ಗಲಭೆ ಪ್ರಚೋದನೆಗೆ ಅವಕಾಶ ನೀಡುವುದಿಲ್ಲ: ಎಸ್‌ಪಿ

ಯಾವುದೇ ಪ್ರಚೋದನಕಾರಿ ಸಂದೇಶ ಕಳಿಸುವಂತಿಲ್ಲ. ಈ ಬಗ್ಗೆ ನಿಗಾ ವಹಿಸಲಾಗಿದೆ.

Team Udayavani, Jan 19, 2022, 6:25 PM IST

ಗಲಭೆ ಪ್ರಚೋದನೆಗೆ ಅವಕಾಶ ನೀಡುವುದಿಲ್ಲ: ಎಸ್‌ಪಿ

ನರಗುಂದ: ಪಟ್ಟಣದಲ್ಲಿ ಎರಡು ಕೋಮುಗಳ ಮಧ್ಯೆ ನಡೆದ ಗಲಭೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೋಮು ಗಲಭೆ ಪ್ರಚೋದನೆಗೆ ಅವಕಾಶ ನೀಡುವುದಿಲ್ಲ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಶಿವಪ್ರಕಾಶ ದೇವರಾಜು ಹೇಳಿದರು.

ಕೋಮು ಗಲಭೆ ಹಿನ್ನೆಲೆಯಲ್ಲಿ ಪಟ್ಟಣದಲ್ಲೇ ಠಿಕಾಣಿ ಹೂಡಿರುವ ಅವರು, ಮಂಗಳವಾರ ಸಾಯಂಕಾಲ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟನೆಯ ಪ್ರಚೋದನೆಗೆ ಕಾರಣರಾದವರನ್ನು ವಶಕ್ಕೆ ಪಡೆಯುವ ಕಾರ್ಯ ನಡೆದಿದೆ. ಘಟನೆಗೆ ಸಂಬಂ ಧಿಸಿದಂತೆ ಸಾಮಾಜಿಕ ಜಾಲತಾಣ, ಫೇಸ್‌ಬುಕ್‌, ವಾಟ್ಸ್ ಆ್ಯಪ್‌ಗ್ಳಲ್ಲಿ ಯಾವುದೇ ಪ್ರಚೋದನಕಾರಿ ಸಂದೇಶ ಕಳಿಸುವಂತಿಲ್ಲ. ಈ ಬಗ್ಗೆ ನಿಗಾ ವಹಿಸಲಾಗಿದೆ.

ನ.27ರಿಂದ ಇದುವರೆಗೂ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಎರಡೂ ಕೋಮುಗಳಲ್ಲಿ 150 ಜನರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. ಘಟನೆಗೆ ಸಂಬಂ ಧಿಸಿದಂತೆ ಮಲ್ಲಿಕಾರ್ಜುನ ಹಿರೇಮಠ(22), ಚನ್ನು ಅಕ್ಕಿ(19), ಸಕ್ರೆಪ್ಪ ಕಾಕನೂರ(19), ಸಂಜೀವ ನಲವಡೆ(42) ಸೇರಿದಂತೆ ನಾಲ್ವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಓರ್ವ ತಲೆಮರೆಸಿಕೊಂಡಿದ್ದಾನೆ ಎಂದರು.

ಚಾಕು ಇರಿತ-ಓರ್ವ ಸಾವು: ಸೋಮವಾರ ರಾತ್ರಿ 7.15 ಗಂಟೆಗೆ ಸ್ಥಳೀಯ ಪುರಸಭೆ ಹಿಂಭಾಗ ಬೈಕ್‌ನಲ್ಲಿ ಹೊರಟಿದ್ದ ಇಬ್ಬರನ್ನು ತಡೆದು ಚಾಕುವಿನಿಂದ ಇರಿಯಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನೂ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆ ಪೈಕಿ ಸಮೀರ ಸುಬಾನಸಾಬ ಶಹಪುರ(20) ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಶಮಸೀರಖಾನ ಪಠಾಣ(22) ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದೆ ಎಂದರು. ಡಿಎಸ್‌ಪಿಗಳಾದ ಶಂಕರ ರಾಗಿ, ಶಿವಾನಂದ ಪವಾಡಶೆಟ್ಟಿ, ವಿಜಯ ಬಿರಾದಾರ, ಸಿಪಿಐ ನಂದೀಶ್ವರ ಕುಂಬಾರ ಇದ್ದರು.

ಭಾರೀ ಬಿಗಿ ಬಂದೋಬಸ್ತ್
ನರಗುಂದ: ಪಟ್ಟಣದಲ್ಲಿ ಎರಡು ಕೋಮುಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಗಲಭೆ ನಡೆದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ. ಪಟ್ಟಣ ಹೊರವಲಯದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಹಾಗೂ ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಎರಡು ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ. 4 ಡಿಎಆರ್‌ ತುಕಡಿ ಸದ್ಯ ಕಾರ್ಯನಿರ್ವಹಿಸುತ್ತಿದ್ದು, 1 ಕೆಎಸ್‌ಆರ್‌ಪಿ ತುಕಡಿ ಬರುವ ನಿರೀಕ್ಷೆಯಿದೆ. 2 ಡಿಎಸ್‌ಪಿ, 5 ಸಿಪಿಐ, 7 ಪಿಎಸ್‌ಐ, ಜಿಲ್ಲೆಯಿಂದ 60 ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.