![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-415x229.jpg)
ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ
Team Udayavani, Jun 19, 2024, 2:22 PM IST
![ಅತಿವೃಷ್ಟಿ ನಿಯಂತ್ರಣಕ್ಕೆ ಅಧಿಕಾರಿಗಳ ಪಾತ್ರ ಮಹತ್ವ: ಡಿಸಿ](https://www.udayavani.com/wp-content/uploads/2024/06/Gadaga-2-620x255.jpg)
ಉದಯವಾಣಿ ಸಮಾಚಾರ
ಗದಗ: ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಜಿಲ್ಲೆಯ ವಿವಿಧ ಇಲಾಖೆ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜನ-ಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್ಗಳನ್ನು
ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದರೆ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದೆ. ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾ ಧಿತವಾಗುವ
ಹಳ್ಳಿಗಳೆಂದು ಗುರುತಿಸಲಾಗಿದೆ. ಅಲ್ಲಿಯೂ ಸಹ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗುವಂತೆ ಸೂಚಿಸಿದರು.
ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ
ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳ ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳ ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ ಎಂದರು. ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.
ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ
ಶಿರಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Valmiki Corporation case: CM should resign on moral responsibility: Prahlada Joshi](https://www.udayavani.com/wp-content/uploads/2024/06/prahlad-jo-shi-150x83.jpg)
Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
![14-uv-fusion](https://www.udayavani.com/wp-content/uploads/2024/06/14-uv-fusion-1-150x90.jpg)
Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ
![ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ](https://www.udayavani.com/wp-content/uploads/2024/06/car-8-150x103.jpg)
Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ
![Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು](https://www.udayavani.com/wp-content/uploads/2024/06/chk-3-150x106.jpg)
Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು
![what if rain interrupts to icc t20 world cup final? What does the rule say?](https://www.udayavani.com/wp-content/uploads/2024/06/final-150x83.jpg)
ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.