15 ಗ್ರಾಮಗಳಲ್ಲಿ ಮುಕ್ತಿ ಧಾಮಗಳೇ ಇಲ್ಲ!


Team Udayavani, Jan 4, 2020, 3:22 PM IST

gadaga-tdy-1

ನರಗುಂದ: ಮರಣ ಹೊಂದಿದ ವ್ಯಕ್ತಿಗೆ ಮುಕ್ತಿ ನೀಡಲು ಊರಿಗೊಂದು ಸ್ಮಶಾನ ಬೇಕು. ಇದಕ್ಕೆ “ಮುಕ್ತಿಧಾಮ’ ಎಂತಲೂ ಕರೆಯುತ್ತೇವೆ. ಆದರೆ ನರಗುಂದ ತಾಲೂಕಿನ 15 ಗ್ರಾಮಗಳಲ್ಲಿ ಸ್ಮಶಾನಗಳೇ ಇಲ್ಲ! ಹೀಗಾಗಿ ಆಯಾ ಗ್ರಾಮಗಳಲ್ಲಿ ಅಂತ್ಯಕ್ರಿಯೆಗೆ ಸಂಕಷ್ಟ ಸಹಜವಾಗಿದೆ.

ಜೀವಿತಾವಧಿಯಲ್ಲಿ ಏನೆಲ್ಲ ಸೌಕರ್ಯ ಕೊಡುವ ಸರಕಾರ ಊರಿಗೊಂದು ಮುಕ್ತಿಧಾಮ ನಿರ್ಮಿಸಿ ಜೀವ ತ್ಯಜಿಸಿದ ವ್ಯಕ್ತಿಗಳಿಗೆ ಮುಕ್ತಿಗಾಗಿ ಮೂಲ ಸೌಲಭ್ಯ ಒದಗಿಸಲು ಹಿಂದೇಟು ಹಾಕುತ್ತಿದೆ. ತಾಲೂಕಿನ ಕೆಲ ಗ್ರಾಮಗಳಲ್ಲಿ ಸ್ಮಶಾನಗಳಿಲ್ಲದೇ ಯಾರಾದರೂ ತೀರಿದಾಗ ಖಾಸಗಿ ಜಮೀನಿನಲ್ಲೋ ಅಥವಾ ರಸ್ತೆ, ಹಳ್ಳ-ಕೊಳ್ಳಗಳ ದಂಡೆಯಲ್ಲಿ ಅಂತ್ಯಕ್ರಿಯೆ ಮಾಡುವುದು ನಡೆದು ಕೊಂಡುಬಂದಿದ್ದು ವಿಪರ್ಯಾಸ.

ತಾಲೂಕಿನ ಬನಹಟ್ಟಿ ಗ್ರಾಪಂನ ಬನಹಟ್ಟಿ ಸ್ಮಶಾನ ಅಭಿವೃದ್ಧಿಪಡಿಸಲಾಗಿದೆ. ಮೂಗನೂರ ಗ್ರಾಮದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆನಕನಕೊಪ್ಪ ಗ್ರಾಪಂನ ಬೆನಕನಕೊಪ್ಪದಲ್ಲಿ 2, ಸಂಕಧಾಳ, ಭೈರನಹಟ್ಟಿ ಗ್ರಾಪಂನ ಭೈರನಹಟ್ಟಿ, ಮದಗುಣಕಿ, ಚಿಕ್ಕನರಗುಂದ, ಹದಲಿ, ಸುರಕೋಡ, ಕಣಕಿಕೊಪ್ಪ ಗ್ರಾಪಂನ ಕಣಕಿಕೊಪ್ಪ, ಶಿದ್ದಾಪೂರ, ಗುರ್ಲಕಟ್ಟಿ ಗ್ರಾಮಗಳಲ್ಲಿ ಸ್ಮಶಾನಗಳಿವೆ.

ಗ್ರಾಪಂ ವ್ಯಾಪ್ತಿಯಲ್ಲೇ ಇಲ್ಲ: ಹಿರೇಕೊಪ್ಪ ಗ್ರಾಪಂನ ಹಿರೇಕೊಪ್ಪ, ಅರಿಷಿಣಗೋಡಿ, ಕುರುಗೋವಿನಕೊಪ್ಪ, ವಾಸನ ಗ್ರಾಪಂನ ವಾಸನ, ಬೆಳ್ಳೇರಿ, ಲಖಮಾಪುರ ಸೇರಿ ಎರಡೂ ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನಗಳೇ ಇಲ್ಲ. ಸ್ಮಶಾನ ನಿರ್ಮಾಣಕ್ಕೆ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಕೂಡ ಬಂದಿಲ್ಲ ಎಂದು ಹೇಳಲಾಗಿದೆ. ಕೊಣ್ಣೂರ ಗ್ರಾಪಂನ ಕೊಣ್ಣೂರಲ್ಲಿ ಎರಡಿದ್ದು, ಬೂದಿಹಾಳ ಗ್ರಾಮದಲ್ಲಿ ಸ್ಮಶಾನವಿಲ್ಲ.

