ಹೊಳೆಆಲೂರಿನ ನೆರೆ ಸಂತ್ರಸ್ತರಿಗಾಗಿ ವಿಶೇಷ ರೈಲು


Team Udayavani, Aug 9, 2019, 10:19 AM IST

rain

ಗದಗ: ಮಲಪ್ರಭೆ ಹಾಗೂ ಬೆಣ್ಣೆಹಳ್ಳ ಪ್ರವಾಹದ ಸಂತ್ರಸ್ತರನ್ನು ವಿಶೇಷ ರೈಲಿನಲ್ಲಿ ನಗರಕ್ಕೆ ಕರೆತಂದಿರುವ ಜಿಲ್ಲಾಡಳಿತ, ಮತ್ತಷ್ಟು ಜನರನ್ನು ಕರೆತರಲು ಬೆಳಗ್ಗೆ 11 ಗಂಟೆಗೆ ಮತ್ತೊಂದು ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ.

ಸಂತ್ರಸ್ತರಿಗೆ ಇಲ್ಲಿನ ಜಣತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಗುರುವಾರ ಸೂರ್ಯ ಮುಳುಗುತ್ತಿದ್ದಂತೆ ರೋಣ ತಾಲೂಕಿನ ಹೊಳೆಆಲೂರು, ಮೆಣಸಗಿ ಗ್ರಾಮಗಳು ಜಲದಿಗ್ಬಂಧನಕ್ಕೆ ಒಳಗಾಗಿದ್ದವು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಜಿಲ್ಲಾಡಳಿತ, ಗುರುವಾರ ರಾತ್ರಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರವಾಹ ಸಂತ್ರಸ್ತರ ರಕ್ಷಣೆಗಾಗಿ ಹೊಳೆಆಲೂರಿನಿಂದ ಗದಗಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಈ ಮೂಲಕ ಆ ಭಾಗದ ನರೆ ಸಂತ್ರಸ್ತರನ್ನು ಸುರಕ್ಷಿತವಾಗಿ ನಗರಕ್ಕೆ ಕರೆ ತರುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.

ಗುರುವಾರ ತಡ ರಾತ್ರಿ ಗದಗ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ವಿಶೇಷ ರೈಲಿನಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ತಮ್ಮ ಗಂಟು ಮೂಟೆಗಳೊಂದಿಗೆ ಆಗಮಿಸಿದರು. ತಮ್ಮ ಮಕ್ಕಳು ಮರಿ, ಹಾಗೂ ಸಾಕು ಪ್ರಾಣಿಗಳಾದ ನಾಯಿ, ಆಡು ಹಾಗೂ ಕುರಿಗಳನ್ನು ತಂದಿದ್ದು, ಪ್ರವಾಹದ ಭೀಕರತೆಯನ್ನು ಸಾರಿತು.
ಪ್ರವಾಹ ಸಂತ್ರಸ್ತರು ಉಳಿದುಕೊಳ್ಳಲು ಇಲ್ಲಿನ ಜಣತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ತಾತ್ಕಾಲಿಕ ವ್ಯವಸ್ಥೆ ಒದಗಿಸಲಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ಸಂತ್ರಸ್ತರು ಕಲ್ಯಾಣ ಕೇಂದ್ರಕ್ಕೆ ತಲುಪುತ್ತಿದ್ದಂತೆ ನೂರಾರು ಬ್ಲಾಂಕೆಟ್‌ ಗಳೊಂದಿಗೆ ದಾವಿಸಿದ ಸ್ಥಳೀಯ ಜೈನ ಸಮಾಜದ ಯುವಕರು, ಸಂತ್ರಸ್ತರಿಗೆ ಹೊಸ ಬ್ಲಾಂಕೇಟ್‌ಗಳನ್ನು ವಿತರಿಸಿ, ಮಾನವೀಯತೆ ಮೆರೆದರು.

ಸಂತ್ರಸ್ತರಿಗೆ ಶ್ರೀಮಠದಿಂದ ಪ್ರಸಾದ ಹಾಗೂ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಹೊಳೆಆಲೂರು ಭಾಗದಲ್ಲಿ ಇನ್ನೂ ನೆರೆ ಸಂತ್ರಸ್ತರು ಉಳಿದುಕೊಂಡಿದ್ದಾರೆ. ಅವರನ್ನು ನಗರಕ್ಕೆ ಕರೆತರಲು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮತ್ತೊಂದು ವಿಶೇಷ ರೈಲು ಸಂಚರಿಸಲಿದೆ. ಅದರಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.