ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ


Team Udayavani, Dec 25, 2019, 12:51 PM IST

gadaga-tdy-2

ರೋಣ: ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆಯನ್ನು ಶೀಘ್ರ ಸರ್ಕಾರ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡ ರಕ್ಷಣಾ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಳಸ ಬಂಡೂರಿ ಯೋಜನೆ ಹೋರಾಟ ಸಮಿತಿ ರೈತ ಮುಖಂಡ ವಿಜಯ ಕುಲಕರ್ಣಿ ಮಾತನಾಡಿ, ಉತ್ತರ ಕರ್ನಾಟಕದ ರೈತರು ಕಳೆದ ಹಲವು ವರ್ಷಗಳಿಂದ ಸತತ ಬರಗಾಲ ಎದುರಿಸುತ್ತಾ ಬಂದಿದ್ದಾರೆ. ಈ ಬಾರಿ ಅತಿಯಾದ ಮಳೆಯಾಗಿ ರೈತರಿಗೆ ಸಮರ್ಪಕವಾದ ಬೆಳೆಗಳು ದೊರೆಯುತ್ತಿಲ್ಲ. ಕಳಸಾ ಬಂಡೂರಿ ಮಹದಾಯಿ ಯೋಜನೆಯು ಈ ಭಾಗದ ಮಹತ್ತರವಾದ ಯೋಜನೆಯಾಗಿದ್ದು, ಈ ಯೋಜನೆಯು ಜಾರಿಯಾದರೆ ರೈತರಿಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಈ ಹಿಂದೆ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಸಮ್ಮತಿ ಸೂಚಿಸಿತ್ತು. ಆದರೇ ಕೇಂದ್ರ ಸರ್ಕಾರವು ಗೋವಾ ಮುಖ್ಯಮಂತ್ರಿ ಹಾಗೂ ಇಬ್ಬರು ಸಂಸದರ ಮಾತಿಗೆ ಮಣೆಹಾಕಿ ಯೋಜನೆಗೆ ತಡೆಯೊಡ್ಡಿದೆ. ಕೇಂದ್ರ ಸರ್ಕಾರವು ಕರ್ನಾಟಕ್ಕೆ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತ ಬಂದಿದೆ ಎಂದು ಆಕ್ರೋಶ ಹೊರಹಾಕಿದರು.

ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೀಲಾ ಚಿತ್ರಗಾರ ಮಾತನಾಡಿ, ಸದ್ಯ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ್ಯೂ ಮಹದಾಯಿ ಯೋಜನೆಯನ್ನು ಪ್ರಾರಂಭಿಸುವಲ್ಲಿ ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ. ಕರ್ನಾಟಕದಿಂದ ಆಯ್ಕೆಗೊಂಡ ಸಂಸದರು ಮಹದಾಯಿ ಯೋಜನೆ ಬಗ್ಗೆ ಮಾತನಾಡಲು ಮುಂದಾಗುತ್ತಿಲ್ಲ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಮಹತ್ತರವಾದ ಯೋಜನೆಯು ನೆನೆಗುದಿಗೆ ಬಿದ್ದಿದೆ. ರೈತರಿಗೆ ನೀರು ಇಲ್ಲದೆ ಬೆಳೆಗಳನ್ನು ಹೇಗೆ ಬೆಳೆಯಲು ಸಾಧ್ಯ. ರೈತರಿಗೆ ಸಮರ್ಪಕ ನೀರು ಒದಗಿಸುವಲ್ಲಿ ಸರ್ಕಾರ ಮುಂದಾಗಬೇಕು. ಇಲ್ಲವಾದರೆ ಬ್ಯಾಂಕ್‌ನಲ್ಲಿ ಪಡೆದ ಬೆಳೆಸಾಲವನ್ನು ರೈತರು ತೀರಿಸಬಾರದು. ಸರ್ಕಾರವೇ ಬೆಳೆಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎಫ್‌. ವೈ. ಕುರಿ, ಕನ್ನಡ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಎಸ್‌.ಎಂ. ಮರಿಗೌಡ್ರ, ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ, ನಿಂಗಪ್ಪ ಹೊನ್ನಾಪುರ, ಉಮೇಶ ಮೇಟಿ, ಸಿರಾಜ್‌ಹೊಸಮನಿ ನಾಗವ್ವ ಕುರಿ, ಶಾಂತಾ ಮೇಟಿ, ಶಂಕ್ರವ್ವ ಹೂಗಾರ, ವಿಜಯಲಕ್ಷ್ಮೀ ಹಿರೇಲಿಂಗನಗೌಡ್ರ, ವಿ.ಎಂ. ವಿರಕ್ತಮಠ, ಸುಮಿತ್ರಾ ಕುರಿ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.