ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರಿಂದ ಪರಿಹಾರ
Team Udayavani, Jun 29, 2019, 1:29 PM IST
ಶಿರಹಟ್ಟಿ: ಸಂಚಾರ ನಿಯಮ ಪಾಲಿಸವಂತೆ ಪಿಎಸ್ಐ ಬಸವರಾಜ ತಿಪ್ಪರಡ್ಡಿ ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.
ಶಿರಹಟ್ಟಿ: ಪಟ್ಟಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಇಲ್ಲಿನ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪಟ್ಟಣದ ನೆಹರು ವೃತ್ತದಿಂದ ಗಾಂಧಿ ವೃತ್ತದಲ್ಲಿರುವ ಮಾರುಕಟ್ಟೆಯಲ್ಲಿ ವಾರದ ಮೂರು ದಿನಗಳಲ್ಲಿ ಒಂದು ಬದಿಗೆ ಮತ್ತು ಉಳಿದ ದಿನಗಳಲ್ಲಿ ಇನ್ನೊಂದು ಬದಿಗೆ ವಾಹನ ನಿಲ್ಲಿಸುವಂತೆ ಸೂಚನಾ ಫಲಕ ಹಾಕಲಾಗಿದೆ.
ಈ ಹಿಂದೆ ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಲಾಗುತ್ತಿತ್ತು. ಇದರಿಂದ ಇತರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಇದಕ್ಕೆ ಪೊಲೀಸ್ ಸಿಬ್ಬಂದಿ ನೇಮಕವೂ ಮಾಡಲಾಗಿತ್ತು. ಆದರೂ ತೊಂದರೆ ತಪ್ಪಿರಲಿಲ್ಲ. ಹೀಗಾಗಿ ಹೊಸ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಪಿಎಸ್ಐ ಬಸವರಾಜ ತಿಪ್ಪರಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಶುಕ್ರವಾರ ಸಾರ್ವಜನಿಕರಿಗೆ ನಿಯಮ ಪಾಲಿಸುವಂತೆ ಸೂಚನೆ ನೀಡಿದರು.
ಪಟ್ಟಣದ ನೆಹರು ವೃತ್ತದಿದ ಗಾಂಧಿ ವೃತ್ತವನ್ನು ದಾಟಿ ವಾಹನ ಸವಾರರಿಗೆ ಮತ್ತು ನಿಲುಗಡೆಗೆ ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿತ್ತು. ಇದನ್ನು ಪರಿಗಣಿಸಿದ ಪಿಎಸ್ಐ ಬಸವರಾಜ ತಿಪ್ಪರಡ್ಡಿ ನಿಯಮ ಪಾಲಿಸುವಂತೆ ವಾಹನ ಸವಾರರಿಗೆ ಮನವರಿಕೆ ಮಾಡಿಕೊಟ್ಟರು.
ರಸ್ತೆ ಅಗಲೀಕರಣ ಆಗುವವರೆಗೂ ಪರ್ಯಾಯ ವ್ಯವಸ್ಥೆ ಇಲ್ಲದೇ ಇರುವುದರಿಂದ ವಾಹನ ಸವಾರರು ಸಹಕರಿಸಬೇಕು. ಇತರರು ವಾಹನ ಚಲಾಯಿಸುವುದಕ್ಕೆ ಅನುಕೂಲ ಕಲ್ಪಿಸಬೇಕು. ನಿಯಮವನ್ನು ಪಾಲಿಸಬೇಕೆಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.