ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು; 310 ಮಂದಿ ಗೈರು

ಸಿ.ಎಸ್‌. ಪಾಟೀಲ ಪ್ರೌಢಶಾಲಾ ಕೇಂದ್ರದಲ್ಲಿ ಹಿಜಾಬ್‌ ಸದ್ದು

Team Udayavani, Mar 29, 2022, 2:54 PM IST

16

ಗದಗ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಸೋಮವಾರದಿಂದ ಆರಂಭಗೊಂಡಿತು. ನಗರದ ಸಿ.ಎಸ್‌. ಪಾಟೀಲ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಹೊರತುಪಡಿಸಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಿತು.

ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಹೆಸರು ನೋಂದಾಯಿಸಿಕೊಂಡಿದ್ದ 16,476 ಪೈಕಿ 8048 ಗಂಡು, 8118 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 16166 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.

ಜಿಲ್ಲೆಯ 66 ಪರೀಕ್ಷಾ ಕೇಂದ್ರಗಳ ಪೈಕಿ ಗದಗ ಶಹರ ವಲಯದಲ್ಲಿ 121 ವಿದ್ಯಾರ್ಥಿಗಳು, ಗ್ರಾಮೀಣ ವ್ಯಾಪ್ತಿಯಲ್ಲಿ 37, ಮುಂಡರಗಿ ತಾಲೂಕಿನಲ್ಲಿ 50, ನರಗುಂದ ತಾಲೂಕಿನಲ್ಲಿ 9, ರೋಣ ತಾಲೂಕಿನಲ್ಲಿ 43 ಮತ್ತು ಶಿರಹಟ್ಟಿ ತಾಲೂಕಿನಲ್ಲಿ 48 ವಿದ್ಯಾರ್ಥಿಗಳು ಸೇರಿ ಒಟ್ಟು 310 ಗೈರಾಗಿದ್ದಾರೆ.

ಪರೀಕ್ಷಾ ಅಕ್ರಮಗಳ ತಡೆಗಾಗಿ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲಾದ್ಯಂತ ಬಿಗಿ ಭದ್ರತೆಯಲ್ಲಿ ಸುಗಮವಾಗಿ ಪರೀಕ್ಷೆ ನಡೆಯಿತು. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಡಿಬಾರ್‌ ಮತ್ತು ನಕಲು ಅವ್ಯವಹಾರ ನಡೆದಿಲ್ಲವೆಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ರುದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಜಾಬ್‌ ತೆಗೆದಿಟ್ಟ ವಿದ್ಯಾರ್ಥಿನಿಯರು: ನಗರದ ಸಿ.ಎಸ್‌. ಪಾಟೀಲ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಹಾಕಿಕೊಂಡು ಬಂದು ಪರೀಕ್ಷೆ ಬರೆಯುತ್ತಿದ್ದರು ಎಂಬ ಆರೋಪ ಕೇಳಿ ಬಂದಿತು. ಆದರೆ, ಪರೀಕ್ಷೆ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಇರುವ ಮೇಜುಗಳಲ್ಲಿ ಕುಳಿತಿದ್ದರು. ಆ ವೇಳೆಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ವಿತರಿಸಲಾಗಿರಲಿಲ್ಲ. ಬೆಲ್‌ ಕೂಡಾ ಆಗಿರಲಿಲ್ಲ. ಬೆಲ್‌ ಆಗುವ ಮುನ್ನವೇ ಹಿಜಾಬ್‌ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಲಾಯಿತು. ಹಿಜಾಬ್‌ ಧರಿಸಲು ಹಾಗೂ ತೆಗೆದಿರಿಸಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

 

ಸಿ.ಎಸ್‌.ಪಾಟೀಲ ಶಾಲೆಯಲ್ಲಿ ಹಿಜಾಬ್‌ ಧರಿಸಿದ್ದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಡಿಡಿಪಿಐ ಅವರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಸರಕಾರದ ನಿಯಮಗಳನ್ನು ಯಥಾವತ್ತಾಗಿ ಪಾಲಿಸಲಾಗಿದೆ.

-ಆರ್‌.ಎಲ್‌.ಮ್ಯಾಗೇರಿ, ಶಹರ ಬಿಇಒ

 

ಸಿ.ಎಸ್‌.ಪಾಟೀಲ ಪ್ರೌಢಶಾಲೆಯಲ್ಲಿ ಪರೀಕ್ಷೆ ಪೂರ್ವದಲ್ಲಿ ವಿದ್ಯಾರ್ಥಿಗಳು ಹಿಜಾಬ್‌ ಹಾಕಿಕೊಂಡು ಬಂದಿದ್ದರು. ನಂತರ ಶಿಕ್ಷಕರು ಹಿಜಾಬ್‌ ತೆಗೆಸಿ ಪರೀಕ್ಷೆ ಬರೆಸಿದ್ದಾರೆ. ಶಾಲೆಯ ವಿಡಿಯೋಗಳ ಪರಿಶೀಲನೆ ಮಾಡಲಾಗಿದೆ. ವಿದ್ಯಾರ್ಥಿಗಳು ನಂತರ ಹಿಜಾಬ್‌ ತೆಗೆದು ಪರೀಕ್ಷೆ ಬರೆದಿದ್ದು ಕಂಡುಬಂದಿದೆ. ಸರಕಾರದ ಆದೇಶಕ್ಕೆ ಎಲ್ಲೂ ಧಕ್ಕೆಯಾಗಿಲ್ಲ.

-ಜಿ.ಎಂ. ಬಸವಲಿಂಗಪ್ಪ, ಡಿಡಿಪಿಐ

 

ಏಕಾಗ್ರತೆ ಹೆಚ್ಚಿಸಲು ಧ್ಯಾನ: ಭೂಮರೆಡ್ಡಿ ಸರ್ಕಲ್‌ ಸಮೀಪದ ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಮೂರು ನಿಮಿಷಗಳ ಕಾಲ ಧ್ಯಾನ ಮಾಡಿಸಲಾಯಿತು. ಪರೀಕ್ಷೆ ಆರಂಭಕ್ಕೂ ಅರ್ಧ ಗಂಟೆ ಮುನ್ನವೇ ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಲು ಶಾಲೆಯ ಮುಖ್ಯಗುರು ಕೊಟ್ರೇಶ್‌ ಮೆಣಸಿನಕಾಯಿ ಹಾಗೂ ಸಹ ಶಿಕ್ಷಕರು ಪ್ರೇರಣಾದಾಯಕ ಮಾತುಗಳನ್ನಾಡಿದರು. ಯಾವುದೇ ಕಾರಣಕ್ಕೂ ವಿಚಿಲಿತರಾಗಬಾರದು. ಪ್ರತಿಯೊಂದು ಪ್ರಶ್ನೆಗಳಿಗೂ ಸಮಚಿತ್ತ ಉತ್ತರಿಸಬೇಕು. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.