ವಿಶ್ವಕರ್ಮರ ಮಾರ್ಗದರ್ಶನ ದಾರಿದೀಪ

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅಭಿಮತ

Team Udayavani, Sep 18, 2022, 4:47 PM IST

17

ಗದಗ: ವಿಶ್ವಕರ್ಮರು ಸಾವಿರಾರು ವರ್ಷಗಳ ಪ್ರಾಚೀನ ಸಂಸ್ಕೃತಿ ಹೊಂದಿದ್ದಾರೆ. ವಿಶ್ವಕರ್ಮರು ದೇವಶಿಲ್ಪಿ ಹಾಗೂ ವಾಸ್ತುಶಿಲ್ಪಿಗಳಾಗಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ವಿಶ್ವಕರ್ಮರು ಕೆಲಸ ಮಾಡದ ಕ್ಷೇತ್ರಗಳಿಲ್ಲ. ಸಮಾಜಕ್ಕೆ ವಿಶ್ವಕರ್ಮರ ಮಾರ್ಗದರ್ಶನ ದಾರಿದೀಪವಾಗಿದೆ ಎಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಮತ್ತು ಅಡ್ವಟೈಸಿಂಗ್‌ ಲಿಮಿಟೆಡ್‌ ಅಧ್ಯಕ್ಷ ಎಂ.ಎಸ್‌. ಕರಿಗೌಡ್ರ ಮಾತನಾಡಿ, ವಾಸ್ತುಶಿಲ್ಪಗಳನ್ನು ಮಾಡುವವರು, ಅನ್ನದಾತನಿಗೆ ನೇಗಿಲು ತಯಾರು ಮಾಡುವವರು ವಿಶ್ವಕರ್ಮರೇ ಆಗಿದ್ದಾರೆ. ಪುರಾತನ ಕಾಲದಿಂದಲ್ಲಿ ಗುರುಕುಲಗಳು ಬದುಕಿನ ಪರಂಪರೆಯನ್ನು ತೋರಿಸಿಕೊಡುತ್ತಿದ್ದವು. ಮನೆಯಲ್ಲಿ ತಾಯಿ ಹಾಗೂ ಗುರುಹಿರಿಯರ ಮಾರ್ಗದರ್ಶ ನದಿಂದಲೇ ಪ್ರತಿಯೊಬ್ಬರೂ ಯಶಸ್ಸನ್ನು ಕಾಣುತ್ತಿದ್ದರು. ಕೃಷಿಗೆ ಅನ್ನದಾತನೇ ಬೆನ್ನೆಲುಬಾದರೆ, ಅನ್ನದಾತನಿಗೆ ನೇಗಿಲು, ಕೃಷಿ ಸಲಕರಣೆಗಳನ್ನು ತಯಾರು ಮಾಡಿಕೊಡುವ ಹೆಮ್ಮೆ ವಿಶ್ವಕರ್ಮರಿಗೆ ಸಲ್ಲುತ್ತದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ ಮಾತನಾಡಿ, ವಿಶ್ವ ಕರ್ಮರು ಸೃಷ್ಟಿಯ ನೀಲನಕ್ಷೆಯ ತಯಾರಕರಾಗಿದ್ದಾರೆ. ಅವರು ಸ್ವರ್ಗದ ಶಿಲ್ಪಿ. ಋಗ್ವೇದದ ಪ್ರಕಾರ ವಿಶ್ವದ ವಾಸ್ತುಶಿಲ್ಪಿಗಳೇ ವಿಶ್ವಕರ್ಮರು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಮಾತನಾಡಿ, ಸರ್ಕಾರದ ಆದೇಶದಂತೆ 2017ರಿಂದ ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತಿದೆ. ಕಲೆಯನ್ನು ಶಿಲೆಯಲ್ಲಿ ಸೃಷ್ಟಿಸಿದವರೇ ವಿಶ್ವಕರ್ಮರು. ಸಿವಿಲ್‌, ಕಟ್ಟಿಗೆ ಕಾಮಗಾರಿ, ವಾಸ್ತುಶಿಲ್ಪಗಳನ್ನು ಮಾಡುವವರು ಅನ್ನದಾತ ನಿಗೆ ನೇಗಿಲು ತಯಾರು ಮಾಡುವವರೇ ವಿಶ್ವ ಕರ್ಮರು ಎಂದರು.

ಶಿಕ್ಷಕ ವಿಶ್ವನಾಥ ಕಮ್ಮಾರ ಮಾತನಾಡಿ, ವಿಶ್ವಕರ್ಮರು ಕಾಯಕ ಯೋಗಿ ಗಳು. ದೇವಾನುದೇವತೆಗಳ ಅರಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದವರಾಗಿ ದ್ದಾರೆ. ಮಹಾಭಾರತ ಕಾಲದಲ್ಲಿ ಶಿಲ್ಪಶಾಸ್ತ್ರ ಮತ್ತು ಯಂತ್ರಶಾಸ್ತ್ರ ಜಗತ್ತಿಗೆ ಕೊಟ್ಟವೇ ವಿಶ್ವಕರ್ಮರು. ತ್ರೇತಾಯುಗದಲ್ಲಿ ಲಂಕಾ ಪಟ್ಟಣ ನಿರ್ಮಾಣ ಮಾಡಿದವರು. ಕೃಷ್ಣ ಪರಮಾತ್ಮನಿಗೆ ದ್ವಾರಕಾನಗರ, ಪಾಂಡವರಿಗೆ ಇಂದ್ರಪ್ರಸ್ತ, ಕೌರವರಿಗೆ ಹಸ್ತಿನಾಪುರ ನಿರ್ಮಾಣ ಮಾಡಿದವರೇ ವಿಶ್ವಕರ್ಮರಾಗಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಬಯಲು ಅಕಾಡೆಮಿಯ ಹಿರಿಯ ಕಲಾವಿದ ಅಶೋಕ ಸುತಾರ ಅವರನ್ನು ಸನ್ಮಾನಿಸಲಾಯಿತು.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ರಾಮಣ್ಣ ಕಮ್ಮಾರ, ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್‌.ಡಿ. ಕಡ್ಲಿಕೊಪ್ಪ, ವಿಶ್ವಕರ್ಮರ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಮೌನೇಶ ಬಡಿಗೇರ, ಮುಖಂಡರಾದ ಶಿವಲೀಲಾ ಬಡಿಗೇರ, ನೇತ್ರಾವತಿ ಬಡಿಗೇರ, ಕೆ.ಎಸ್‌. ಬಡಿಗೇರ, ಸುರೇಶ ಗುಂಜಿಹಾಳ, ಶಂಕರ ಕಂಚಗಾರ, ಎನ್‌.ಎ. ಪತ್ತಾರ, ಮಹೇಶ ಕಮ್ಮಾರ, ಆನಂದ ಕಮ್ಮಾರ, ಎಸ್‌.ಎಂ. ಕದಡಿ, ಎಸ್‌.ವಿ. ಗುಂಜಿಹಾಳ, ಸಿ.ವಿ. ಬಡಿಗೇರ ಸೇರಿದಂತೆ ಅನೇಕರು ಹಾಜರಿದ್ದರು.

ವೆಂಕಟೇಶ ಅಲ್ಕೋಡ ಹಾಗೂ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ ಸ್ವಾಗತಿಸಿ, ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ವಂದಿಸಿದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.