ಶೋಷಿತ ಸಮಾಜಗಳಿಗೆ ಶಿಕ್ಷಣವೇ ಪ್ರಬಲ ಅಸ್ತ್ರ: ಸ್ವಾಮೀಜಿ

ಶರಣರ-ಆದರ್ಶ ವ್ಯಕ್ತಿಗಳ ಪುತ್ಥಳಿಗಳನ್ನು ನಗರ, ಗ್ರಾಮಗಳ ಪ್ರಮುಖ ವೃತ್ತಗಳಲ್ಲಿ ಪ್ರತಿಷ್ಠಾಪಿಸಿ

Team Udayavani, May 10, 2019, 4:28 PM IST

10-May-31

ಹರಪನಹಳ್ಳಿ: ಕಲ್ಲಹಳ್ಳಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮವನ್ನು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಉದ್ಘಾಟಿಸಿದರು.

ಹರಪನಹಳ್ಳಿ: ಪ್ರಸಕ್ತ ದಿನಮಾನಗಳಲ್ಲಿ ಶಿಕ್ಷಣದಿಂದ ಮಾತ್ರ ಸಾಮಾಜಿಕವಾಗಿ ಮುಂದುವರೆಯಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಗಂಗಾಮತ ಸಮಾಜವನ್ನು ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಮಾಡಬೇಕಿದೆ. ಶೋಷಿತ ಸಮಾಜಗಳಿಗೆ ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ ಎಂದು ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಯು.ಕಲ್ಲಹಳ್ಳಿ ಗ್ರಾಮದಲ್ಲಿ ನೂತನ ಗಂಗಾಪರಮೇಶ್ವರಿದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಬಸವಣ್ಣ, ಅಂಬಿಗರ ಚೌಡಯ್ಯ, ಶಿಶುನಾಳ ಶರೀಫ, ಅಕ್ಕಮಹಾದೇವಿ ಅವರಂತಹ ಆದರ್ಶ ವ್ಯಕ್ತಿಗಳ ಮೂರ್ತಿಗಳನ್ನು ನಗರ, ಗ್ರಾಮಗಳ ಪ್ರಮುಖ ವೃತ್ತಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು. ಇದರಿಂದ ಅವರ ಆದರ್ಶ ತತ್ವಗಳು, ಸಾಮಾಜಿಕ ಹಾಗೂ ಸಮಾನತೆಯ ಹೋರಾಟ, ತ್ಯಾಗ ಬಲಿದಾನಗಳು ಸ್ಮರಣೆಗೊಂಡು ನಮಗೆ ದಾರಿದೀಪ ಆಗಲಿದೆ ಎಂದರು.

ದೇವಸ್ಥಾನಗಳು ಸೋಮಾರಿಗಳ ಅಡ್ಡೆಯಾಗಬಾರದು. ಬದಲಾಗಿ ಶಿವಾನುಭವ, ತಾತ್ವಿಕ ಚಿಂತನೆ, ದಾಸೋಹಗಳನ್ನು ಬಿತ್ತುವ ಕೇಂದ್ರಗಳಾಗಬೇಕು. ದೊಡ್ಡ ಸಮುದಾಯಗಳೊಂದಿಗೆ ಅನ್ಯೋನ್ಯ ಸಂಬಂಧ ಹೊಂದಿರುವ ಬೆಸ್ತ ಸಮುದಾಯ ಸಾಮಾಜದಲ್ಲಿ ಘನತೆಯನ್ನು ಕಾಪಾಡಿಕೊಂಡು ಬಂದಿದೆ. ಎಲ್ಲಾ ಜಾತಿ, ಧರ್ಮದವರೊಂದಿಗೆ ಬೇರೆತು ಬದುಕುವುದೇ ನಿಜವಾದ ತಾತ್ವಿಕ ಆದರ್ಶ ಜೀವನ ಎಂದರು.

ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಬಿ.ಕೆ ಮಂಜುನಾಥ್‌ ಮಾತನಾಡಿ, ದೇವಸ್ಥಾನ ಕಟ್ಟುವ ನೆಪದಲ್ಲಿ ಮುಂದಾಳುಗಳು ರಾಜಕೀಯವಾಗಿ ಬಳಸಿಕೊಳ್ಳುವ ಆರೋಪಗಳು ನಡುವೆ ಸಮುದಾಯದಲ್ಲಿ ಒಡಕು ಮೂಡುತ್ತಿದೆ. ಈ ನಡುವೆ ಅನ್ಯ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಅವರ ಸಹಕಾರದೊಂದಿಗೆ ದೇವಸ್ಥಾನ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಂಗವಾಗಿ ಕಾಲಾಕರ್ಷಣೆ ಹೋಮ, ನೇತ್ರನ್ಮಲನ, ಮೂಲ ವಿಗ್ರಹ ಪ್ರತಿಷ್ಠಾಪನೆ, ಮಹಾಪೂರ್ಣಾಹುತಿ ಹೋಮಗಳು ನಡೆದವು. ಶಾಂತಾಭೀಷ್ಮ ಸ್ವಾಮೀಜಿ ಅವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ, ನಂದಿಕೋಲು, ಕುಂಭಮೇಳ, ಡೊಳ್ಳು, ಶಿವ ನರ್ತನಗಳ ಮೂಲಕ ಮೆರವಣಿಗೆ ಮಾಡಲಾಯಿತು.

ತಾಪಂ ಸದಸ್ಯ ಪಾಟೀಲ್ ಕೆಂಚನಗೌಡ, ಗಿರಿಜಮ್ಮ ಮಹೇಶಪ್ಪ, ಗ್ರಾಪಂ ಅಧ್ಯಕ್ಷೆ ಸುಧಾ ಭೈರೇಗೌಡ, ಉಪಾಧ್ಯಕ್ಷ ರಾಮನಾಯ್ಕ, ಉಚ್ಚಂಗಿದುರ್ಗ ಬೆಸ್ತರ ಗುಳದಳ್ಳಿ ಮಂಜಪ್ಪ, ಮುಖಂಡರಾದ ಕೆ.ಪಿ ಚಂದ್ರಶೇಖರ್‌, ಮೋರಗೆರೆ ಭೀಮಣ್ಣ ಮುಖಂಡರಾದ ಚಟ್ನಿಹಳ್ಳಿ ರಾಜಪ್ಪ, ಬಿ.ರಾಜಕುಮಾರ್‌, ಕೆ.ನಾಗಾರಾಜ್‌, ಮಹಾಂತೇಶ್‌ ನಿಟ್ಟೂರು, ಕೆ.ಪರಶುರಾಮ, ಮೈಲಪ್ಪ, ಫಣಿಯಾಪುರ ನಿಂಗರಾಜ್‌, ಚಂದ್ರನಾಯ್ಕ, ಕೆ.ಪಿ.ಮಹೇಶ್ವರ, ವೆಂಕಟೇಶಪ್ಪ, ಅಂಜಿನಪ್ಪ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.