ಮೂಲ ಸೌಕರ್ಯಕ್ಕಾಗಿ 4.5 ಕೋಟಿ ರೂ. ವೆಚ್ಚ; ಎಚ್‌.ಡಿ.ರೇವಣ್ಣ

ಲೋಪದೋಷ ಕಂಡು ಹಿಡಿಯಲು ದುರ್ಬಿನುಹಿಡಿದು ಹುಡುಕಬೇಕಾಗಿದೆ.

Team Udayavani, Jun 24, 2022, 5:57 PM IST

ಮೂಲ ಸೌಕರ್ಯಕ್ಕಾಗಿ 4.5 ಕೋಟಿ ರೂ. ವೆಚ್ಚ; ಎಚ್‌.ಡಿ.ರೇವಣ್ಣ

ಹೊಳೆನರಸೀಪುರ: ಪಟ್ಟಣದ ಪುರಸಭೆಯ ಎರಡನೇ ವಾರ್ಡಿನಿಂದ ಹತ್ತೂಂಬತ್ತನೆ ವಾರ್ಡಿನವರೆಗೆ ಇರುವ ಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ 4.5 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ನುಡಿದರು.

ಪಟ್ಟಣದ ಪುರಸಭೆ ಮುಂಭಾಗದಲ್ಲಿಏರ್ಪಡಿಸಿದ್ದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಶಂಕು ಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಈಗಾಗಲೇ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿಗಾಗಿ 65 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದೆ. ಪಟ್ಟಣದಲ್ಲಿ ಕಳೆದ ಮೂವತ್ತ ವರ್ಷಗಳ ಹಿಂದೆ ಒಳಚರಂಡಿ ನಿರ್ಮಿಸಿತ್ತಾದರೂ ಸಹ ಬಹಳ ವರ್ಷಗಳಾಗಿರುವದರಿಂದ ಬಹಳಷ್ಟು ಕಡೆ ದುರಸ್ತಿಗೊಳಿಸಬೇಕಿದೆ.

ಸಾರ್ವಜನಿಕರು ಮತ್ತು ನಿವಾಸಿಗಳಿಗೆ ಭಾರೀ ತೊಂದರೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವ ಸಲುವಾಗಿ 95 ಕೋಟಿ ರೂ.ವೆಚ್ಚದಲ್ಲಿ ಹೊಸದಾಗಿ ಒಳಚರಂಡಿ ಕಾಮಗಾರಿ ನಡೆಸಿ, ಮುಂದಿನ ಐವತ್ತು ವರ್ಷಗಳಿಗೆ ಬೇಕಾಗುವ ಸವಲತ್ತು ನೀಡಲು ಉದ್ದೇಶಿಸಲಾಗಿದೆ. ಈ ಕಾಮಗಾರಿ ಈಗಾಗಲೆ ಆರಂಭವಾಗಿದೆ ಅದು ಸದ್ಯದಲ್ಲೆ ಪೂರ್ಣಗೊಳಿಸಿ ಒಳಚರಂಡಿ ಸಮಸ್ಯಗೆ ಶಾಶ್ವತ ಪರಿಹಾರ ನೀಡಲು ಉದ್ದೇಶಿಸಲಾಗಿದೆ ಎಂದರು. ಪ್ರಸ್ತುತ ಹೊಳೆ ಬೀದಿಯನ್ನು ಕಾಂಕ್ರಿಟೀಕರಣ ಮಾಡಲು 1.25 ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೇರವೇರಿಸಲಾಗಿದೆ ಎಂದರು.

ಗುಣಮಟ್ಟದಲ್ಲೂ ರಾಜಿಯಿಲ್ಲ: ಕಾರ್ಯಕ್ರಮದಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಜೆಡಿಎಸ್‌ ನಾಯಕಿ ಭವಾನಿರೇವಣ್ಣ ಮಾತನಾಡಿ, ರೇವಣ್ಣ ಸಾಹೇಬರು ಮಾಡಿರುವ ಅಭಿವೃದ್ಧಿ ಕಾಮಗಾರಿಗಳು ಕೇವಲ ಜೆಡಿಎಸ್‌ನವರ ಅನುಭವಿಸುತ್ತಿಲ್ಲ, ತಾಲೂಕಿನ ಎಲ್ಲ ಜನರು ಅನುಭವಿಸುತ್ತಿದ್ದಾರೆ ಎಂಬು  ದನ್ನು ನಮ್ಮನ್ನು ಟೀಕಿಸುವವರು ಅರಿಯಬೇಕೆಂದರು.

