ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಕಿರುಕುಳ ಆರೋಪ


Team Udayavani, Apr 20, 2023, 4:23 PM IST

ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಕಿರುಕುಳ ಆರೋಪ

ಹಾಸನ: ಚುನಾವಣೆಯಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರಿಗೆ ಹಂಚಲು ಅಕ್ರ ಮವಾಗಿ ಹಣ, ಉಡುಗೊರೆ ಸಾಗಿಸುವುದನ್ನು ತಡೆಯಲು ಚುನಾವಣಾ ಆಯೋಗವು ಜಾರಿಗೊಳಿ ಸಿರುವ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದೆ.

ನೀತಿ ಸಂಹಿತೆಯ ಕಟ್ಟುನಿಟ್ಟಿನ ಪಾಲನೆಗಾಗಿ ಅಯಾಯ ಜಿಲ್ಲಾಡಳಿತಗಳು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿವೆ. ಆ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಅಂತಹ ಸ್ಪಷ್ಟ ದೂರೊಂದು ಚುನಾವಣಾ ಆಯೋಗಕ್ಕೆ ಜಿಲ್ಲೆಯಿಂದ ರವಾನೆಯಾಗಿದ್ದು, ಕಿರುಕುಳ ನೀಡಿದ ಚೆಕ್‌ಪೋಸ್ಟ್‌ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಆಗ್ರಹಿಸಿ ದ್ದಾರೆ.

ದೂರು ದಾಖಲು: ಹೊಳೆನರಸೀಪುರ ಪಟ್ಟಣದ ರಾಘವೇಂದ್ರ ಮಠದ ಎದುರು, ಕೋಟೆ ಮುಖ್ಯ ರಸ್ತೆ ನಿವಾಸಿ ಎಸ್‌.ವಿ.ಶ್ರೇಯಸ್‌ ಆಚಾರ್‌ ಎಂಬವರು ಮಂಗಳವಾರ ರಾತ್ರಿ 11.10ರ ವೇಳ ಗೆ ಮೈಸೂರಿನಿಂದ ಹೊಳೆನರಸೀಪುರಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ದೊಡ್ಡಹಳ್ಳಿ ಚೆಕ್‌ಪೋಸ್ಟ್‌ನ ಸಿಬ್ಬಂದಿ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಹೊಳೆನರಸೀಪುರ ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಪಿಡಿಒ ಅಂಜನಪ್ಪ ವಿರುದ್ಧ ದೂರು: ಶ್ರೇಯಸ್‌ ಆಚಾರ್‌ ಅವರ ಕಾರನ್ನು ತಡೆದು ತಪಾಸಣೆ ಮಾಡಿದ ಚೆಕ್‌ಪೋಸ್ಟ್‌ ಸಿಬ್ಬಂದಿ 20 ಸಾವಿರ ರೂ. ನಗದು ಇರಿಸಿಕೊಂಡಿದ್ದ ಶ್ರೇಯಸ್‌ ಆಚಾರ್‌ ಅವರನ್ನು ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗವು ನಿಗದಿಪಡಿಸಿ ಮಿತಿಗಿಂತ ಕಡಿಮೆ ಮೊತ್ತ ತಮ್ಮ ಬಳಿ ಇರುವ ಬಗ್ಗೆ ಅಚಾರ್‌ ಅವರು ವಿವರಣೆ ನೀಡಿದರೂ ಚೆಕ್‌ಪೋಸ್ಟ್‌ ಸಿಬ್ಬಂದಿ ಅವರ ಕಾರಿನ ಡಿಕ್ಕಿ ತೆಗೆದು ಬ್ಯಾಗ್‌ ತಪಾಸಣೆ ನಡೆಸಿ ಅನುಚಿತವಾಗಿ ವರ್ತಿಸಿದ್ದಾರೆ. ಚೆಕ್‌ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಅಂಜನಪ್ಪ ಅವರು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಸಿಆರ್‌ಪಿಎಫ್ ಯೋಧರನ್ನೂ ಬಳಸಿಕೊಂಡು ಕಿರುಕುಳ ನೀಡಿದರು.ಅಂಜನಪ್ಪ ಅವರು ಬಹುಶಃ ಪಾನಮತ್ತ ರಾಗಿದ್ದರು ಎಂದು ದೂರಿನಲ್ಲಿ ವಿವರ ನೀಡಿದ್ದಾರೆ.

ತೀವ್ರ ತೊಂದರೆ ಅನುಭವಿಸಿದ್ದೇವೆ: ಅಂಜನಪ್ಪ ಅವರು ಸುಮಾರು 10 ನಿಮಿಷಗಳ ಕಾಲ ಕಾರಿನ ತಪಾಸಣೆ ಮತ್ತು ನಿಂದನೆ ಮಾಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಮತ್ತೂಬ್ಬ ಚೆಕ್‌ಪೋಸ್ಟ್‌ನ ಮತ್ತೂಬ್ಬ ಉಸ್ತುವಾರಿಯಾಗಿದ್ದ ಪಿಡಿಒ ಸಂತೋಷ್‌ ಅವರೂ ನನ್ನನ್ನು ಮತ್ತು ನನ್ನ ಕಾರಿನ ಚಾಲಕ ಹೇಮರಾಜು ಅವರನ್ನೂ ನಿಂದಿಸಿ ಪೊಲೀಸರು ಮತ್ತು ಸಿಆರ್‌ ಪಿಎಫ್ ಸಿಬ್ಬಂದಿ ಹಾದಿ ತಪ್ಪಿಸಿ ತಮ್ಮ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿತಾವನೆ ನಡೆಸಿದರು. ಚೆಕ್‌ಪೋಸ್ಟ್‌ ಸಿಬ್ಬಂದಿ ನಡವಳಿಕೆಯಿಂದ ನಾವು ಕಿರು ಕುಳ ಅನುಭವಿಸಿದ್ದೇವೆ ಎಂದು ದೂರಿನಲ್ಲಿ ಅಳಲು ತೋಡಿಕೊಂಡಿದ್ದಾರೆ.

ವೀಡಿಯೋ, ಸಿಸಿ ಟಿವಿ ತುಣುಕುಗಳನ್ನು ಬಳಸಿ ತನಿಖೆ ನಡೆಸಬೇಕು. ನನನ್ನು ವಿಚಾರಣೆಗೆ ಕರೆದರೆ ಸಾಕ್ಷ್ಯಗಳನ್ನು ಒದಗಿಸುವುದಾಗಿಯೂ ಹೇಳಿರುವ ಶ್ರೇಯಸ್‌ ಆಚಾರ್‌ ಅವರು ಅನುಚಿತವಾಗಿ ವರ್ತಿಸಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ನನಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.