ಕೈ ಗೆ ವರವಾಗುವುದೇ ಸಾಹುಕಾರ ಸವಾಲ್?

•'ಬಂಡಿ' ವೇಗ ತಗ್ಗಿಸಲು ಎದುರಾಳಿಗಳ ಯತ್ನ•ಮೂವರು ಮುಖಂಡರಿಗೆ ಪ್ರತಿಷ್ಠೆಯ ಕಣ

Team Udayavani, May 3, 2019, 2:18 PM IST

gadaga..tdy-1

ಗದಗ: ಈ ಬಾರಿಯ ಲೋಕಸಭೆ ಚುನಾವಣೆ ರೋಣ ಮತಕ್ಷೇತ್ರದ ಮಟ್ಟಿಗೆ ಬಿಜೆಪಿಯ ಹಾಲಿ ಶಾಸಕ ಕಳಕಪ್ಪ ಬಂಡಿ ಹಾಗೂ ಕಾಂಗ್ರೆಸ್‌ನ ಮಾಜಿ ಶಾಸಕರಾದ ಜಿ.ಎಸ್‌. ಪಾಟೀಲ, ಶ್ರೀಶೈಲಪ್ಪ ಬಿದರೂರ ಅವರಿಗೆ ಪ್ರತಿಷ್ಠೆಯ ಕಣ. ಕೊನೆಗಳಿಗೆಯಲ್ಲಿ ಬಿದರೂರ ಸಾಹುಕಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರಿಂದ ಯಾರಿಗೆ ನಷ್ಟ-ಯಾರಿಗೆ ಲಾಭ ಎಂಬುವುದರೊಂದಿಗೆ ಪಕ್ಷಗಳ ಮುನ್ನಡೆ-ಹಿನ್ನಡೆ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ಕಳೆದ ಏ. 23ರಂದು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ಪೂರ್ಣಗೊಂಡಿದ್ದರಿಂದ ಕದನ ಕಲಿಗಳು ರಿಲ್ಯಾಕ್ಸ್‌ ಮೂಡ್‌ಗೆ ಮರಳಿದ್ದರೆ, ರೋಣ ಕ್ಷೇತ್ರದ ಮತದಾರರು ಹಾಗೂ ರಾಜಕೀಯ ನಾಯಕರು ಅಭ್ಯರ್ಥಿಗಳು ಗಳಿಸಬಹುದಾದ ಮತಗಣಿತದಲ್ಲಿ ಕಾರ್ಯಪ್ರವರ್ತರಾಗಿದ್ದಾರೆ.

ರೋಣ ಕ್ಷೇತ್ರ ವ್ಯಾಪ್ತಿಯ ವಿವಿಧ ಬೂತ್‌ ಮಟ್ಟದಲ್ಲಿ ಆಗಿರುವ ಮತದಾನವನ್ನು ಮುಂದಿಟ್ಟುಕೊಂಡು ಆಯಾ ಪಕ್ಷಗಳ ನಾಯಕರು ತಮಗೆ ಎಲ್ಲಿ ಪ್ಲಸ್‌? ಎಲ್ಲಿ ಮೈನಸ್‌ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಗ್ರಾಮೀಣ ಪ್ರದೇಶದ ಕಟ್ಟೆಗಳು, ಚಹ ಅಂಗಡಿಗಳು, ಕಟಿಂಗ್‌ ಶಾಪ್‌, ಹೋಟೆಲ್ ಹಾಗೂ ಅಂಗಡಿ ಮುಂಗಟ್ಟು, ಬಸ್‌ ನಿಲ್ದಾಣಗಳಲ್ಲೂ ಮೇ 23 ರಂದು ಪ್ರಕಟಗೊಳ್ಳುವ ಚುನಾವಣಾ ಫಲಿತಾಂಶ ಹೀಗಿರಬಹುದು ಎಂಬ ಲೆಕ್ಕಾಚಾರಗಳು ಬಿರುಸಾಗಿವೆ.

2014ರ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ರೋಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ ಬಿಜೆಪಿ ಅಭ್ಯರ್ಥಿಗೆ 11 ಸಾವಿರ ಮತಗಳ ಮುನ್ನಡೆಯಾಗಿತ್ತು. ಅದಕ್ಕೂ ಮುನ್ನ ನಡೆದ 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ.ಎಸ್‌. ಪಾಟೀಲ 18 ಸಾವಿರ ಮತಗಳ ಲೀಡ್‌ನಿಂದ ಜಯಭೇರಿ ಬಾರಿಸಿದ್ದರು. ಆನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ 7,500 ಮತಗಳ ಅಂತರದಿಂದ ಬಿಜೆಪಿಯ ಕಳಕಪ್ಪ ಬಂಡಿ ವಿಜಯಮಾಲೆ ಧರಿಸಿದ್ದರು. ಹಿಂದಿನ ಚುನಾವಣಾ ಮತಗಳಿಕೆ ಪ್ರಮಾಣವನ್ನು ಅವಲೋಕಿಸಿದರೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾವು-ಏಣಿ ಆಟವಾಡಿದಂತಿವೆ.

