ಇಳಿಜಾರು ಬದು ನಿರ್ಮಾಣ ಕಾರ್ಯಾರಂಭ


Team Udayavani, May 15, 2019, 12:44 PM IST

gadaga-tdy-3..

ಲಕ್ಷ್ಮೇಶ್ವರ: ಹುಲ್ಲೂರಲ್ಲಿ ಎನ್‌ಆರ್‌ಇಜಿ ಯೋಜನೆಯಡಿ ಕೃಷಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಬದು ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ಕೃಷಿ ಕೂಲಿಕಾರರು.

ಲಕ್ಷ್ಮೇಶ್ವರ: ಜನರು ಬರಗಾಲದಲ್ಲಿ ಉದ್ಯೋಗವಿಲ್ಲದೇ ಕೆಲಸ ಅರಸಿ ನಗರ ಮತ್ತು ಪಟ್ಟಣದ ಪ್ರದೇಶಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಹಾಗೂ ಅಂತರ್ಜಲ ವೃದ್ಧಿ, ಭೂ ಸವಕಳಿ ತಪ್ಪಿಸಿ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಕೃಷಿ ಇಲಾಖೆ ಇಳಿಜಾರು ಬದುವು ನಿರ್ಮಾಣ ಕಾರ್ಯ ಆರಂಭಿಸಿದೆ.

ಈ ಕಾರ್ಯಕ್ಕೆ ಉಪಗ್ರಹ ಆಧಾರಿತ ಸಮೀಕ್ಷೆ ಮಾಡಿ ಹುಲ್ಲೂರ ಗ್ರಾಮದಲ್ಲಿ ಜಲಾನಯನ ಪ್ರದೇಶ ಗುರುತಿಸಿ 1050 ಎಕರೆ ಜಮೀನುಗಳಲ್ಲಿ ಬದುವು ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಒಟ್ಟು 1.90 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ 64,886 ಸಾವಿರ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮಳೆಗಾಲದಲ್ಲಿ ಮೇಲ್ಭಾಗದಿಂದ ಹರಿದು ಹೋಗುವ ನೀರು ಭೂಮಿಯ ಮೇಲ್ಪದರ ಕೊಚ್ಚಿಕೊಂಡು ಹೋಗಿ ಮಣ್ಣಿನ ಸವಕಳಿ ಜೊತೆಗೆ ಫಲವತ್ತತೆ ಕುಂಠಿತಗೊಳಿಸುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಇಳಿಜಾರುಗಳ ಅಲ್ಲಲ್ಲಿ ಅಡ್ಡಲಾಗಿ ಬದುವು ಮತ್ತು ಗುಂಡಿಗಳ ನಿರ್ಮಾಣ ಮಾಡಿ ನೀರು ಇಂಗಿಸುವಿಕೆಗೆ ಆದ್ಯತೆ ನೀಡಲಾಗುತ್ತಿದೆ.

ಇದು ಒಂದು ಕಡೆ ರೈತರಿಗೆ ಮತ್ತೂಂದು ಕಡೆ ಕೃಷಿ ಕೂಲಿಕಾರ್ಮಿಕರಿಗೆ ವರದಾನವಾಗಿ ಪರಿಣಮಿಸಿದೆ. ರೈತರು ಕಳೆದ ಮೂರ್‍ನಾಲ್ಕು ವರ್ಷಗಳ ಬರಗಾಲದಿಂದ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದಾರೆ. ರೈತರೇ ತಮ್ಮ ಜಮೀನುಗಳಲ್ಲಿ ಇಳಿಜಾರು ಬದುವು ನಿರ್ಮಿಸಿಕೊಳ್ಳಲು ಅಸಹಾಯಕರಾಗಿದ್ದಾರೆ. ರೈತರ ಮತ್ತು ಕೂಲಿಕಾರರ ನೆರವಿಗಾಗಿ ಈ ಯೋಜನೆ ಅತ್ಯಂತ ಉಪಯುಕ್ತವಾಗಿದೆ. ಈ ಮೊದಲು ಜಲಾನಯನ ಇಲಾಖೆ ಮುಖಾಂತರ ಈ ಕೆಲಸಗಳನ್ನು ಮಾಡಲಾಗುತ್ತಿತ್ತು. ಕೃಷಿ ಇಲಾಖೆಯೊಂದಿಗೆ ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ತಮ್ಮ ಪಾಲಿನ ಕೆಲಸಗಳನ್ನು ಕ್ರಿಯಾಯೋಜನೆಯಂತೆ ಕೈಗೆತ್ತಿಕೊಳ್ಳುತ್ತಿವೆ. ರೈತರ ಪಾಲಿನ ಆಶಾದಾಯಕವಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲ ಹೇಳುತ್ತಿದ್ದಾರೆ.

ಲಕ್ಷ್ಮೇಶ್ವರದ ಕೃಷಿ ಇಲಾಖೆ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಈ ಕುರಿತು ಪ್ರತಿಕ್ರಿಯೆ ನೀಡಿ, ಹುಲ್ಲೂರ ಗ್ರಾಮದಲ್ಲಿನ 1050 ಎಕರೆ ಪ್ರದೇಶಗಳಲ್ಲಿ ಇಳಿಜಾರು ಬದುವು ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಕಳೆದ ಒಂದು ವಾರದಿಂದ ನಿತ್ಯ 150ಕ್ಕೂ ಹೆಚ್ಚು ಕೃಷಿ ಕೂಲಿಕಾರ್ಮಿಕರು ಈ ಬದುವು ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ರೈತರ ಜಮೀನುಗಳಲ್ಲಿ ತೇವಾಂಶ ಹೆಚ್ಚಿಸುವ ಮತ್ತು ಉದ್ಯೋಗ ನೀಡುವ ಉದ್ದೇಶ ಸಾಫಲ್ಯತೆಯತ್ತ ಸಾಗಿದೆ ಎಂದು ಹೇಳಿದರು.

ಈ ಕುರಿತು ರೈತರಾದ ಸುರೇಶ ಗೌಳಿ, ಗುರುನಾಥಯ್ಯ ಅಮೋಘಿಮಠ, ಚನ್ನಬಸಗೌಡ ಪಾಟೀಲ ಪ್ರತಿಕ್ರಿಸಿ, ಬರಗಾಲದ ಸಂದರ್ಭದಲ್ಲಿ ನಮ್ಮದೇ ಕೃಷಿ ಭೂಮಿಯಲ್ಲಿ ಬದುವು ನಿರ್ಮಾಣದ ಜೊತೆಗೆ ಉದ್ಯೋಗ ನೀಡುತ್ತಿರುವ ಕಾರ್ಯದಿಂದ ನೂರಾರು ರೈತರಿಗೆ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.