ಕೆರೆ ಒಡೆಯಲು ಕಳಪೆ ಕಾಮಗಾರಿ ಕಾರಣ

ಕುಡಿಯುವ ನೀರಿನ ಕೆರೆ ವೀಕ್ಷಿಸಿದ ಸಚಿವ ನಾಡಗೌಡ

Team Udayavani, May 15, 2019, 5:22 PM IST

15-May-32

ಗೊರೇಬಾಳ: ಸಿಂಧನೂರು ನಗರಕ್ಕೆ ನೀರು ಪೂರೈಸುವ ಕೆರೆಯನ್ನು ಸಚಿವ ವೆಂಕಟರಾವ್‌ ನಾಡಗೌಡ ವೀಕ್ಷಿಸಿದರು.

ಗೊರೇಬಾಳ: ಸಿಂಧನೂರು ನಗರದ ಕುಡಿಯುವ ನೀರಿನ ಕೆರೆ ಒಡೆಯಲು ಕಳಪೆ ಕಾಮಗಾರಿಯೇ ಕಾರಣವಾಗಿದೆ. ಕಾಮಗಾರಿ ಕಳಪೆ ಆಗುತ್ತಿದೆ ಎಂದು ತಾವು ಸಾರಿ ಸಾರಿ ಹೇಳಿದರೂ ಲೆಕ್ಕಿಸದೇ ಆಗಿನ ಶಾಸಕರಾದ ಹಂಪನಗೌಡ ಬಾದರ್ಲಿ ತರಾತುರಿಯಲ್ಲಿ ಹೋಮ ಮಾಡಿ ಕೆರೆ ಉದ್ಘಾಟಿಸಿದರು. ಇದು ಅವರ ಪಾಪದ ಕೂಸಾಗಿದೆ. ಹೋಮ ಮಾಡಿದರೆ ಪಾಪ ತೊಳೆಯುವುದೇ ಎಂದು ಸಚಿವ ವೆಂಕಟರಾವ್‌ ನಾಡಗೌಡ ವ್ಯಂಗ್ಯವಾಡಿದರು.

ಮಂಗಳವಾರ ಸಿಂಧನೂರು ನಗರದ ಕುಡಿಯುವ ನೀರಿನ ಕೆರೆ ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 24/7 ಕುಡಿಯುವ ನೀರಿನ ಕಾಮಗಾರಿ ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಗರದಲ್ಲಿ 6 ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ಸಣ್ಣಪುಟ್ಟ ಸಮಸ್ಯೆಗಳಿದ್ದು, ಅವುಗಳನ್ನು ನಿವಾರಿಸಿ ಇನ್ನೂ ಕೆಲವೇ ದಿನಗಳಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಸಲಾಗುವದು ಎಂದು ಹೇಳಿದರು.

24/7 ಕುಡಿಯುವ ನೀರಿನ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆ ಕಂಪನಿ ವ್ಯವಸ್ಥಾಪಕ ವಿಶ್ವೇಶ್ವರ ಅವರಿಗೆ ಕರೆ ಮಾಡಿದ ಸಚಿವರು, ಕಾಮಗಾರಿ ಮಾಹಿತಿ ಪಡೆದು, ವ್ಯವಸ್ಥಾಪಕರ ವಿರುದ್ಧ ಹರಿಹಾಯ್ದರು. ಮಂತ್ರಿಯಾದ ನನಗೆ ಇಷ್ಟೊಂದು ಸುಳ್ಳು ಹೇಳ್ತೀರಾ? ನಿಮ್ಮನ್ನು ಕೇಳಲು ನನಗೆ ನಾಚಿಕೆ ಇಲ್ದಂಗೆ ಹಾಗಿದೆ. ಪ್ರತಿ ಬಾರಿಯೂ ನನ್ನನ್ನು ಫೂಲ್ ಮಾಡಲು ಪ್ರಯತ್ನ ಮಾಡುತ್ತಿದ್ದೀರಾ? ನಾನು ಸ್ಥಳದಲ್ಲೇ ಇದ್ದೇನೆ. ಸುಳ್ಳು ಹೇಳುತ್ತಾ ಆಟ ಆಡ್ತೀರಾ? ಎಂದು ತರಾಟೆಗೆ ತೆಗೆದುಕೊಂಡರು. ಗುತ್ತಿಗೆ ಕಂಪನಿಗೆ ನೋಟಿಸ್‌ ಜಾರಿ ಮಾಡುವಂತೆ ಮತ್ತು 17ರಂದು ಸಭೆ ಕರೆಯುವಂತೆ ಸಿಂಧನೂರು ನಗರಸಭೆ ಪೌರಾಯುಕ್ತರಿಗೆ ಸಚಿವರು ಸೂಚನೆ ನೀಡಿದರು.

ಮಾದರಿ ಕಾಯ: ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ಹಿರೇಹಳ್ಳ ಸ್ವಚ್ಛತೆಗೆ ಮುಂದಾಗಿರುವುದು ಶ್ಲಾಘನೀಯ. ರಾಜ್ಯ ಸರ್ಕಾರ ಹಾಗೂ ಭಾರತೀಯ ಜೈನ ಸಂಘದಿಂದ ಹಿರೇಹಳ್ಳವನ್ನು ಆರಂಭದಿಂದ ಅಂತ್ಯದವರೆಗೂ ಸ್ವಚ್ಛತೆ ಮಾಡಲಾಗುವುದು. ಇದೇ 17ರಂದು ಸರ್ವೇ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇನೆ. ಹಳ್ಳದ ಮಾಹಿತಿ ಪಡೆದು, ಶೀಘ್ರವೇ ಕೆಲಸ ಆರಂಭಿಸಲಾಗುವುದು. ಕಾಲುವೆಗೆ ನೀರು ಬಂದ ನಂತರ ಕೆರೆಗಳ ಹೂಳೆತ್ತಲಾಗುವುದು ಎಂದು ಹೇಳಿದರು.

ಲೋಕಸಭೆ ಚುನಾವಣಾ ಫಲಿತಾಂಶ ಬಂದ ನಂತರವೂ ರಾಜ್ಯದಲ್ಲಿ ರಾಜಕೀಯವಾಗಿ ಯಾವುದೇ ಬದಲಾವಣೆಯಾಗುವುದಿಲ್ಲ. ಏನಾದರೂ ಆದರೆ ಅದು ದೆಹಲಿಯಲ್ಲಿ ಆಗುತ್ತದೆ. ಬಿಜೆಪಿಯವರು ಅಧಿಕಾರ ಹಿಡಿಯುವ ತಿರುಕನ ಕನಸು ಕಾಣುತ್ತಿದ್ದಾರೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೌರಾಯುಕ್ತ ಆರ್‌.ವಿರುಪಾಕ್ಷಮೂರ್ತಿ, ನಗರಸಭೆ ಸದಸ್ಯರಾದ ಚಂದ್ರು ಮೈಲಾರ, ಕೆ.ಹನುಮೇಶ, ವೀರೇಶ ಹಟ್ಟಿ, ಮುಖಂಡ ಮಲ್ಲಿಕಾರ್ಜುನ ವಲ್ಕಂದಿನ್ನಿ, ಶರಣಬಸವ ನೆಟೆಕಲ್ ಇತರರು ಇದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.