2020ರೊಳಗೆ ಮಾಲವಿ ಜಲಾಶಯ ಪೂರ್ಣ

ಉಲುವತ್ತಿ, ಹರೇಗೊಂಡನಹಳ್ಳಿ, ಮಾಲವಿ ವಿವಿಧ ಕಾಮಗಾರಿಗಳ ಭೂಮಿಪೂಜೆ

Team Udayavani, Dec 29, 2019, 6:15 PM IST

29-December-17

ಹಗರಿಬೊಮ್ಮನಹಳ್ಳಿ: ಆಗಸ್ಟ್‌ 2020ರೊಳಗೆ ಮಾಲವಿ ಜಲಾಶಯಕ್ಕೆ ಶಾಶ್ವತ ನೀರು ಕಲ್ಪಿಸುವ ಕಾಮಗಾರಿಯನ್ನು ಪೂರ್ಣಗೊಳಿಸಿ ರೈತರ ಹೊಲಗಳಿಗೆ ನೀರುಣಿಸಲಾಗುವುದು ಎಂದು ಶಾಸಕ ಭೀಮಾನಾಯ್ಕ ತಿಳಿಸಿದರು.

ತಾಲೂಕಿನ ಉಲುವತ್ತಿ ಗ್ರಾಮದ ಸಿಸಿರಸ್ತೆ, ಶಾಲಾ ಕೊಠಡಿ ಸೇರಿದಂತೆ 1.26 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ಸರಕಾರದ ಅವಧಿಯಲ್ಲಿ ಮಾಲವಿ ಜಲಾಶಯಕ್ಕೆ 150 ಕೋಟಿ ರೂ. ಅನುದಾನ ನೀಡುವ ಮೂಲಕ ಮಾಲವಿ ಜಲಾಶಯ ವ್ಯಾಪ್ತಿಯ ರೈತರ ಬಹುದಿನದ ಕನಸನ್ನು ನನಸಾಗಿಸಿದ್ದಾರೆ. ಉಲುವತ್ತಿಯಲ್ಲಿ ಗ್ರಾಪಂ ಕಚೇರಿಯ ಅವಶ್ಯಕತೆಯಿರುವುದನ್ನು ಮನಗಂಡಿದ್ದು ಇನ್ನೊಂದು ವರ್ಷದೊಳಗೆ ಉಲುವತ್ತಿ ಗ್ರಾಮಕ್ಕೆ ಗ್ರಾಮ ಪಂಚಾಯ್ತಿ ಕಚೇರಿ ತಂದು ಮೂಲಭೂತ ಸೌಕರ್ಯಗಳು ಕೂಡಲೇ ಸಿಗಲು ಅನುಕೂಲ ಮಾಡಿಕೊಡಲಾಗುವುದು.

ಗ್ರಾಮದಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿಯಾಗಬೇಕಿದ್ದು, ಮುಂದಿನ ಸಾಲಿನಲ್ಲಿ 1 ಕೋಟಿಗೂ ಅಧಿ ಕ ಅನುದಾನ ನೀಡಿ ಗ್ರಾಮದ ಸಿಸಿ ರಸ್ತೆ, ಚರಂಡಿ, ದೇವಸ್ಥಾನಗಳ ಅಭಿವೃದ್ಧಿಯನ್ನು ಮಾಡಲಾಗುವುದು. 8 ಶಾಲಾ ಕೊಠಡಿ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಮಾರ್ದನಿಸಿದ ಹೌದು ಹುಲಿಯಾ: ಶಾಸಕ ಭೀಮಾನಾಯ್ಕ ಭಾಷಣದುದ್ದಕ್ಕೂ ಉಲುವತ್ತಿ ಗ್ರಾಮದ ಯುವಕರು ಹೌದು ಹುಲಿಯಾ ಎಂದು ಶಹಬ್ಟಾಸ್‌ ಗಿರಿ ನೀಡುತ್ತಿದ್ದು ಕಂಡುಬಂತು. ಗ್ರಾಮಕ್ಕೆ ಕೋಟಿ ರೂ. ಅನುದಾನ ನೀಡುತ್ತೇನೆ ಎಂದಾಕ್ಷಣ ಹೌದು ಹುಲಿಯಾ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕರು ಗ್ರಾಮವನ್ನು ಸತತ ಎರಡು ತಾಸುಗಳ ಕಾಲ ಸುತ್ತಿ ಮಹಿಳೆಯರ ಸಮಸ್ಯೆಗಳನ್ನು ಆಲಿಸಿ ಪೂರಕವಾಗಿ ಸ್ಪಂದಿಸಿದ್ದು ಕಂಡುಬಂತು. ಮಾಜಿ ಸಿಎಂ ಸಿದ್ದರಾಮಯ್ಯನವರ ಹೆಸರು ಶಾಸಕರು ಹೇಳುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತೋಷ ಹರಿದುಬಂತು.

ಭೀಮಾನಾಯ್ಕ ಈ ಗ್ರಾಮ ಚುನಾವಣೆಯಲ್ಲಿ 700 ಮತಗಳನ್ನು
ಲೀಡ್‌ ಕೊಟ್ಟಿದೆ ಎಂದು ಹೇಳಿದಾಕ್ಷಣ ಮುಂದಿನ ಚುನಾವಣೆಯಲ್ಲಿ ಇದಕ್ಕಿಂತ ಹೆಚ್ಚು ಮತಗಳ ಲೀಡ್‌ ಕೊಡುತ್ತೇವೆ ಎಂದು ಹುಮ್ಮಸ್ಸಿನಿಂದ ಹೇಳಿದರು. ಶಾಸಕರ ಆಗಮನದಿಂದ ಉಲುವತ್ತಿ ಗ್ರಾಮಸ್ಥರು ಬಹುಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೂ ಮುನ್ನ ಹರೇಗೊಂಡನಹಳ್ಳಿ, ಮಾಲವಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಸೋಮಲಿಂಗಪ್ಪ ಮಾತನಾಡಿದರು. ಪುರಸಭೆ ಸದಸ್ಯ ಉಲುವತ್ತಿ ಬಾಬುವಲಿ, ತಾಪಂ ಸದಸ್ಯೆ ಶ್ಯಾಮಲಾ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ಮುಟುಗನಹಳ್ಳಿ ಕೊಟ್ರೇಶ್‌, ಕುರಿ ಶಿವಮೂರ್ತಿ, ಡಿಶ್‌ ಮಂಜುನಾಥ, ಮಾಬುಬೇಗ್‌, ಮೈಬುಸಾಬ್‌, ಗೋವಿಂದಪ್ಪ, ವೆಂಕಟೇಶ್‌, ದುರುಗಪ್ಪ, ಹ್ಯಾಳ್ಯಾದ ಚನ್ನಬಸಪ್ಪ, ಚಂದ್ರಶೇಖರ ಇತರರಿದ್ದರು. ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.