ಇಂದ್ರಮ್ಮನ ಕೆರೆ ಒಡೆದರೆ ಹಾನಿ

ಅಳ್ನಾವರ ತಾಲೂಕು ಹುಲಿಕೇರಿಯ 700 ಎಕರೆ ವಿಸ್ತೀರ್ಣದ ಕೆರೆ

Team Udayavani, Aug 12, 2019, 2:42 PM IST

12-Agust-33

ಹಳಿಯಾಳ: ಹುಲಿಕೇರಿ ಇಂದ್ರಮ್ಮನ ಕೆರೆ ಎದುರು ಪ್ರವಾಹದಿಂದ ದೊಡ್ಡ ಹಳ್ಳ ಸೃಷ್ಟಿಯಾಗಿದೆ.

ಹಳಿಯಾಳ: ಹಳ್ಳಗಳಲ್ಲಿ ಪ್ರವಾಹ ಸೃಷ್ಠಿಗೆ ಕಾರಣವಾದ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದ ಇಂದ್ರಮ್ಮನ ಕೆರೆ ಮಳೆರಾಯನ ಬಿಡುವಿನಿಂದ ಸದ್ಯ ಶಾಂತವಾಗಿದೆ. ಅಲ್ಲದೇ ಕೆರೆ ಒಡೆಯುತ್ತೆ ಎನ್ನುವ ಭೀತಿ ದೂರವಾಗಿದೆ.

ಪಟ್ಟಣದಿಂದ ಕೇವಲ 20 ಕಿಮೀ ಅಂತರದಲ್ಲಿರುವ ಅಳ್ನಾವರ ತಾಲೂಕು ಹುಲಿಕೇರಿ ಗ್ರಾಮದ ಪಕ್ಕದಲ್ಲೇ ವಿಶಾಲ ಗುಡ್ಡ-ಬೆಟ್ಟಗಳ ಮಧ್ಯ ಸುಮಾರು 700 ಎಕರೆ ವಿಶಾಲವಾದ ಪ್ರದೇಶದಲ್ಲಿದೆ ಇಂದ್ರಮ್ಮನ ಕೆರೆ. ಇಲ್ಲಿಂದಲೇ 3 ದಿನ ಹಳಿಯಾಳದ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ, ಕೃಷಿ ಸಲಕರಣೆಗಳು, ಪಂಪ್‌ಸೆಟ್‌ಗಳು, ಮನೆಗಳು, ಕೊಟ್ಟಿಗೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಅಪಾರ ನಷ್ಟ ಸಂಭವಿಸಿತ್ತು.

ವಿಶಾಲವಾದ ಕೆರೆ ತನ್ನ ಸಾಮರ್ಥ್ಯಕ್ಕಿಂತ ಅಧಿಕ ನೀರು ಶೇಖರಣೆಯಾಗಿ ತಡೆಗೊಡೆ ಮುಂದಿನ ಸುಮಾರು 50 ಮೀಟರ್‌ಗೂ ಹೆಚ್ಚು ಸುತ್ತಳತೆ ಪ್ರದೇಶವನ್ನು ಕೊಚ್ಚಿಕೊಂಡು ದೊಡ್ಡ ಕಂದಕ ಸೃಷ್ಠಿಸಿ ಅಪಾರ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ಹೊಸ ಹಳ್ಳವೇ ಇಲ್ಲಿ ನಿರ್ಮಾಣವಾಗಿದೆ.

ಇನ್ನೂ ಈ ಕೆರೆಗೆ ಇರುವ ತಡೆಗೊಡೆ ಎದುರಿಗೆ ಮಧ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಅಲ್ಲದೇ ಸಿಮೆಂಟಿನ ಗಟ್ಟಿಮುಟ್ಟಾದ ತಡೆಗೊಡೆಯೊಂದೆ ಈ ನೀರಿಗೆ ಹಾನಿಗೊಳಗಾಗದೆ ಹಿಡಿದಿಟ್ಟುಕೊಂಡಿದೆ. ಆದರೆ ಈ ಕೆರೆ ಮೇಲೆ ಇರುವ ತಡೆಗೊಡೆ 3 ಅಡಿ ಮೇಲ್ಮೈನಲ್ಲಿ ನೀರು ಗೊಡೆ ಒಳಗಿಂದ ಹರಿಯುತ್ತಿದೆ ಆದರೆ, ಕೆಳಭಾಗದಲ್ಲಿ ಬಲಿಷ್ಠ 20 ಮೀಟರ್‌ಗೂ ಅಧಿಕ ದೊಡ್ಡ ಕಾಂಕ್ರಿಟ್ ತಡೆಗೊಡೆ ಇರುವುದು ಕೆರೆ ಒಡೆಯದಂತೆ ತಡೆದಿರುವುದು ಜನರ ಅದೃಷ್ಠ.

ಮಿನಿ ಅಣೆಕಟ್ಟಿನಂತಿರುವ ಈ ಕರೆಯ ಗೇಟಗಳು ಭಾರಿ ಮಳೆಯ ಸಂದರ್ಭದಲ್ಲಿ ತೆರೆಯಲಾಗದೆ ಸಮಸ್ಯೆ ಎದುರಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತ ಕೂಡಲೇ ಸಂಬಂಧಿಸಿದ ಇಲಾಖೆ ಇಂಜೀನಿಯರಗಳು ಹಾಗೂ ನುರಿತ ತಂತ್ರಜ್ಞರಿಂದ ಸಲಹೆ ಪಡೆದು ಸದ್ಯ ಒಂದು ಗೇಟ್ ತೆರೆದಿದೆ. ಪಕ್ಕದಲ್ಲಿ ದೊಡ್ಡ ಟ್ರೆಂಚ್ ತೊಡಿ ನೀರು ಹೊರಬಿಡಲಾಗುತ್ತಿದ್ದು ಕೆರೆಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ.

ಸದ್ಯ ಕೆರೆ ಸುರಕ್ಷಿತವಾಗಿದ್ದು ಒಂದುವೇಳೆ ತಡೆಗೊಡೆ ಒಡೆದರು ಹಳ್ಳಗಳು ತುಂಬಿ ಹರಿಯಲಿವೆ. ದೊಡ್ಡ ಪ್ರಮಾಣದ ಹಾನಿ ಸಂಭವಿಸುವುದಿಲ್ಲ ಎಂದು ಅನುಭವಿ ರೈತರು ಹೇಳುತ್ತಾರೆ. ಆದರೂ ಕೂಡ ಕೆರೆಯ ತಡೆಗೊಡೆಗೆ ಆಗಿರುವ ಹಾನಿ ಸರಿಪಡಿಸುವವರೆಗೆ ನದಿ ಪಾತ್ರದ ಜನರು ಕಟ್ಟೆಚ್ಚರದಿಂದ ಇರಲು ತಾಲೂಕಾಡಳಿತ ಸೂಚಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.