ಆದರೆ, ಈ ಬಾರಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್‌ ಸೇರ್ಪಡೆಯಾಗುವ ಮೂಲಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಬಿಜೆಪಿ ಬಿಗ್‌ ಶಾಕ್‌ ನೀಡಿದ್ದರು. ಮೂಲತಃ ರೋಣದ ಸೂಡಿ ಗ್ರಾಮದವರಾದ ಬಿದರೂರ, ಶತಾಯಗತಾಯ ಡಿ.ಆರ್‌. ಪಾಟೀಲ ಅವರನ್ನು ಗೆಲ್ಲಿಸಿ, ತಮ್ಮನ್ನು ಅಪಮಾನಕರ ರೀತಿಯಲ್ಲಿ ನಡೆಸಿಕೊಂಡ ಬಿಜೆಪಿ ನಾಯಕರಿಗೆ ಪಾಠ ಕಲಿಸುವುದಾಗಿ ತೊಡೆ ತಟ್ಟಿದ್ದರು.

ಈ ಬೆಳವಣಿಗೆಯಿಂದ ತಮಗೆ ಲಾಭವಾಗಲಿದೆ ಎಂದು ಕಾಂಗ್ರೆಸ್‌ ನಾಯಕರು ಬೀಗಿದರು. ಬಿದರೂರ ಪಕ್ಷದ ಹಿರಿಯ ನಾಯಕರು ಅಷ್ಟೇ. ಅವರಿದ್ದಾಗ ಬಿಜೆಪಿಗೆ ಲಾಭವಾಗಿಲ್ಲ. ಪಕ್ಷ ತೊರೆದಿದ್ದರಿಂದ ನಷ್ಟವಿಲ್ಲವೆಂದು ಬಿಜೆಪಿಗರು ಒಳಗೊಳಗೇ ಸಮಾಧಾನಪಟ್ಟಿದ್ದಾರೆ.

ಮಾಜಿ ಶಾಸಕ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿರುವ ಜಿ.ಎಸ್‌. ಪಾಟೀಲ, ಹಾಲಿ ಶಾಸಕ ಕಳಕಪ್ಪ ಬಂಡಿ ಅವರಿಗೆ ತಮ್ಮ ಕ್ಷೇತ್ರದಲ್ಲಿ ಪಕ್ಷಕ್ಕೆ ಮತಗಳ ಮುನ್ನಡೆ ನೀಡುವ ಒತ್ತಡಕ್ಕೆ ಸಿಲುಕಿದ್ದಾರೆ. ಹೀಗಾಗಿ ಉಭಯ ಪಕ್ಷಗಳ ಮೂವರು ನಾಯಕರಿಗೆ ಈ ಬಾರಿ ರೋಣ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿ ತಮ್ಮ ಪ್ರಾಬಲ್ಯ ಪ್ರದರ್ಶಿಸುವ ಅನಿವಾರ್ಯತೆ ಎದುರಾಗಿದೆ ಎಂಬುವುದು ಸಾರ್ವಜನಿಕರ ವಿಶ್ಲೇಷಣೆ.

ಯಾವ ಪಕ್ಷಕ್ಕೆ ಎಲ್ಲಿ ‘ಋಣ’?: ಹಾಲಿ ಶಾಸಕ ಕಳಕಪ್ಪ ಬಂಡಿ ಅವರ ತವರೂರಾದ ಗಜೇಂದ್ರಗಡ ಜನರು ಹಿಂದಿನಿಂದಲೂ ಬಿಜೆಪಿಗೆ ಜೈಕಾರ ಹಾಕಿದರೆ, ರೋಣ ಪಟ್ಟಣ ಕಾಂಗ್ರೆಸ್‌ ಪರವಾಗಿದೆ. ಸೂಡಿ ಜಿ.ಪಂ. ಬಿಜೆಪಿ ಪ್ರಭಾವ ಹೆಚ್ಚಿದ್ದರೆ, ಅಬ್ಬಿಗೇರಿ, ನಿಡಗುಂದ ಜಿ.ಪಂ. ಕ್ಷೇತ್ರದ ಹಳ್ಳಿಗಲ್ಲಿ ಉಭಯ ಪಕ್ಷಗಳು ಭಾಗಶಃ ಹಿಡಿತ ಹೊಂದಿದೆ. ಅಲ್ಪಸಂಖ್ಯಾತರು, ಕುರುಬರು ಹೆಚ್ಚಿನ ಸಂಖ್ಯೆಯಲ್ಲಿರುವ ಹಳ್ಳಿಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಲಿದೆ ಎಂಬ ಲೆಕ್ಕಾಚಾರ ನಡೆದಿದೆ. ಅದರಂತೆ ಮುಂಡರಗಿ ಭಾಗದಲ್ಲೂ ಪಕ್ಷಗಳ ಬೆಂಬಲಿಗರ ಆಧಾರದ ಮೇಲೆ ಬಿಜೆಪಿ ಕಾಂಗ್ರೆಸ್‌ ಮುನ್ನಡೆ-ಹಿನ್ನಡೆ ಚರ್ಚೆ ನಡೆಯುತ್ತಿದ್ದು, ಮೇ 23ರಂದು ಪ್ರಕಟಗೊಳ್ಳುವ ಫಲಿತಾಂಶವೇ ಅದಕ್ಕೆ ಉತ್ತರ.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.