
ಟೊಮ್ಯಾಟೊ ದರ ಕುಸಿತ: ಕಂಗಾಲಾದ ರೈತ
Team Udayavani, Feb 4, 2020, 3:22 PM IST

ಮುಳಗುಂದ: ಸ್ಥಳೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ಮೂರು ವಾರಗಳಿಂದ ದಿಢೀರ್ ಟೊಮ್ಯಾಟೊ ದರ ಕುಸಿತ ಕಂಡಿದ್ದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಫಸಲಿಗೆ ಬಂದ ಬೆಳೆ ತೀರಾ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಟ್ರೆ ಲೆಕ್ಕದಲ್ಲಿ ಮಾರುಕಟ್ಟೆಗೆ ಬರುವ ಬೆಳೆ ಕನಿಷ್ಠವೆಂದರೂ ಇತ್ತಪ್ಪು ಕೇಜಿ ತೂಕದ ಟ್ರೆಗೆ 200ರಿಂದ 300 ರೂ. ದರ ಸಿಗುತ್ತಿತ್ತು. ಆದರೆ ಇತ್ತೀಚೆಗೆ ದಿಢೀರ್ ಕುಸಿತ ಕಂಡಿದ್ದರಿಂದ ಟ್ರೆ ಒಂದಕ್ಕೆ 80 ರೂ.ಗೆ ಕುಸಿತ ಕಂಡಿದ್ದು, ರೈತರು ಮಾಡಿದ ಖರ್ಚು, ದೂರದ ಸಾಗಣಿಕೆ ವೆಚ್ಚದಿಂದ ಮತ್ತಷ್ಟು ಆರ್ಥಿಕ ಕುಸಿತದಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸದ್ಯ ಗದಗ ಗ್ರಾಮಾಂತರ ಭಾಗದಲ್ಲಿ ನೀರಾವರಿ ಪ್ರದೇಶ ಹೊಂದಿದ ರೈತರು ಬೇಸಿಗೆ ಫಸಲಾಗಿ ಹೆಚ್ಚಿನ ಪ್ರಮಾಣದಲ್ಲಿ ಟೊಮ್ಯಾಟೊ ಬೆಳೆದಿದ್ದು, ದರ ಕುಸಿತದಿಂದ ಮಾರುವುದೆ ಸಮಸ್ಯೆಯಾಗಿದೆ. ಕಟಾಗಿಗೆ ಬಂದ ಮಾಲನ್ನು ಪ್ರತಿನಿತ್ಯ ಹರಿದು ಮಾರುಕಟ್ಟೆಗೆ ಸಾಗಣೆ ಮಾಡಲೇ ಬೇಕು, ಇಲ್ಲವಾದರೆ ಕೊಳೆತು ನಾಶವಾಗುತ್ತದೆ. ಮಾರುಕಟ್ಟೆ ಬಂದರೆ ಕೇಳುವವರೆ ಗತಿ ಇಲ್ಲದಂತಾಗಿ ರಸ್ತೆ ಬದಿಯಲ್ಲಿ ಸ್ವತಃ ರೈತರೆ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಮಾರಾಟ ಮಾಡಿ ಬರುವಂತಾಗಿದೆ. ಒಟ್ಟಾರೆ ರೈತರಿಗೆ ದರ ಕುಸಿತ, ಅತಿವೃಷ್ಟಿ, ಬರಗಾಲದಂಥ ಭೀಕರತೆಗಳು ಪದೇ ಪದೆ ಸಂಭವಿಸಿ ಪ್ರತಿ ಹಂಗಾಮಿನಲ್ಲಿ ನಷ್ಟ ಅನುಭವಹಿಸಿ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ.
ಬೇಸಿಗೆಯಲ್ಲಿ ಉತ್ತಮ ಬೆಳೆ ಸಿಗುತ್ತದೆ ಎಂಬ ಆಶಾಭಾವನೆಯಿಂದ ನಾಟಿ ಹಂತದಿಂದ ಕಟಾವಿನ ವರೆಗೂ ಸಾಕಷ್ಟು ಖರ್ಚು ಮಾಡಿ ಶ್ರಮವಹಿಸಿ ದುಡಿದರೂ ನಮ್ಮ ಮಾಲಿಗೆ ಬೆಲೆ ಇಲ್ಲ. ಹೀಗಾಗಿ ಇಂದು ರಸ್ತೆ ಬದಿಯಲ್ಲಿ ಗಾಡಿ ನಿಲ್ಲಿಸಿಕೊಂಡು ಒತ್ತಾಯಪೂರ್ವಕವಾಗಿ ಮಾರಾಟ ಮಾಡುವಂತಾಗಿದೆ. ದರ ಕುಸಿತದಿಂದ ಮಾಡಿದ ಖರ್ಚು ಮೈಮೇಲೆ ಬಂದಿದೆ.-ಶಿವಮೂರ್ತಿ ಕರಿಗೌಡ್ರ, ಸೊರಟೂರ ರೈತ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.