ನೆರೆ ಸಂತ್ರಸ್ತರಿಂದ ರಸ್ತೆ ತಡೆದು ಪ್ರತಿಭಟನೆ


Team Udayavani, Aug 31, 2019, 11:24 AM IST

gadaga-tdy-3

ಹೊಳೆಆಲೂರು: ಮೆಣಸಗಿ ನವ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ತಹಶೀಲ್ದಾರ್‌ ಶರಣಮ್ಮ ಕಾರಿ ಮನವೊಲಿಸಿದರು.

ಹೊಳೆಆಲೂರು: ನವ ಗ್ರಾಮಕ್ಕೆ ಬಂದು ನೆಲೆಸಿರುವ ಮೆಣಸಗಿ ಗ್ರಾಮದ ನಿವಾಸಿಗಳು ಕುಡಿಯುವ ನೀರು, ಸಮರ್ಪಕ ರಸ್ತೆ, ಶಾಲೆ ಸೇರಿದಂತೆ ಸಕಲ ಸೌಲಭ್ಯಗಳಿಂದ ವಂಚಿತವಾಗಿರುವುದಾಗಿ ಆರೋಪಿಸಿ ಗ್ರಾಮಸ್ಥರು ಹೊಳೆಆಲೂರ-ಕೊಣ್ಣೂರ ಮುಖ್ಯ ರಸ್ತೆಯನ್ನು ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟಿಸಿದರು.

20 ದಿನಗಳ ಹಿಂದೆ ಸಂಭವಿಸಿದ ಮಲಪ್ರಭಾ ಹಾಗೂ ಬೆಣ್ಣಿ ಹಳ್ಳದ ಪ್ರವಾಹಕ್ಕೆ ಮನೆ ಮಠ ಕಳೆದುಕೊಂಡು ನವ ಗ್ರಾಮದ ಆಸರೆ ಮನೆಗಳಲ್ಲಿ ವಾಸ ಮಾಡುತ್ತಿದ್ದೇವೆ .ಆದರೆ ನವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕುಡಿಯಲು ಹನಿ ನೀರು ಸಿಗುತ್ತಿಲ್ಲ. ಇನ್ನೂ ಕೆಲ ಮನೆಗಳಿಗೆ ವಿದ್ಯುತ್‌ ಸಂಪರ್ಕವಿಲ್ಲ. ಜಾನುವಾರು ಕಟ್ಟಿಕೊಳ್ಳಲು ಸ್ಥಳದ ಅಭಾವವಿದೆ. ಅದಕ್ಕಿಂತ ನಿತ್ಯ ಜೀವನಕ್ಕೆ ಬೇಕಾದ ವಸ್ತುಗಳು ಸಿಗುತ್ತಿಲ್ಲ. ಇಲ್ಲಿರುವ ರಸ್ತೆಗೆ ಕೆಂಪು ಮಣ್ಣು ಹಾಕಿದ್ದು, ಸುಗಮ ದಾರಿ ಇರದ ಕಾರಣ ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ. ಇಲ್ಲಿಂದ 3 ಕಿಮೀ ದೂರ ಇರುವ ಮೂಲ ಗ್ರಾಮಕ್ಕೆ ಶಿಕ್ಷಣ ಪಡೆಯಲು ತೆರಳುವ ಶಾಲಾ ಮಕ್ಕಳ ಪರದಾಟ ನೋಡುವಂತಿಲ್ಲ. ಮಕ್ಕಳು ಶಾಲೆಗೆ ದುಡ್ಡು ಕೊಟ್ಟು ಹೋಗುವ ಪರಸ್ಥಿತಿಯಿದೆ. ಮೆಣಸಗಿ ನವ ಗ್ರಾಮದಲ್ಲಿ ಒಟ್ಟು 1300 ಮೆನೆಗಳಿದ್ದು, ಪ್ರಾಥಮಿಕ, ಪ್ರೌಢಶಾಲೆ ಇಲ್ಲಿಯೇ ಪ್ರಾರಂಭಿಸಿ, ಹಳೆಯ ಗ್ರಾಮಗಳಲ್ಲಿ ಸಿಗುತ್ತಿದ್ದ ಸೌಲಭ್ಯ ಇಲ್ಲಿ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್‌ ಶರಣಮ್ಮ ಕಾರಿ, ಸಿಪಿಐ ಎಂ.ಐ. ನಡವಿನಮನಿ, ಪಿಎಸ್‌ಐ ಎಲ್.ಕೆ. ಜೋಲಕಟ್ಟಿ, ಜಿ.ಪಂ. ಸದಸ್ಯ ಶಿವಕುಮಾರ ನೀಲಗುಂದ, ಶಿಕ್ಷಣ, ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರೂಂದಿಗೆ ಚರ್ಚಿಸಿ ಇಲ್ಲಿರುವ ನವ ಗ್ರಾಮಗಳ ನಿವಾಸಿಗಳಿಗೆ ಎಲ್ಲ ಮೂಲ ಸೌಲಭ್ಯ ನೀಡುತ್ತೇವೆ. ಮಕ್ಕಳಿಗೆ ಇಲ್ಲಿಂದ ಬೇರೆ ಕಡೆಗೆ ಹೋಗಲು ಉಚಿತ ಬಸ್‌ ಪಾಸ್‌ ವ್ಯವಸ್ಥೆ ಮಾಡಲಾಗುವುದು. ಇಲ್ಲಿನ ಆಸ್ಪತ್ರೆ ಮತ್ತು ಶಾಲೆಗಳನ್ನು 2-3 ದಿನಗಳಲ್ಲಿ ನÊ ಗ್ರಾಮದಲ್ಲೇ ಪ್ರಾರಂಭ ಮಾಡುತ್ತೇವೆ. ರಸ್ತೆ, ಶೌಚಾಲಯ, ಚರಂಡಿ ವ್ಯವಸ್ಥೆ ಆದಷ್ಟು ಬೇಗ ಸುಧಾರಣೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ರವೀಂದ್ರ ಹಿರೇಮಠ, ಗ್ರಾ.ಪಂ ಸದಸ್ಯ ಕೇದಾರಗೌಡ ಮಣ್ಣೂರ, ಶರಣು ಸೂಡಿ, ನಿಂಗಬಸಪ್ಪ ಮುದೇನೂರ, ಮರದಪ್ಪ ಮಾದರ, ಪರಸಪ್ಪ ಮುದೇನೂರ, ಶಿವಾನಂದ ಮಾದರ, ಪುಂಡಲಿಕ ಮಾದರ, ಮುತ್ತಪ್ಪ ಮಾದರ, ಲಿಂಗರಾಜ ಜಾದವ, ಸುಭಾಷ ಕಪ್ಪಲಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.