ಗದಗ-ಬೆಟಗೇರಿ ನಗರಸಭೆಗೆ ಪರಿಷ್ಕೃತ ಮೀಸಲು ಪ್ರಕಟ

ಕಳೆದ ಎರಡೂವರೆ ವರ್ಷಗಳಿಂದ ಚುನಾವಣೆ ನನೆಗುದಿಗೆ ಬಿದ್ದಿತ್ತು.

Team Udayavani, Nov 25, 2021, 2:20 PM IST

ಗದಗ-ಬೆಟಗೇರಿ ನಗರಸಭೆಗೆ ಪರಿಷ್ಕೃತ ಮೀಸಲು ಪ್ರಕಟ

ಗದಗ: ಪ್ರಸಕ್ತ ಸಾಲಿನ ಅಂತ್ಯದೊಳಗೆ ಗದಗ-ಬೆಟಗೇರಿ ನಗರಸಭೆಗೆ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ಸೂಚಿಸಿದ ಬೆನ್ನಲ್ಲೇ ರಾಜ್ಯ ಸರಕಾರ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ನ.4 ರಂದು ಪ್ರಕಟಿಸಿದ್ದ ಪಟ್ಟಿಯ 8 ವಾರ್ಡ್‌ಗಳ ಮೀಸಲು ಬದಲಾಯಿಸಿ ಆದೇಶ ಹೊರಡಿಸಿದೆ. ಕಳೆದ ಬಾರಿ ಮತ್ತು ಈ ಬಾರಿ ಪಟ್ಟಿಯಲ್ಲಿ 8 ವಾಡ್‌ ìಗಳ “ಸಾಮಾನ್ಯ’ ಮತ್ತು “ಸಾಮಾನ್ಯ ಮಹಿಳೆ’ ಯಾಗಿ ಅದಲು ಬದಲಾಗಿವೆ. ಗದಗ-ಬೆಟಗೇರಿ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯ ಹೈಕೋರ್ಟ್‌, ಡಿಸೆಂಬರ್‌ ಒಳಗಾಗಿ ಚುನಾವಣೆ ಪೂರ್ಣಗೊಳಿಸುವಂತೆ ಸೂಚಿಸಿತ್ತು.

ಇದರಿಂದಾಗಿ ಗದಗ-ಬೆಟಗೇರಿ ನಗರಸಭೆ ಸ್ಪರ್ಧಾಕಾಂಕ್ಷಿಗಳಲ್ಲಿ ಚುನಾವಣೆಯ ಕನಸು ಗರಿಗೆದರಿದ್ದು, ವಾರ್ಡ್‌ ಮೀಸಲಾತಿ ಪಟ್ಟಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದವರಿಗೆ ಈಗ ರೆಕ್ಕೆ-ಪುಕ್ಕ ಬಂದಂತಾಗಿದೆ.

ಎರಡೂವರೆ ವರ್ಷದಿಂದ ನನೆಗುದಿಗೆ: ಗದಗ-ಬೆಟಗೇರಿ ನಗರಸಭೆಗೆ ಹಿಂದಿನ ಚುನಾಯಿತ ಮಂಡಳಿಯ ಐದು ವರ್ಷಗಳ ಅವ ಧಿ 9-3-2019 ರಂದು ಪೂರ್ಣಗೊಂಡಿತ್ತು. ಆನಂತರ ವಾರ್ಡ್‌ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಗೊಂದಲದಿಂದ ಕಳೆದ ಎರಡೂವರೆ ವರ್ಷಗಳಿಂದ ಚುನಾವಣೆ ನನೆಗುದಿಗೆ ಬಿದ್ದಿತ್ತು. ಈ ನಡುವೆ ರಾಜ್ಯ ಚುನಾವಣಾ ಆಯೋಗ 2 ಬಾರಿ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಿತ್ತಾದರೂ, ರೋಸ್ಟರ್‌ ಪಾಲನೆಯಲ್ಲಿ ಲೋಪವಾಗಿದೆ ಎಂದು ಆಕ್ಷೇಪಿಸಿ ಕೆಲವರು ಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ 4ನೇ ಬಾರಿಗೆ ರಾಜ್ಯ ಸರಕಾರ ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ವರ್ಗವಾರು ಪರಿಷ್ಕೃತ ಮೀಸಲು ಪಟ್ಟಿ ಪ್ರಕಟಿಸಿದೆ.

ಮೀಸಲಾತಿ ಬದಲಾವಣೆ ಎಲ್ಲೆಲ್ಲಿ?:
ಪರಿಷ್ಕೃತ ಮೀಸಲಾತಿ ಪಟ್ಟಿಯಲ್ಲಿ ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಪೈಕಿ 8 ವಾರ್ಡ್‌ ಮೀಸಲು ಬದಲಾಗಿದೆ. ಕಳೆದ ಸೆಪ್ಟೆಂಬರ್‌ 4 ರಂದು ಹೊರಡಿಸಿದ ಪಟ್ಟಿಯಲ್ಲಿ ಸಾಮಾನ್ಯ ವಾರ್ಡ್‌ಗಳಾಗಿದ್ದ 12, 17, 27 ನೇ ವಾರ್ಡ್‌ಗಳು ಈಗ ಸಾಮಾನ್ಯ ಮಹಿಳೆಯಾಗಿವೆ. ಅದರಂತೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ 14, 19, 25 ನೇ ವಾರ್ಡ್‌ಗಳು ಪರಿಷ್ಕೃತ ಪಟ್ಟಿಯಲ್ಲಿ ಸಾಮಾನ್ಯವಾಗಿ ಮಾರ್ಪಡಿಸಲಾಗಿದೆ.

ಹಿಂದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ 5ನೇ ವಾರ್ಡ್‌ ಈಗ ಹಿಂದುಳಿದ ವರ್ಗ ಎ(ಮಹಿಳೆ) ಮತ್ತು ಈ ಹಿಂದೆ ಹಿಂದುಳಿದ ವರ್ಗ ಎ(ಮಹಿಳೆ)ಗೆ ಮೀಸಲಾಗಿದ್ದ
15ನೇ ವಾರ್ಡ್‌ ಈಗ ಸಾಮಾನ್ಯ ವಾರ್ಡ್‌ ಆಗಿ ಬದಲಾಯಿಸಲಾಗಿದೆ. ಇನ್ನುಳಿದ ಎಲ್ಲ ವಾರ್ಡ್‌ ಮತ್ತು ವರ್ಗಗಳ ಮೀಸಲಾತಿಯನ್ನು ಯಥಾವತ್ತಾಗಿ ಮುಂದುವರಿಸಲಾಗಿದೆ.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.