ಬಳ್ಳಾರಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ

ಕೊಟ್ಟೂರು ರೈಲು ಸಂಚಾರ ಆರಂಭಿಸಲು ಶೀಘ್ರ ನಿಯೋಗ •ಸ್ವಸ್ಥ ಸಮಾಜ ನಿರ್ಮಿಸಿ

Team Udayavani, Jun 3, 2019, 11:40 AM IST

3-June-13

ಹಗರಿಬೊಮ್ಮನಹಳ್ಳಿ: ಪಂಚಮಸಾಲಿ ಸಮಾಜದಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್‌ಎಸ್‌ಎಲ್ಸಿ, ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಹಗರಿಬೊಮ್ಮನಹಳ್ಳಿ: ಮಾಹಿತಿ ತಂತ್ರಜ್ಞಾನವನ್ನು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಬಳಕೆ ಮಾಡಿಕೊಳ್ಳಬೇಕಿದೆ ಎಂದು ಸಂಸದ ವೈ.ದೇವೇಂದ್ರಪ್ಪ ತಿಳಿಸಿದರು.

ಪಟ್ಟಣದ ಪಂಚಮಸಾಲಿ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎಷ್ಟೇ ಪ್ರಗತಿ ಸಾಧಿಸಿದರೂ ನಿಮ್ಮ ಪ್ರಯತ್ನಕ್ಕೆ ಪೂರಕವಾಗಿ ಸ್ಪಂದಿಸಿದ ತಂದೆ, ತಾಯಿಯರನ್ನು ಕೊನೆಯವರೆಗೂ ಉತ್ತಮವಾಗಿ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳಿಂದ ದೂರ ಉಳಿದಾಗ ಮಾತ್ರ ಹೆಚ್ಚು ಅಂಕಗಳಿಕೆ ಸಾಧ್ಯ. ಹೊಸಪೇಟೆಯಿಂದ ಪಟ್ಟಣದ ಮಾರ್ಗವಾಗಿ ಕೊಟ್ಟೂರಿಗೆ ರೈಲು ಸಂಚಾರ ಆರಂಭಿಸುವ ಕುರಿತು ಕೇಂದ್ರ ರೈಲ್ವೆ ಸಹಾಯಕ ಸಚಿವ ಸುರೇಶ್‌ ಅಂಗಡಿಯವರ ಬಳಿ ನಿಯೋಗ ತೆರಳಲಾಗುವುದು. ವರ್ಷದೊಳಗೆ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸುವಂತೆ ಮಠಾಧಿಧೀಶರು ಮತ್ತು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗದೊಂದಿಗೆ ಸಚಿವರ ಗಮನ ಸೆಳೆಯಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತಂತೆ ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆ. ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದರು.

ಪಂಚಮಸಾಲಿ ಸಮಾಜದ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ದೇಶದ ಯೋಗ ಪದ್ಧತಿ ವಿಶ್ವದ ಎಲ್ಲೆಡೆಯೂ ಮಾನ್ಯತೆ ಪಡೆದಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಚಾಕಚಕ್ಯತೆಯಿಂದ ಉತ್ತಮ ಸಾಮರ್ಥ್ಯ ಸಾಬೀತುಪಡಿಸಬಹುದು ಎಂದರು.

ಸಮಾಜದ ಹರಿಹರ ಪೀಠದಲ್ಲಿ ಜೂ.21ರಿಂದ ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 15 ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಸಮಾಜದಿಂದ ಒಟ್ಟು 25,057 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಇತರರಿಗೂ ಪ್ರೇರಣೆ ಶಕ್ತಿಯಾಗುವ ಕಾರ್ಯ ಸಮಾಜ ನಿರ್ವಹಿಸಿದೆ ಎಂದರು.

ಸಮಾಜದ ಶಾಖಾಮಠದ ಗುರು ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನಸಿ ಸಿದ್ದೇಶ್‌, ಮಾಜಿ ಶಾಸಕ ನೇಮರಾಜ ನಾಯ್ಕ, ಸಮಾಜದ ರಾಜ್ಯ ಗೌರವಾಧ್ಯಕ್ಷ ಭಾವಿ ಬೆಟ್ಟಪ್ಪ, ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಅಕ್ಕಿ ಶಿವಕುಮಾರ್‌ ಮಾತನಾಡಿದರು. ಇದೇ ವೇಳೆ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕೂ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪತ್ರಿಕೋದ್ಯಮದಲ್ಲಿ ರ್‍ಯಾಂಕ್‌ ಪಡೆದ ಪಂಚಮಸಾಲಿ ಸಮಾಜದ ಹತ್ತಿ ಪ್ರಶಾಂತರನ್ನು ಸನ್ಮಾನಿಸಲಾಯಿತು. ಹರಪನಹಳ್ಳಿ ಜಿ.ಪಂ.ಸದಸ್ಯೆ ಸುಶೀಲಮ್ಮ ದೇವೇಂದ್ರಪ್ಪ, ಅಕ್ಕಿ ತೋಟೇಶ್‌, ಕಲ್ಲೇಶ್‌ ಇಟಿಗಿ, ಮಂಜುನಾಥ ಗೌಡ, ಕೊಟ್ರೇಶ್‌ ಶೆಟ್ಟರ್‌, ಎಂ.ಜಿ.ರವಿ, ಕೆ.ರವಿ, ಮಂಗಳಾ ಬಸವರಾಜ, ಉಮಾ ಬಸವರಾಜ, ಅಕ್ಕಮಹಾದೇವಿ ಜೀವನಗೌಡ, ಪುರಸಭೆ ಸದಸ್ಯರಾದ ಹುಡೇದ್‌ ಗುರುಬಸವರಾಜ, ಬದಾಮಿ ಮೃತ್ಯುಂಜಯ ಇತರರು ಇದ್ದರು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.