆ, ಚಪ್ಪಲಿಯಂತಹ ವಸ್ತುಗಳನ್ನು ಸ್ಪರ್ಶಿಸುವಂತಿಲ್ಲ. ಬೈಗುಳ ಅಥವಾ ಅವಾಚ್ಯ ಶಬ್ದಗಳನ್ನು ಬಳಸಬಾರದೆಂಬ ನಿಯಮವಿದೆ. ದೇವರುಗಳು ಹೊಳೆಗೆ ಹೋಗುವ ದಿವಸ ಕೈಗೆ ಕಟ್ಟಲಾದ ವಿಶಿಷ್ಠ ದಾರವನ್ನು ಅಗ್ನಿ ಕುಂಡದಲ್ಲಿ ಹಾಕುವ ಮೂಲಕ ಅಲೈ ದೇವರಿಗೆ ಸಮರ್ಪಿಸಲಾಗುತ್ತದೆ.

ಅಚ್ಚೊಳ್ಳಿ, ಕಳ್ಳಳ್ಳಿ: ಮಕ್ಕಳು ಹಾಗೂ ಯುವಕರು ದೇಹಕ್ಕೆ ಹಾಗೂ ಮುಖಕ್ಕೆ ಕಪ್ಪು ಮಸಿ ಅಥವಾ ಬಣ್ಣ ಹಚ್ಚಿಕೊಂಡು ತಲೆಯ ಮೇಲೆ ವಿಶೇಷವಾಗಿ ತಯಾರಿಸಲಾದ ಬಣ್ಣದ ಹಾಳೆ ಅಂಟಿಸಿದ ಟೊಪ್ಪಿಗೆ ಧರಿಸಿ ಸಂಕೇತಗಳ ಮೂಲಕವೇ ಜನರಿಂದ ಹಣ ಕೇಳುವುದು ವಾಡಿಕೆ. ಹೀಗೆ ಕೇಳುವಾಗ ಯಾರಾದರೂ ಮಾತನಾಡಿಸಿದರೆ ತಲೆಯ ಮೇಲಿನ ಟೊಪ್ಪಿಗೆ ತೆಗೆದು ಮಾತನಾಡುತ್ತಾರೆ. ಜನರು ಅಚ್ಚೊಳ್ಳಿ ಅಥವಾ ಕಳ್ಳಳ್ಳಿ ವೇಷ ಧರಿಸಿದವರಿಗೆ ಇಲ್ಲ ಎನ್ನದೇ ತಮ್ಮ ಕೈಲಾದಷ್ಟು ಹಣ ನೀಡಿ ಕಳುಹಿಸುತ್ತಾರೆ. ಸದ್ಯ ಇಂತಹ ದೃಶ್ಯಗಳು ಕಂಡುಬರುತ್ತಿವೆ.

ಹೆಜ್ಜೆ ಕುಣಿತ: ಮೊಹರಂ ಸಂದರ್ಭದಲ್ಲಿ ಗ್ರಾಮೀಣ ಯುವಕರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಒಂದು ಕೈಯಲ್ಲಿ ಸಿಂಗರಿಸಿದ ಕೊಡೆ ಮತ್ತೂಂದು ಕೈಯಲ್ಲಿ ಕೋಲು ಹಿಡಿದು ಹೆಜ್ಜೆ ಕುಣಿತ ಪ್ರದರ್ಶಿಸುತ್ತಾರೆ. ಮನೆ ಮನೆಗೆ ತೆರಳಿ ಕುಣಿದು ಬರುವ ಇವರು, ಮನೆಯವರು ನೀಡುವ ದವಸ ಧಾನ್ಯ ಅಥವಾ ಹಣ ಪಡೆದು ಮುಂದೆ ಸಾಗುತ್ತಾರೆ.

ಗಮನ ಸೆಳೆಯುವ ವಿವಿಧ ವೇಷ: ಮಕ್ಕಳು ಹುಲಿ ವೇಷದೊಂದಿಗೆ ತೆರಳಿದರೆ ಯುವಕರು ಕರಡಿ, ಹೆಣ್ಣು ಗಂಡಿನ ವಿಚಿತ್ರ ವೇಷದೊಂದಿಗೆ ಕುಣಿಯುತ್ತಲೇ ಮನೆ ಮನೆಗೆಸ ತೆರಳುತ್ತಾರೆ. ಈ ಸಂದರ್ಭದಲ್ಲಿ ಹಲಗೆ, ಶಹನಾಯಿ ವಾದನ ಕುಣಿಯುವವರನ್ನು ಹುರಿದುಂಬಿಸುತ್ತವೆ.

ಗಂಧದ ರಾತ್ರಿ-ಕತಲ್ ರಾತ್‌: ಮೊಹರಂ ಗಂಧದ ರಾತ್ರಿ ಕತಲ್ ರಾತ್‌ ದಿನದ ಹಿಂದಿನ ರಾತ್ರಿ ಆಚರಿಸುವ ಕತಲ್ರಾತ್‌ದಂದು ಭಕ್ತರು ಮಸೀದಿಗಳಿಗೆ ತೆರಳಿ ಸಕ್ಕರೆ ತಗೆದುಕೊಂಡು ಪೂಜೆ ಸಲ್ಲಿಸುತ್ತಾರೆ. ಮರು ದಿನ ಬೆಳಗಿನ ಜಾವ ದೇವರುಗಳು ಅಗ್ನಿ ಹಾಯಲಾಗುತ್ತದೆ. ಸಂಜೆ ಹೊಳಗೆ ಕಳುಹಿಸುವುದರೊಂದಿಗೆ ಹಬ್ಬ ಕೊನೆಗೊಳ್ಳುತ್ತದೆ.

 

•ಸಿಕಂದರ್‌ ಎಂ. ಆರಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.