ಅಗಸ್ತ್ಯತೀರ್ಥ ಹೊಂಡಗಳಿಗೆ ತಡೆಗೋಡೆ ನಿರ್ಮಿಸಲು ಆಗ್ರಹ

ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿಗೆ ಜಯಕರ್ನಾಟಕ ಜನಪರ ವೇದಿಕೆ-ತಾಲೂಕು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಮನವಿ

Team Udayavani, Mar 25, 2022, 4:07 PM IST

17

ಲಕ್ಷ್ಮೇಶ್ವರ: ಪಟ್ಟಣದ ಹೊರವಲಯದಲ್ಲಿರುವ ಐತಿಹಾಸಿಕ ಇತಿಹಾಸವನ್ನು ಹೊಂದಿರುವ ಅಗಸ್ತ್ಯ ತೀರ್ಥ ಬಾವಿಗಳಲ್ಲಿ ಅನೇಕ ದುರ್ಘ‌ಟನೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಂಡಗಳಿಗೆ ತಡೆಗೋಡೆಗಳನ್ನು ನಿರ್ಮಿಸುವಂತೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಜನಪರ ವೇದಿಕೆ ಲಕ್ಷ್ಮೇಶ್ವರ ಘಟಕ ಹಾಗೂ ತಾಲೂಕು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಸೇರಿ ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ತಾಲೂಕು ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ನಾಗೇಶ ಅಮರಾಪುರ ಹಾಗೂ ಜಿಲ್ಲಾ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ನೀಲಪ್ಪ ಪಡಗೇರಿ, ಅಗಸ್ತ್ಯತೀರ್ಥ ಯಾವುದೇ ರೀತಿ ಅಭಿವೃದ್ಧಿ ಇಲ್ಲದೆ ನಿರ್ಲಕ್ಷ್ಯಕ್ಕೊಳಗಾಗಿ ಹಾಳು ಬೀಳುವಂತಾಗಿದೆ.

ಅಗಸ್ತ್ಯ ತೀರ್ಥಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕಾಗಿ ಆಗಮಿಸುತ್ತಾರೆ. ಇಲ್ಲಿರುವ ಎರಡು ಹೊಂಡಗಳಿಗೆ ಯಾವುದೇ ಭದ್ರತೆ ಇಲ್ಲದಂತಾಗಿ ಅನೇಕ ದುರ್ಘ‌ಟನೆಗಳಿಗೆ ಕಾರಣವಾಗುತ್ತಿದೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಇಲ್ಲಿನ ಸುತ್ತಮುತ್ತಲಿನ ಜನರಲ್ಲಿ ಭಯದ ವಾತಾವರಣ ಆವರಿಸಿದೆ.

ಈ ಹಿಂದೆಯೂ ಇದೆ ಹೊಂಡದಲ್ಲಿ ಮೂರ್ನಾಲ್ಕು ಸಾವುಗಳು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಇಂತಹ ಘಟನೆಗಳು ಪದೇ ಪದೆ ನಡೆಯುವುದರಿಂದ ಅನೇಕ ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ. ಆದಕಾರಣ ಇನ್ನು 15 ದಿನದ ಒಳಗೆ ಬಾವಿಯ ಸುತ್ತಲೂ ತಡೆಗೋಡೆ ನಿರ್ಮಿಸಬೇಕು. ಇಲ್ಲದಿದ್ದಲ್ಲಿ ಪುರಸಭೆ ಎದುರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ಅಶ್ವಿ‌ನಿ ಅಂಕಲಕೋಟಿ ಅವರು ಮನವಿ ಸ್ವೀಕರಿಸಿ, ಈ ಕುರಿತಂತೆ ಪುರಸಭೆಯ ಎಲ್ಲ ಸದಸ್ಯರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮೋಹನ ನಂದೆಣ್ಣನವರ, ಸದಾನಂದ ನಂದೆಣ್ಣನವರ, ಮಾಲತೇಶ ರಗಟಿ, ಅಪ್ಪು ಉಮಚಗಿ, ಕಾರ್ತಿಕ ಕುಳಗೇರಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸುರೇಶ ಹಟ್ಟಿ, ಎಂ.ಎಂ. ಹೆಗ್ಗಣ್ಣನವರ, ಎಸ್‌.ಪಿ. ಕರಕಣ್ಣನವರ, ಮಂಜು ಗದ್ದಿ, ಪರಶುರಾಮ ಹೋರಿ, ಹಾಲಪ್ಪ ಹೋರಿ, ಎಂ.ಜಿ. ಗುರುಮಠ ಇದ್ದರು.

ಟಾಪ್ ನ್ಯೂಸ್

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.