ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆಮ್ಮೆಯ ಸೈನಿಕರು. ಅವರಿಗೆ ಪ್ರತಿಯೊಬ್ಬರು ಗೌರವ ನೀಡಬೇಕು

Team Udayavani, Oct 14, 2024, 2:32 PM IST

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

■ ಉದಯವಾಣಿ ಸಮಾಚಾರ
ನರಗುಂದ: ಹೆತ್ತ ತಾಯಿ ,ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು. ಈ ಎರಡನ್ನು ಎದೆಯಿಲ್ಲಿಟ್ಟು ಕಾಪಾಡಬೇಕು. ಪರಕೀಯರಿಂದ ಕಾರ್ಗಿಲ್‌ ಪ್ರದೇಶವನ್ನು ಕಾಪಾಡಿ ವಿಜಯ ಸಾಧಿಸಿ 25 ವರ್ಷಗಳು ಪೂರ್ಣಗೊಂಡಿವೆ. ಕಾರ್ಗಿಲ್‌ ವಿಜಯ ನಮ್ಮ ದೇಶದ ಹೆಮ್ಮೆ ಎಂದು ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.

ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ವೀರ ಬಾಬಾಸಾಹೇಬರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಪೂಜ್ಯ ಶ್ರೀ ಲಿಂ. ದೊರೆಸ್ವಾಮಿಗಳ ಪುಣ್ಯ ಸ್ಮರಣೋತ್ಸವ (ನಮ್ಮೂರ ಜಾತ್ರೆ-2024) ನಿಮಿತ್ತ ಕಾರ್ಗಿಲ್‌ ವಿಜಯೋತ್ಸವ 25ನೇ ವರ್ಷಾಚರಣೆ ಪ್ರಯುಕ್ತ ಚೊಳಚಗುಡ್ಡದಿಂದ ಸಾಗಿಬಂದ ಕಾರ್ಗಿಲ್‌ ಜ್ಯೋತಿ ರಥಯಾತ್ರೆ ಸ್ವಾಗತ ಹಾಗೂ 25 ಕಾರ್ಗಿಲ್‌ ಕಲಿಗಳಿಗೆ ಸನ್ಮಾನ ಮತ್ತು ಕಾರ್ಗಿಲ್‌ ಕಲಿಗಳ ಯಶೋಗಾಥೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೊರೆಸ್ವಾಮಿಮಠ ಸೈನಿಕರಿಗೆ ಗೌರವ ಸೂಚಿಸುವ ಸದುದ್ದೇಶದಿಂದ ವಿಶಿಷ್ಟ ಮತ್ತು ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿದೆ. ಇದು ಇತಿಹಾಸದ ಪುಟಗಳಲ್ಲಿ ಅಜರಾಮರ ಎಂದು ಹೇಳಿದರು.

ಕಾರ್ಗಿಲ್‌ ಯುದ್ಧ ನಮ್ಮ ದೇಶದ ಹೆಮ್ಮೆಯ ಸಂಕೇತ. ಅದು ಸೈನಿಕರ ತ್ಯಾಗ ಬಲಿದಾನದ ಪ್ರತೀಕವಾಗಿದೆ. ಇಂದಿನ ಮಕ್ಕಳು, ಯುವಕರಲ್ಲಿ ನಾನು ನನ್ನದು ಎನ್ನುವ ಮನೋಭಾವ ಬಿಟ್ಟು ನಾವು ನಮ್ಮೊàರು ಎಂಬ ದೇಶಾಭಿಮಾನ ಬೆಳೆಯಬೇಕಿದೆ ಎಂದರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ದೇಶ ನನಗೇನು ಕೊಟ್ಟಿದೆ ಎನ್ನುವ ಬದಲಾಗಿ ದೇಶಕ್ಕೆ ನಾನೇನು ಮಾಡಿದೆ ಎಂದು ಅರಿತುಕೊಳ್ಳ ಬೇಕಾಗಿದೆ. ಯುವಕರಲ್ಲಿ ದೇಶಾಭಿಮಾನ ಬೆಳೆಸಬೇಕಾಗಿದೆ. ಅಂತಹ ಕಾರ್ಯವನ್ನು ಶ್ರೀಮಠ ಮಾಡುತ್ತಿರುವುದು ಅಭಿನಂದನೀಯ. ಎಲ್ಲರೂ ದೇಶದಲ್ಲಿ ಇಷ್ಟೊಂದು ಸುಭದ್ರವಾಗಿರುವುದಕ್ಕೆ ಮುಖ್ಯ ಕಾರಣ ನಮ್ಮ ಹೆಮ್ಮೆಯ ಸೈನಿಕರು. ಅವರಿಗೆ ಪ್ರತಿಯೊಬ್ಬರು ಗೌರವ ನೀಡಬೇಕು ಎಂದು ಹೇಳಿದರು.

ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಸ್ವಾಮಿಗಳು ಆಶೀರ್ವಚನ ನೀಡಿದರು. ಯುವ ದುರೀಣ ವಿವೇಕ ಯಾವಗಲ್ಲ, ಧಾರವಾಡ ಕಾರ್ಗಿಲ್‌ ಸ್ತೂಪದ ಅಧ್ಯಕ್ಷ ಚಂದ್ರಶೇಖರ ಅಮಿನಗಡ, ಬಸವರಾಜ ಮುಕ್ಕುಪ್ಪಿ, ಸಾವಿತ್ರಿ ಯಶವಂತ ಕೋಲಕಾರ,
ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ವೆಂಕಪ್ಪ ಭಾವಿ, ವೀರನಗೌಡ ಪಾಟೀಲ, ಷಣ್ಮುಖಪ್ಪ ಹಳೆಹೊಳಿ, ಬಿ.ಬಿ. ಐನಾಪೂರ, ಚಂದ್ರು ದಂಡಿನ, ಪ್ರಕಾಶಗೌಡ ತಿರಕನಗೌಡ್ರ, ಪತ್ರಯ್ಯ ಹಿರೇಮಠ, ಗಂಗಯ್ಯ ವಸ್ತ್ರದ ಹಾಗೂ ಚೊಳಚಗುಡ್ಡ ಮತ್ತು ತಾಲೂಕಿನ ಎಲ್ಲ ಮಾಜಿ ಸೈನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

1-shahsi

Modi ಮಾನನಷ್ಟ ಕೇಸ್‌: ತರೂರ್‌ ವಿಚಾರಣೆಗೆ ತಡೆಯಾಜ್ಞೆ 4 ವಾರ ವಿಸ್ತರಿಸಿದ ಸುಪ್ರೀಂ

Ballari-Cm

Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag: ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿ ಸ್ವಾಗತಿಸಿದ ಸಚಿವ ಎಚ್. ಕೆ. ಪಾಟೀಲ

Gadag: ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿ ಸ್ವಾಗತಿಸಿದ ಸಚಿವ ಎಚ್. ಕೆ. ಪಾಟೀಲ

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು

1-fffffg

Gadag;ಹಾಡ ಹಗಲೇ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಹಣ ದೋಚಿ ಪರಾರಿ

ವನ್ಯಜೀವಿ ಸಂರಕ್ಷಣೆ ಹೊಣೆಗಾರಿಕೆಯಾಗಲಿ: ಡಾ.ಅನ್ನದಾನೀಶ್ವರ ಶ್ರೀ

ವನ್ಯಜೀವಿ ಸಂರಕ್ಷಣೆ ಹೊಣೆಗಾರಿಕೆಯಾಗಲಿ: ಡಾ.ಅನ್ನದಾನೀಶ್ವರ ಶ್ರೀ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ

cyber crime

Digital arrest; ದಂಧೆ ನಡೆಸುತ್ತಿದ್ದ ತೈವಾನ್ ನ ನಾಲ್ವರು ಸೇರಿ 17 ಮಂದಿ ಬಂಧನ

tamate

Mayur Patel: ಶೋ ರೀಲ್‌ನಲ್ಲಿ ʼತಮಟೆʼ ಸದ್ದು

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Sagara: ಫ್ಲೆಕ್ಸ್ ಹಾಕಿದ್ದಕ್ಕೆ ವಿಶೇಷ ಅರ್ಥ ಬೇಡ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.