![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 29, 2021, 9:42 PM IST
ಲಕ್ಷ್ಮೇಶ್ವರ: ತಾಲೂಕು ವ್ಯಾಪ್ತಿಯ ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅರಣ್ಯೀಕರಣಕ್ಕೆ ಲಕ್ಷಾಂತರ ಸಸಿಗಳು ಸಿದ್ಧಗೊಂಡಿವೆ.
ಸುಮಾರು 30 ಎಕರೆ ವಿಸ್ತೀರ್ಣದ ಶೆಟ್ಟಿಕೇರಿ ಕೆರೆಯಂಚಿನ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆಯ ಎರಡು ಪ್ರತ್ಯೇಕ ಸಸ್ಯಪಾಲನಾ ಕೇಂದ್ರಗಳಿದ್ದು, ಇಲ್ಲಿನ ಅ ಧಿಕಾರಿಗಳು, ಸಿಬ್ಬಂದಿ ವರ್ಗ, ದಿನಗೂಲಿ ಕೆಲಸಗಾರರು ಸಸಿಗಳ ಪಾಲನೆ-ಪೋಷಣೆ ಮೂಲಕ ಹಸಿರೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಇದರ ಫಲವಾಗಿ ಸಾಮಾಜಿಕ ಅರಣ್ಯ ವಲಯ ವಿಭಾಗದಿಂದ 1,31,732 ಸಸಿಗಳು ಮತ್ತು ಪ್ರಾದೇಶಿಕ ವಲಯದಿಂದ 1,18,981 ಸಸಿಗಳು ಸಿದ್ಧಗೊಂಡಿವೆ.
ವಿವಿಧ ಜಾತಿಯ ಸಸಿಗಳು: ಶೆಟ್ಟಿಕೇರಿ ಸಸ್ಯಪಾಲನಾ ಕೇಂದ್ರದಲ್ಲಿ ರೈತರಿಗಾಗಿ,ರಸ್ತೆಬದಿ, ಶಾಲಾ-ಕಾಲೇಜು ಮೈದಾನಗಳಲ್ಲಿ ನೆಡಲು ಸಸಿಗಳು ಲಭ್ಯವಿವೆ. ಬೇವು, ತಪ್ಪಸಿ, ಹಲಗಲ, ಗುಲ್ಮೊಹರ್, ಅಶೋಕ, ಹುಣಸಿ, ಮಹಾಗನಿ, ಶ್ರೀಗಂಧ, ಕಾಡು ಬಾದಾಮಿ, ಬಂಗಾಳಿ, ಕರಿಬೇವು, ನೆಲ್ಲಿ, ಸಾಗವಾನಿ, ನುಗ್ಗಿ, ರೆಂಟ್ರಿ, ಇಲಾತಿ ಹುಣಸಿ, ಬನ್ನಿ, ಪೇರಲ, ಮಾವು ಇತರೆ ಸಸಿಗಳಿವೆ. ಈಗಾಗಲೇ ರೈತರು, ಸಾರ್ವಜನಿಕರು, ಸರ್ಕಾರಿ ಇಲಾಖೆಯವರು, ಗ್ರಾಪಂ-ತಾಪಂ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳು ಇಲ್ಲಿಂದ ಉಚಿತವಾಗಿ ಸಸಿ ಪಡೆದು ನೆಟ್ಟಿರುವ ಮತ್ತು ನೆಡುತ್ತಿರುವ ಕಾರ್ಯಗಳು ಪ್ರಗತಿ ಹಂತದಲ್ಲಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.