ರಾಜ್ಯದಲ್ಲಿ ಅಮಿಶಾ, ಮೋದಿ ತಂತ್ರಗಾರಿಕೆ ನಡೆಯಲ್ಲ


Team Udayavani, Apr 30, 2018, 2:58 PM IST

Bluru flex removal 3.jpg

ಹಾಸನ: ದಕ್ಷಿಣ ಹಾಗೂ ಉತ್ತರ ಭಾರತದ ರಾಜಕಾರಣದಲ್ಲಿ ಭಾರೀ ವ್ಯತ್ಯಾಸವಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ತಂತ್ರಗಾರಿಕೆ ಕರ್ನಾಟಕದಲ್ಲಿ ಫ‌ಲಿಸುವುದಿಲ್ಲ. ಕರ್ನಾಟಕದಲ್ಲಂತೂ  ಬಿಜೆಪಿ ಅಧಿಕಾರ ಹಿಡಿಯುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದ ಅರಳೇಪೇಟೆ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳು ಎನ್‌ಡಿಎಗೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿವೆ. ಕೇರಳದಲ್ಲೂ ಬಿಜೆಪಿಯ ಯಾವ ತಂತ್ರ ಫ‌ಲಿಸುವುದಿಲ್ಲ. ಹಾಗಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ರಾಜಕೀಯ ನೆಲೆ ಇಲ್ಲ ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 132 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರ ನಡೆಸಲಿದೆ. ರಾಜ್ಯದ ಜನರು ಜೆಡಿಎಸ್‌ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಆರೋಗ್ಯ ಭಾಗ್ಯ: ರಾಜ್ಯದಲ್ಲಿ 3 ವರ್ಷ ಬರಗಾಲ ಇದ್ದರೂ  ಸರ್ಕಾರ ವಿದ್ಯುತ್‌ ಕೊರತೆಯಾಗದಂತೆ ನೋಡಿಕೊಂಡಿದೆ. ಈಗಾಗಲೇ ಪಾವಗಡದಲ್ಲಿ 13 ಸಾವಿರ ಎಕರೆಯಲ್ಲಿ ವಿಶ್ವದಲ್ಲೇ ದೊಡ್ಡ ಸೋಲಾರ್‌ ಪಾರ್ಕ್‌ ಸ್ಥಾಪಿಸಿ ದಿನದ 24 ಗಂಟೆಯೂ ವಿದ್ಯುತ್‌ ಕೊಡಲು ಸರ್ಕಾರ ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ 4 ಕೋಟಿ ಜನರಿಗೂ ಉಚಿತವಾಗಿ ಆರೋಗ್ಯದ ಭಾಗ್ಯ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಬಿ. ಶಿವರಾಂ ಮಾತನಾಡಿ, ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆಯಾದ ಪರಿಣಾಮ ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿದೆ. ಏಳು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಬೇಕೆಂದರೆ ಹೊಳೆನರಸೀಪುರದಲ್ಲಿ ಪ್ರಬಲ ಸ್ಪರ್ಧಿ ಕಣಕ್ಕಿಳಿಸಬೇಕೆಂಬ ಮನವಿಗೆ ವರಿಷ್ಠರಿಂದ ಮನ್ನಣೆ ಸಿಕ್ಕಿದೆ ಎಂದರು.

ಹಾಸನ ಅಭ್ಯರ್ಥಿ ಎಚ್‌.ಕೆ. ಮಹೇಶ್‌ ಮಾತನಾಡಿ, ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ನಾನು ಸೋಲು ಅನುಭವಿಸಬೇಕಾಯಿತು. ಹಣದ ಬಲದಲ್ಲಿ ಜೆಡಿಎಸ್‌ ಗೆಲುವು ಪಡೆದಿದೆ. ಈ ಬಾರಿ ನನಗೆ ಅವಕಾಶ ಕೊಡುವ ಮೂಲಕ ಅಭಿವೃದ್ಧಿಗೆ ಜನರು ಸಹಕರಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಾವಗಲ್‌ ಮಂಜುನಾಥ್‌, ಹುಡಾ ಅಧ್ಯಕ್ಷ ಎಚ್‌.ಆರ್‌.ಕೃಷ್ಣಕುಮಾರ್‌, ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ಎಂ.ಆನಂದ್‌, ರಾಜ್ಯಸಭಾ ಮಾಜಿ ಸದಸ್ಯ ಎಚ್‌.ಕೆ. ಜವರೇಗೌಡ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಮ್ಮಿಗೆ ಮೋಹನ್‌, ಮಾಜಿ ಶಾಸಕ ಎಚ್‌.ಎಂ. ವಿಶ್ವನಾಥ್‌, ಜಿ.ಟಿ. ಕುಮಾರ್‌, ನಗರಸಭೆ ಸದಸ್ಯರಾದ ರಾಜೇಶ್‌, ಯಶವಂತ್‌, ವನಮಾಲಾ, ತಾರಾಚಂದನ್‌,  ಕೆಲವತ್ತಿ ಸೋಮಸೇಖರ್‌, ಮದುಸೀಧನ್‌, ರಾಜೇಶ್‌, ರಾಘವೇಂದ್ರ, ತಮ್ಲಾಪುರ ಗಣೇಶ್‌ ಇದ್ದರು.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.