ನಮ್ಮ ಕುಟುಂಬ ಜಿಲ್ಲೆಯ ಅಭಿವೃದ್ಧಿ ಮಾಡಿರುವ ಅಭಿವೃದ್ಧಿ ಒಂದು ಪಕ್ಷದ ಜನರಿಗಾಗಿ ಆಲ್ಲ. ನಾವೀಗ ಮಾಡಿರುವ ಅಭಿವೃದ್ಧಿ ಗಳಲ್ಲಿ ಯಾವೊಂದು ನ್ಯೂನತೆಗಳು ದೊರಕಲು ಸಾಧ್ಯವೇ ಇಲ್ಲ. ಲೋಪದೋಷ ಕಂಡು ಹಿಡಿಯಲು ದುರ್ಬಿನುಹಿಡಿದು ಹುಡುಕಬೇಕಾಗಿದೆ. ಆದರೂ ನಮ್ಮನ್ನು ಟೀಕಿಸುವವರಿದ್ದಾರೆ ಎಂದರು.

ನಾಮಫಲಕ ಹಾಕಿಸಿಕೊಳ್ಳುವ ಚಟ ಇಲ್ಲ: ಜೆಡಿಎಸ್‌ ಪಕ್ಷ ಜಿಲ್ಲೆ ಮತ್ತು ತಾಲೂಕಿಗೆ ಮಾಡಿರುವ ಕಾಮಗಾರಿ ಬಗ್ಗೆ ಸಾಲುಸಾಲಾಗಿ ತಿಳಿಸಿ ನಾವು ಮಾಡಿರುವ ಅಭಿವೃದ್ಧಿಗಳಿಗೆ ನಮ್ಮಗಳ ನಾಮಫ‌ಲಕ ಹಾಕಿದ್ದೇ ಆದಲ್ಲಿ ಜಿಲ್ಲೆಯಲ್ಲಿ ಬೇರೆಯವರು ನಾಮಫಲಕ ಹಾಕಲು ಸ್ಥಳವೇ ದೊರೆಯಲ್ಲ. ನಾಮಫಲಕ ಹಾಕಿಸಿಕೊಳ್ಳುವ ಚಟ ನಮ್ಮ ಕುಟುಂಬಕ್ಕೆ ಇಲ್ಲ ಎಂದು ತಿಳಿಸಿ, ನಮ್ಮನ್ನು ಟೀಕಿಸುವವರು ಆರ್ಥ ಮಾಡಿಕೊಳ್ಳಬೇಕು. ಜೊತೆಗೆ ನಾವು ಮಾಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಸುಣ್ಣಬಣ್ಣ ಮಾಡಿಸಲು ಸಹ ಕಷ್ಟವಾಗಲಿದೆ ಎಂದು ಭವಾನಿ ರೇವಣ್ಣ ಪರೋಕ್ಷವಾಗಿ ಸರ್ಕಾರಕ್ಕೆ ಟಾಂಗ್‌ ಕೊಟ್ಟರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಸುಧಾನಳಿನಿ ಅವರು ಮಾತನಾಡಿ, ಪುರಸಭೆಯಲ್ಲಿ ಅನೇಕ ಕಾಮಗಾರಿ ಮಾಡಿಸಬೇಕಿದ್ದು ಅದಕ್ಕೆ ತಾವು ಸರ್ಕಾರದಿಂದ ಅನುಧಾನ ತಂದುಕೊಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ತ್ರೀಲೋಚನಾ, ಮುಖ್ಯಾಧಿಕಾರಿ ಶಾಂತಲಾ ಹಾಗೂ ಪುರಸಭೆ ಸದಸ್ಯರುಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಆರು ಡಯಾಲಿಸಿಸ್‌ ಯಂತ್ರ ಅಳವಡಿಕೆ: ಭವಾನಿ ರೇವಣ್ಣ
ನಾವುಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಳವಡಿ ಸಿರುವ ಯಂತ್ರಗಳು ಜಿಲ್ಲೆಯಲ್ಲಿ ಯಾವ ಆಸ್ಪತ್ರೆಯಲ್ಲೂ ಇಲ್ಲ ಎಂದು ಉದಾಹರಣೆ ನೀಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಆಳವಡಿಸಿರುವ ಸಿಟಿ ಸ್ಕ್ಯಾನಿಂಗ್‌ ಜಿಲ್ಲೆಯ ಯಾವೊಂದು ಸರ್ಕಾರಿ ಆಸ್ಪತ್ರೆಯಲ್ಲೂ ಇಲ್ಲ. ಇಂತಹ ಸವಲತ್ತು ತಂದಿರುವುದು ಕೇವಲ ಜೆಡಿಎಸ್‌ನವರಿಗಾಗಿ ಆಲ್ಲ, ಇನ್ನು ಡಯಾಲಿಸಿಸ್‌ ಗಾಗಿ ಈಗಾಗಲೇ ಅರು ಯಂತ್ರಗಳನ್ನು ಆಳವಡಿಸಿದ್ದು ನಿತ್ಯ ಹತ್ತಾರು ಮಂದಿ ಡಯಾಲಿಸಿಸ್‌ ಒಳಗಾಗಿ ತಮ್ಮ ಅರೋಗ್ಯ ಕಾಪಾಡಿಕೊಳ್ಳುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.