ರಡ್ಡೇರನಾಗನೂರ ಗ್ರಾಪಂನ ರಡ್ಡೇರನಾಗನೂರ ಹೊರತುಪಡಿಸಿ ಖಾನಾಪುರ, ಗಂಗಾಪುರ, ಹುಣಸೀಕಟ್ಟಿ ಗ್ರಾಪಂನ ಹುಣಸೀಕಟ್ಟಿ, ಜಗಾಪುರ ಗ್ರಾಮಗಳಲ್ಲಿ ಸ್ಮಶಾನಗಳಿಲ್ಲ. ಶಿರೋಳ ಗ್ರಾಪಂನ ಶಿರೋಳದಲ್ಲಿ ಎರಡಿದ್ದು, ಕಪ್ಪಲಿ, ಕಲ್ಲಾಪುರ ಗ್ರಾಮಗಳಲ್ಲಿ ಸ್ಮಶಾನಗಳಿಲ್ಲ. ಕಲಕೇರಿ, ಕಪ್ಪಲಿ ಗ್ರಾಮಗಳ ಖಾಸಗಿ ಜಾಗೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

ನರಗುಂದ ತಾಲೂಕಿನ 33 ಹಳ್ಳಿಗಳ ಪೈಕಿ 18 ಗ್ರಾಪಂಗಳಲ್ಲಿ ಸ್ಮಶಾನಗಳಿದ್ದು, ಉಳಿದ 15 ಗ್ರಾಮಗಳಲ್ಲಿ ಮುಕ್ತಿಧಾಮಗಳ ಅಗತ್ಯವಿದೆ.

ತಾಪಂನಿಂದ ಸ್ಮಶಾನ ಅಭಿವೃದ್ಧಿ ಗುರಿ: ತಾಲೂಕು ಪಂಚಾಯತ್‌ ನರೇಗಾ ಯೋಜನೆಯಡಿ ಚಿಕ್ಕನರಗುಂದ, ಕಣಕಿಕೊಪ್ಪ, ಶಿರೋಳ ಸ್ಮಶಾನ ಅಭಿವೃದ್ಧಿಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಬನಹಟ್ಟಿ, ಹಿರೇಕೊಪ್ಪ, ಕೊಣ್ಣೂರಿನ 2 ಸೇರಿ 4 ಸ್ಮಶಾನ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ.

ಸ್ಮಶಾನಗಳಿಗೆ ಪ್ರಸ್ತಾವನೆ ಸಲ್ಲಿಕೆ :  ತಾಲೂಕಿನ 15 ಗ್ರಾಮಗಳಲ್ಲಿ ಸ್ಮಶಾನಗಳಿಲ್ಲ. ಎಲ್ಲ ಗ್ರಾಮಗಳಿಂದ ಪ್ರಸ್ತಾವನೆ ತರಿಸಿಕೊಂಡು ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ. ಆರೇಳು ಗ್ರಾಮಗಳಲ್ಲಿ ಸರಕಾರಿ ಜಾಗೆ ಇಲ್ಲದ ಕಾರಣ ಖಾಸಗಿ ಜಮೀನು ಖರೀದಿಗೆ ಚಿಂತಿಸಲಾಗಿದೆ. ಸರಕಾರಿ ದರ, ರೈತರ ಬೇಡಿಕೆಯಲ್ಲಿ ವ್ಯತ್ಯಾಸದಿಂದ ವಿಳಂಬವಾಗುತ್ತಿದೆ. ಗ್ರಾಮಕ್ಕೆ ಸಮೀಪ ಜಾಗ ಇರಬೇಕಾದ್ದರಿಂದ ತೊಂದರೆಗಳಿವೆ. ಜಿಲ್ಲಾ ಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಶೀಘ್ರ ಸ್ಮಶಾನಗಳ ತೊಂದರೆ ನಿವಾರಿಸಲಾಗುವುದು. –ಎ.ಎಚ್‌. ಮಹೇಂದ್ರ, ತಹಶೀಲ್ದಾರ್‌ 

 

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.