ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು.

Team Udayavani, Feb 18, 2022, 6:04 PM IST

ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಗದಗ: ನಗರದಲ್ಲಿ ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ನಗರದ ವಿವಿಧ ಶಾಲಾ-ಕಾಲೆಜುಗಳಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು, ಗುರುವಾರ ಶಾಲಾ-ಕಾಲೇಜಿಗೆ ಗೈರು ಹಾಜರಾಗುವ ಮೂಲಕ ತರಗತಿಗಳನ್ನು ಬಹಿಷ್ಕರಿಸಿದ್ದು, ನಗರದ ಉರ್ದು ಪ್ರೌಢಶಾಲೆಗೆ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು.

ನಗರದ ಪಂ.ಪುಟ್ಟರಾಜು ಕವಿಗವಾಯಿಗಳ ಬಸ್‌ ನಿಲ್ದಾಣ ಸಮೀಪದ ಉರ್ದು ಪ್ರೌಢ ಶಾಲೆಯಲ್ಲಿ ಕಳೆದ ಸೋಮವಾರ ಕೆಲ ವಿದ್ಯಾರ್ಥಿನಿಯರು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದರಿಂದ ವಿವಾದ ತೀವ್ರ ಸ್ವರೂಪ ಪಡೆದಿತ್ತು. ಬುಧವಾರ ಯಾವುದೇ ಗದ್ದಲ ಇಲ್ಲವಾಗಿತ್ತಾದರೂ, ಗುರುವಾರ ಬಹುತೇಕ ವಿದ್ಯಾರ್ಥಿನಿಯರು ಶಾಲೆಗೆ ಗೈರು ಹಾಜರಾಗಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ತರಗತಿ ವರೆಗೆ ಒಟ್ಟು 221 ವಿದ್ಯಾರ್ಥಿನಿಯರಿದ್ದು, ಈ ಪೈಕಿ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು. 10ನೇ ತರಗತಿಯಲ್ಲಿ 86 ವಿದ್ಯಾರ್ಥಿಗಳಲ್ಲಿ ಮೂವರು, 8ನೇ ತರಗತಿಯ 68 ವಿದ್ಯಾರ್ಥಿಗಳ ಪೈಕಿ ಐವರು ಮಾತ್ರ ಹಾಜರಾಗಿದ್ದು, 9ನೇ ತರಗತಿಯ 67 ವಿದ್ಯಾರ್ಥಿಗಳ ಪೈಕಿ ಯಾರೊಬ್ಬರೂ ಶಾಲೆಗೆ ಹಾಜರಾಗಿಲ್ಲ. ಹೀಗಾಗಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದೇ ತರಗತಿ ಕೊಠಡಿಗಳು ಬಿಕೋ ಎನ್ನುತ್ತಿದ್ದರೆ, ಮಕ್ಕಳಿಗಾಗಿ ಶಿಕ್ಷಕರು ಕಾದು ಕೂರುವಂತಾಯಿತು.

ಇನ್ನು, ಆಂಗ್ಲೋ ಉರ್ದು ಶಾಲೆಯಲ್ಲೂ ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು. ಪ್ರೌಢಶಾಲೆ ಹಾಗೂ ಪದವಿ ಪೂರ್ವ ತರಗತಿಗಳಲ್ಲೂ ಬೆರಳೆಣಿಕೆಯಷ್ಟು ಮಾತ್ರ ವಿದ್ಯಾರ್ಥಿನಿಯರು ಗೈರಾಗಿದ್ದರು ಎಂದು ತಿಳಿದು ಬಂದಿದೆ. ಕಾಲೇಜಿನಿಂದ ವಾಪಸ್‌: ಇಲ್ಲಿನ ಹಳೇ ಕೋರ್ಟ್‌ ಕಟ್ಟಡದಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ಗ ಅವಕಾಶ ನೀಡದಿರುವುದನ್ನು ಖಂಡಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್ಸಾದರು.

ಇದಕ್ಕೂ ಮುನ್ನ ಕಾಲೇಜಿಗೆ ಪ್ರವೇಶಿಸಲು ಅನುಮತಿ ಕೋರಿದರು. ಅದಕ್ಕೆ ನಿರಾಕರಿಸಿದ ಪೊಲೀಸ್‌ ಸಿಬ್ಬಂದಿ, ತರಗತಿ ಕೋಣೆ ವರೆಗೂ ಹಿಜಾಬ್‌ ಧರಿಸಲು ಅವಕಾಶವಿದೆ. ಆದರೆ, ತರಗತಿಯಲ್ಲಿ ಹಿಜಾಬ್‌ಗ ಅವಕಾಶ ನೀಡಲಾಗದು. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರಾದರೂ ಫಲಿಸಲಿಲ್ಲ.

ತರಗತಿಯಲ್ಲೂ ಹಿಜಾಬ್‌ ಧರಿಸಲು ಅವಕಾಶ ನೀಡುವುದಾದರೆ ಮಾತ್ರ ನಾವು ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು, ಹಿಜಾಬ್‌ ಬೇಡವೆಂದಾದರೆ, ನಮಗೂ ತರಗತಿ ಬೇಡ. ಮುಂದೆ ಪರೀಕ್ಷೆ ಬರೆಯದಿದ್ದರೂ, ಚಿಂತೆ ಇಲ್ಲ. ನಾವು ನಮ್ಮ ಧರ್ಮವನ್ನು ಬಿಡೆವು ಎಂದು ಕಡ್ಡಿ ಮುರಿದಂತೆ ಹೇಳಿ, ಮನೆಯತ್ತ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.